AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Motors: ಏಪ್ರಿಲ್ 23ರಿಂದ ಅನ್ವಯಿಸುವಂತೆ ಟಾಟಾ ಮೋಟಾರ್ಸ್ ಪ್ರಯಾಣಿಕರ ವಾಹನಗಳ ಬೆಲೆ ಹೆಚ್ಚಳ

ಟಾಟಾ ಮೋಟಾರ್ಸ್​ನಿಂದ ಏಪ್ರಿಲ್​ 23ನೇ ತಾರೀಕಿನ ಶನಿವಾರದಿಂದ ಅನ್ವಯ ಆಗುವಂತೆ ಪ್ರಯಾಣಿಕರ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

Tata Motors: ಏಪ್ರಿಲ್ 23ರಿಂದ ಅನ್ವಯಿಸುವಂತೆ ಟಾಟಾ ಮೋಟಾರ್ಸ್ ಪ್ರಯಾಣಿಕರ ವಾಹನಗಳ ಬೆಲೆ ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 23, 2022 | 4:12 PM

Share

ಭಾರತದ ಪ್ರಮುಖ ವಾಹನ ತಯಾರಕ ಕಂಪೆನಿಯಾದ ಟಾಟಾ ಮೋಟಾರ್ಸ್​ನಿಂದ (Tata Motors) ಏಪ್ರಿಲ್ 23ನೇ ತಾರೀಕಿನ ಶನಿವಾರದಂದು ತನ್ನ ಪ್ರಯಾಣಿಕ ವಾಹನಗಳಾದ್ಯಂತ ಬೆಲೆ ಹೆಚ್ಚಳವನ್ನು ಘೋಷಣೆ ಮಾಡಲಾಗಿದೆ. ಇನ್​ಪುಟ್ ವೆಚ್ಚದಲ್ಲಿನ ಏರಿಕೆಯನ್ನು ಈಗಿನ ಬೆಲೆ ಹೆಚ್ಚಳವು ಭಾಗಶಃ ಸರಿದೂಗಿಸುತ್ತದೆ. “ಇಂದು (ಏಪ್ರಿಲ್ 23, 2022) ಜಾರಿಗೆ ಬರಲಿದೆ, ವೇರಿಯಂಟ್ ಮತ್ತು ಮಾಡೆಲ್ ಅನ್ನು ಅವಲಂಬಿಸಿ ವೇಯ್ಟೆಡ್ ಸರಾಸರಿ ಹೆಚ್ಚಳವು ಶೇ 1.1ರಷ್ಟು ಆಗಿದೆ,” ಎಂದು ಟಾಟಾ ಮೋಟಾರ್ಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮುಂಬೈ ಮೂಲದ ವಾಹನ ತಯಾರಕ ಕಂಪೆನಿಯಾದ ಟಾಟಾದಿಂದ ದೇಶೀಯ ಮಾರುಕಟ್ಟೆಯಲ್ಲಿ ಟಿಯಾಗೊ, ಪಂಚ್ ಮತ್ತು ಹ್ಯಾರಿಯರ್‌ನಂತಹ ವಿವಿಧ ಮಾದರಿಗಳನ್ನು ಮಾರಾಟ ಮಾಡಲಾಗುತ್ತದೆ. ಕಳೆದ ಕೆಲವು ಸಮಯದಿಂದ ಉಕ್ಕು ಸೇರಿದಂತೆ ವಿವಿಧ ಲೋಹಗಳ ಬೆಲೆಯಲ್ಲಿ ಏರಿಕೆ ಆಗುತ್ತಾ ಬಂದಿದೆ. ಈ ಕಾರಣಕ್ಕೆ ಕಳೆದ ಒಂದು ವರ್ಷದಲ್ಲಿ ವಿವಿಧ ಕಾರು ತಯಾರಿಸುವ ಕಂಪೆನಿಗಳು ಹಲವು ಬಾರಿ ಬೆಲೆ ಏರಿಕೆಯನ್ನು ಮಾಡಿವೆ. ಇದೀಗ ಟಾಟಾ ಮೋಟಾರ್ಸ್​ನಿಂದ ಕೂಡ ದರ ಹೆಚ್ಚಳವು ಜಾರಿಗೆ ಬಂದಿದೆ.

ಇತ್ತೀಚೆಗೆ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್​ನಿಂದ ಅದರ ಎಲ್ಲ ಶ್ರೇಣಿಯ ಕಾರುಗಳ ಬೆಲೆಯಲ್ಲೂ ಹೆಚ್ಚಳ ಮಾಡಲಾಗಿದೆ. ಈ ಸಂದರ್ಭದಲ್ಲಿ ದೇಶದ ಪ್ರಮುಖ ಕಾರು ತಯಾರಿಕೆ ಕಂಪೆನಿಯಾದ ಮಾರುತಿ ಸುಜುಕಿ ನೀಡಿದ ಕಾರಣ ಸಹ ಕಚ್ಚಾ ವಸ್ತುಗಳ ಬೆಲೆ ಏರಿಕೆ ಎಂಬುದೇ ಆಗಿತ್ತು. ಬೆಲೆ ಹೆಚ್ಚಳದ ಹೊರೆಯ ಸ್ವಲ್ಪ ಭಾಗವನ್ನು ಮಾತ್ರ ಗ್ರಾಹಕರಿಗೆ ವರ್ಗಾವಣೆ ಮಾಡಲಾಗುವುದು ಎಂದು ಎಂಎಸ್​ಐ ತಿಳಿಸಿತ್ತು.

ಇದನ್ನೂ ಓದಿ: Tata Passenger Vehicle Loan : ಪ್ರಯಾಣಿಕರ ವಾಹನ ಸಾಲಕ್ಕೆ ಬಂಧನ್ ಬ್ಯಾಂಕ್​ ಜತೆ ಟಾಟಾ ಮೋಟಾರ್ಸ್ ಒಪ್ಪಂದ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ