AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

N Chandrasekharan: ಮುಂಬೈನಲ್ಲಿ 98 ಕೋಟಿ ರೂಪಾಯಿಗೆ ಡೂಪ್ಲೆಕ್ಸ್ ಖರೀದಿಸಿದ ಟಾಟಾ ಸಮೂಹದ ಅಧ್ಯಕ್ಷ ಚಂದ್ರಶೇಖರನ್

ಟಾಟಾ ಸನ್ಸ್ ಅಧ್ಯಕ್ಷರಾದ ಎನ್. ಚಂದ್ರಶೇಖರನ್ ಅವರು ಮುಂಬೈನಲ್ಲಿ 98 ಕೋಟಿ ರೂಪಾಯಿಗೆ 6000 ಚದರಡಿಯ ಡೂಪ್ಲೆಕ್ಸ್ ಖರೀದಿಸಿದ್ದಾರೆ.

N Chandrasekharan: ಮುಂಬೈನಲ್ಲಿ 98 ಕೋಟಿ ರೂಪಾಯಿಗೆ ಡೂಪ್ಲೆಕ್ಸ್ ಖರೀದಿಸಿದ ಟಾಟಾ ಸಮೂಹದ ಅಧ್ಯಕ್ಷ ಚಂದ್ರಶೇಖರನ್
ಎನ್​. ಚಂದ್ರಶೇಖರನ್
Follow us
TV9 Web
| Updated By: Srinivas Mata

Updated on: May 08, 2022 | 7:59 AM

ಟಾಟಾ ಸಮೂಹದ ಅಧ್ಯಕ್ಷರಾದ ಎನ್​.ಚಂದ್ರಶೇಖರನ್ (N Chandrasekharan) ಅವರು ಮುಂಬೈನ ಪೆಡರ್ ರಸ್ತೆ ಪ್ರದೇಶದಲ್ಲಿ 98 ಕೋಟಿ ರೂಪಾಯಿಗೆ ಡೂಪ್ಲೆಕ್ಸ್ ಖರೀದಿಸಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ವರದಿ ಪ್ರಕಾರ, ಚಂದ್ರಶೇಖರನ್ ಮತ್ತು ಅವರ ಕುಟುಂಬ ಕಳೆದ ಐದು ವರ್ಷಗಳಿಂದ ಡೂಪ್ಲೆಕ್ಸ್ ಅಪಾರ್ಟ್​ಮೆಂಟ್​​ನಲ್ಲಿ ಬಾಡಿಗೆಗಿತ್ತು. ಈಗ ಖರೀದಿ ಮಾಡಿರುವ ವಿಲಾಸಿ ಅಪಾರ್ಟ್​ಮೆಂಟ್ ಇರುವ ಸ್ಥಳವನ್ನು 33 ಸೌಥ್ ಮುಂಬೈ ಪೆಡರ್ ರಸ್ತೆ ಎಂದು ಕರೆಯಲಾಗುತ್ತದೆ. ವರದಿಯ ಪ್ರಕಾರ, 28 ಅಂತಸ್ತಿನ ಈ ಅಪಾರ್ಟ್​ಮೆಂಟ್​ನ 11 ಹಾಗೂ 12ನೇ ಅಂತಸ್ತನ್ನು ಖರೀದಿ ಮಾಡಿದ್ದು, 6000 ಚದರಡಿಯ ಕಾರ್ಪೆಟ್ ಪ್ರದೇಶ ಹೊಂದಿದೆ. ​ಚಂದ್ರಶೇಖರನ್ ಮತ್ತು ಅವರ ಕುಟುಂಬ ಕಳೆದ 5 ವರ್ಷಗಳಿಂದ ಭೋಗ್ಯಕ್ಕೆ ಇತ್ತು. ಅದನ್ನು ಈಚೆಗಷ್ಟೇ ಚಂದ್ರಶೇಖರನ್, ಪತ್ನಿ ಲಲಿತಾ, ಮಗ ಪ್ರಣವ್ ಹೆಸರಲ್ಲಿ ನೋಂದಣಿ ಮಾಡಲಾಗಿದೆ. ಇದನ್ನು ಬಿಲ್ಡರ್ ಸಮೀರ್ ಭೋಜ್ವಾನಿ ನಿಯಂತ್ರಿಸುವ ಕಂಪೆನಿಯಾದ ಜಿವೇಶ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್​ನಿಂದ ಮಾರಾಟ ಮಾಡಲಾಗಿದೆ.

ಚಂದ್ರ ಅವರು ಈಗಾಗಲೇ ಇಲ್ಲಿ ಕಳೆದ ಕೆಲವು ವರ್ಷಗಳಿಂದ ಲೀಸ್ ರೆಂಟಲ್ ಆದ ತಿಂಗಳಿಗೆ 20 ಲಕ್ಷ ರೂಪಾಯಿಯಂತೆ ಪಾವತಿಸುತ್ತಾ ಇದ್ದರು. ಫೆಬ್ರವರಿ 21, 2017ರಂದು ಟಾಟಾ ಸನ್ಸ್ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಮೇಲೆ 33 ಸೌಥ್ ಕಂಡೋಮಿನಿಯಮ್​ಗೆ ತೆರಳಿದರು ಎಂದು ಈ ವ್ಯವಹಾರದ ಬಗ್ಗೆ ಮಾಹಿತಿ ಇರುವವರು ಟೈಮ್ಸ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ. ಫೆಬ್ರವರಿಯಲ್ಲಿ ಮತ್ತೆ 5 ವರ್ಷಗಳ ಅವಧಿಗೆ ಚಂದ್ರಶೇಖರನ್ ಅವರನ್ನು ಟಾಟಾ ಸನ್ಸ್ ಅಧ್ಯಕ್ಷರನ್ನಾಗಿ ಮುಂದುವರಿಸಿದ ವೇಳೆ 98 ಕೋಟಿ ರೂಪಾಯಿಯ ಡೂಪ್ಲೆಕ್ಸ್ ಖರೀದಿ ಬಗ್ಗೆ ನಿರ್ಧರಿಸಿದ್ದರು. ಅವರು 2016ರ ಅಕ್ಟೋಬರ್​ನಲ್ಲಿ ಟಾಟಾ ಸನ್ಸ್ ಮಂಡಳಿ ಸೇರ್ಪಡೆಯಾದರು. 2017ರ ಜನವರಿಯಲ್ಲಿ ಅಧ್ಯಕ್ಷರಾಗಿ ನೇಮಕವಾದರು.

ಈ ವರ್ಷದ ಫೆಬ್ರವರಿಯಲ್ಲಿ ಟಾಟಾ ಸನ್ಸ್ ಮಂಡಳಿಯು ಸರ್ವಾನುಮತದಿಂದ ಚಂದ್ರಶೇಖರನ್ ಅವರ ಅಧಿಕಾರಾವಧಿಯನ್ನು ಮತ್ತೆ 5 ವರ್ಷಗಳಿಗೆ ವಿಸ್ತರಿಸಿತು. ಮಾಧ್ಯಮಗಳ ವರದಿ ಪ್ರಕಾರ, ಭಾರತದಲ್ಲಿ ಅತಿ ಹೆಚ್ಚು ಪಗಾರ ಪಡೆಯುವ ಕಾರ್ಪೊರೇಟ್ ಬಾಸ್​ಗಳಲ್ಲಿ ಚಂದ್ರಶೇಖರನ್ ಒಬ್ಬರು. 2021ರಲ್ಲಿ ವಾರ್ಷಿಕ ವೇತನ 91 ಕೋಟಿ ರೂಪಾಯಿ ಪಡೆದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ