AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

N Chandrasekharan: ಮುಂಬೈನಲ್ಲಿ 98 ಕೋಟಿ ರೂಪಾಯಿಗೆ ಡೂಪ್ಲೆಕ್ಸ್ ಖರೀದಿಸಿದ ಟಾಟಾ ಸಮೂಹದ ಅಧ್ಯಕ್ಷ ಚಂದ್ರಶೇಖರನ್

ಟಾಟಾ ಸನ್ಸ್ ಅಧ್ಯಕ್ಷರಾದ ಎನ್. ಚಂದ್ರಶೇಖರನ್ ಅವರು ಮುಂಬೈನಲ್ಲಿ 98 ಕೋಟಿ ರೂಪಾಯಿಗೆ 6000 ಚದರಡಿಯ ಡೂಪ್ಲೆಕ್ಸ್ ಖರೀದಿಸಿದ್ದಾರೆ.

N Chandrasekharan: ಮುಂಬೈನಲ್ಲಿ 98 ಕೋಟಿ ರೂಪಾಯಿಗೆ ಡೂಪ್ಲೆಕ್ಸ್ ಖರೀದಿಸಿದ ಟಾಟಾ ಸಮೂಹದ ಅಧ್ಯಕ್ಷ ಚಂದ್ರಶೇಖರನ್
ಎನ್​. ಚಂದ್ರಶೇಖರನ್
TV9 Web
| Edited By: |

Updated on: May 08, 2022 | 7:59 AM

Share

ಟಾಟಾ ಸಮೂಹದ ಅಧ್ಯಕ್ಷರಾದ ಎನ್​.ಚಂದ್ರಶೇಖರನ್ (N Chandrasekharan) ಅವರು ಮುಂಬೈನ ಪೆಡರ್ ರಸ್ತೆ ಪ್ರದೇಶದಲ್ಲಿ 98 ಕೋಟಿ ರೂಪಾಯಿಗೆ ಡೂಪ್ಲೆಕ್ಸ್ ಖರೀದಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಚಂದ್ರಶೇಖರನ್ ಮತ್ತು ಅವರ ಕುಟುಂಬ ಕಳೆದ ಐದು ವರ್ಷಗಳಿಂದ ಡೂಪ್ಲೆಕ್ಸ್ ಅಪಾರ್ಟ್​ಮೆಂಟ್​​ನಲ್ಲಿ ಬಾಡಿಗೆಗಿತ್ತು. ಈಗ ಖರೀದಿ ಮಾಡಿರುವ ವಿಲಾಸಿ ಅಪಾರ್ಟ್​ಮೆಂಟ್ ಇರುವ ಸ್ಥಳವನ್ನು 33 ಸೌಥ್ ಮುಂಬೈ ಪೆಡರ್ ರಸ್ತೆ ಎಂದು ಕರೆಯಲಾಗುತ್ತದೆ. ವರದಿಯ ಪ್ರಕಾರ, 28 ಅಂತಸ್ತಿನ ಈ ಅಪಾರ್ಟ್​ಮೆಂಟ್​ನ 11 ಹಾಗೂ 12ನೇ ಅಂತಸ್ತನ್ನು ಖರೀದಿ ಮಾಡಿದ್ದು, 6000 ಚದರಡಿಯ ಕಾರ್ಪೆಟ್ ಪ್ರದೇಶ ಹೊಂದಿದೆ. ​ಚಂದ್ರಶೇಖರನ್ ಮತ್ತು ಅವರ ಕುಟುಂಬ ಕಳೆದ 5 ವರ್ಷಗಳಿಂದ ಭೋಗ್ಯಕ್ಕೆ ಇತ್ತು. ಅದನ್ನು ಈಚೆಗಷ್ಟೇ ಚಂದ್ರಶೇಖರನ್, ಪತ್ನಿ ಲಲಿತಾ, ಮಗ ಪ್ರಣವ್ ಹೆಸರಲ್ಲಿ ನೋಂದಣಿ ಮಾಡಲಾಗಿದೆ. ಇದನ್ನು ಬಿಲ್ಡರ್ ಸಮೀರ್ ಭೋಜ್ವಾನಿ ನಿಯಂತ್ರಿಸುವ ಕಂಪೆನಿಯಾದ ಜಿವೇಶ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್​ನಿಂದ ಮಾರಾಟ ಮಾಡಲಾಗಿದೆ.

ಚಂದ್ರ ಅವರು ಈಗಾಗಲೇ ಇಲ್ಲಿ ಕಳೆದ ಕೆಲವು ವರ್ಷಗಳಿಂದ ಲೀಸ್ ರೆಂಟಲ್ ಆದ ತಿಂಗಳಿಗೆ 20 ಲಕ್ಷ ರೂಪಾಯಿಯಂತೆ ಪಾವತಿಸುತ್ತಾ ಇದ್ದರು. ಫೆಬ್ರವರಿ 21, 2017ರಂದು ಟಾಟಾ ಸನ್ಸ್ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಮೇಲೆ 33 ಸೌಥ್ ಕಂಡೋಮಿನಿಯಮ್​ಗೆ ತೆರಳಿದರು ಎಂದು ಈ ವ್ಯವಹಾರದ ಬಗ್ಗೆ ಮಾಹಿತಿ ಇರುವವರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ಫೆಬ್ರವರಿಯಲ್ಲಿ ಮತ್ತೆ 5 ವರ್ಷಗಳ ಅವಧಿಗೆ ಚಂದ್ರಶೇಖರನ್ ಅವರನ್ನು ಟಾಟಾ ಸನ್ಸ್ ಅಧ್ಯಕ್ಷರನ್ನಾಗಿ ಮುಂದುವರಿಸಿದ ವೇಳೆ 98 ಕೋಟಿ ರೂಪಾಯಿಯ ಡೂಪ್ಲೆಕ್ಸ್ ಖರೀದಿ ಬಗ್ಗೆ ನಿರ್ಧರಿಸಿದ್ದರು. ಅವರು 2016ರ ಅಕ್ಟೋಬರ್​ನಲ್ಲಿ ಟಾಟಾ ಸನ್ಸ್ ಮಂಡಳಿ ಸೇರ್ಪಡೆಯಾದರು. 2017ರ ಜನವರಿಯಲ್ಲಿ ಅಧ್ಯಕ್ಷರಾಗಿ ನೇಮಕವಾದರು.

ಈ ವರ್ಷದ ಫೆಬ್ರವರಿಯಲ್ಲಿ ಟಾಟಾ ಸನ್ಸ್ ಮಂಡಳಿಯು ಸರ್ವಾನುಮತದಿಂದ ಚಂದ್ರಶೇಖರನ್ ಅವರ ಅಧಿಕಾರಾವಧಿಯನ್ನು ಮತ್ತೆ 5 ವರ್ಷಗಳಿಗೆ ವಿಸ್ತರಿಸಿತು. ಮಾಧ್ಯಮಗಳ ವರದಿ ಪ್ರಕಾರ, ಭಾರತದಲ್ಲಿ ಅತಿ ಹೆಚ್ಚು ಪಗಾರ ಪಡೆಯುವ ಕಾರ್ಪೊರೇಟ್ ಬಾಸ್​ಗಳಲ್ಲಿ ಚಂದ್ರಶೇಖರನ್ ಒಬ್ಬರು. 2021ರಲ್ಲಿ ವಾರ್ಷಿಕ ವೇತನ 91 ಕೋಟಿ ರೂಪಾಯಿ ಪಡೆದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ