AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Steel: ಟಾಟಾ ಸ್ಟೀಲ್ ಅಕ್ಟೋಬರ್​ನಿಂದ ಡಿಸೆಂಬರ್​ ಮೂರನೇ ತ್ರೈಮಾಸಿಕ ಲಾಭ ಶೇ 159ರಷ್ಟು ಹೆಚ್ಚಳ

ಟಾಟಾ ಸ್ಟೀಲ್ ಕಂಪೆನಿಯ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಶೇ 159ರಷ್ಟು ಹೆಚ್ಚಳವಾಗಿ 9573 ಕೋಟಿ ರೂಪಾಯಿ ಕ್ರೋಡೀಕೃತ ನಿವ್ವಳ ಲಾಭ ಬಂದಿದೆ.

Tata Steel: ಟಾಟಾ ಸ್ಟೀಲ್ ಅಕ್ಟೋಬರ್​ನಿಂದ ಡಿಸೆಂಬರ್​ ಮೂರನೇ ತ್ರೈಮಾಸಿಕ ಲಾಭ ಶೇ 159ರಷ್ಟು ಹೆಚ್ಚಳ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 05, 2022 | 1:48 AM

Share

ಟಾಟಾ ಸ್ಟೀಲ್ (Tata Steel) ಲಿಮಿಟೆಡ್​ನಿಂದ ಫೆಬ್ರವರಿ 4ರ ಶುಕ್ರವಾರದಂದು 2021-22ನೇ ಹಣಕಾಸಿನ ವರ್ಷದ ಅಕ್ಟೋಬರ್​ನಿಂದ ಡಿಸೆಂಬರ್​ ತಿಂಗಳ ಮೂರನೇ ತ್ರೈಮಾಸಿಕ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕ್ರೋಡೀಕೃತ ನಿವ್ವಳ ಲಾಭ 9,573 ಕೋಟಿ ರೂಪಾಯಿ ಬಂದಿದೆ. ಒಂದು ವರ್ಷದ ಹಿಂದಿನ ಇದೇ ಅವಧಿಯಲ್ಲಿ ದಾಖಲಾಗಿದ್ದ 3,697 ಕೋಟಿ ರೂಪಾಯಿಗೆ ಹೋಲಿಸಿದಲ್ಲಿ ಶೇ 159ರಷ್ಟು ಹೆಚ್ಚಳವಾಗಿದೆ. ಕಳೆದ ತ್ರೈಮಾಸಿಕದಲ್ಲಿ ಕಂಪೆನಿಯು ತೆರಿಗೆ ನಂತರದ ಲಾಭವಾಗಿ 11,918 ರೂಪಾಯಿ ಗಳಿಸಿದೆ.

ಈ ಖಾಸಗಿ ಕಂಪೆನಿಯ ಕ್ರೋಡೀಕೃತ ಆದಾಯವು 60,783 ಕೋಟಿ ರೂಪಾಯಿ ಬಂದಿದ್ದು, ಕಳೆದ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬಂದಿದ್ದ 41,935 ಕೋಟಿಗೆ ಹೋಲಿಸಿದರೆ ಶೇ 45ರಷ್ಟು ಹೆಚ್ಚಾಗಿದೆ. ಕಳೆದ ತ್ರೈಮಾಸಿಕದಲ್ಲಿ 60,387 ಕೋಟಿ ರೂಪಾಯಿ ಬಂದಿದೆ. ಇಂಥ ಉತ್ತಮ ಪರ್ಫಾರ್ಮೆನ್ಸ್​ ಎಲ್ಲ ಭೌಗೋಳಿಕ ಭಾಗದಲ್ಲೂ ಹೆಚ್ಚಿರುವ ವ್ಯಾಲ್ಯೂಮ್​ನಿಂದ ಬಂದಿದೆ.

ಟಾಟಾ ಸ್ಟೀಲ್ ಷೇರು ಫೆಬ್ರವರಿ 4ರಂದು ನ್ಯಾಷನಲ್​ ಸ್ಟಾಕ್​ ಎಕ್ಸ್​ಚೇಂಜ್​ನಲ್ಲಿ ದಿನಾಂತ್ಯಕ್ಕೆ 9.70 ರೂಪಾಯಿ ಏರಿಕೆಯಾಗಿ, ರೂ. 1,176.30ಕ್ಕೆ ಕೊನೆಯಾಗಿದೆ. ಕಳೆದ ಒಂದು ವರ್ಷದಲ್ಲಿ ಈ ಸ್ಟಾಕ್ ಶೇ 79ರಷ್ಟು ರಿಟರ್ನ್ ನೀಡಿದೆ. ಕಳೆದ ಒಂದು ತಿಂಗಳಲ್ಲಿ ಶೇ 2.3ರಷ್ಟು ರಿಟರ್ನ್ ನೀಡಿದೆ.

ಇದನ್ನೂ ಓದಿ: Tata Steel Recruitment: ತೃತೀಯ ಲಿಂಗಿಗಳಿಗಾಗಿ ಉದ್ಯೋಗ ಸ್ಥಾನಕ್ಕೆ ಅರ್ಜಿ ಆಹ್ವಾನಿಸಿದ ಟಾಟಾ ಸ್ಟೀಲ್

Published On - 8:04 pm, Fri, 4 February 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ