AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ

Expectations of Real Estate from Union Budget 2026: ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಉತ್ತೇಜನ ನೀಡುವಂತಹ ಕ್ರಮಗಳನ್ನು ಸರ್ಕಾರ ಕಳೆದ ಕೆಲ ವರ್ಷಗಳಿಂದ ತೆಗೆದುಕೊಂಡು ಬಂದಿದೆ. ಸರ್ಕಾರದ ಈ ನೀತಿ ಹೀಗೆ ಮುಂದುವರಿಯಲಿ ಎಂದು ಈ ಸೆಕ್ಟರ್ ಅಪೇಕ್ಷಿಸುತ್ತಿದೆ. ಎರಡನೇ ಸ್ತರದ ನಗರಗಳಲ್ಲಿ ಕೈಗಾರಿಕಾ ಕಾರಿಡಾರ್​ಗಳು, ಮೂಲಸೌಕರ್ಯ ಪ್ರಾಜೆಕ್ಟ್​ಗಳನ್ನು ಕೈಗೊಳ್ಳಲಿ ಎಂಬುದು ಇದರ ಹಲವು ನಿರೀಕ್ಷೆಗಳಲ್ಲಿ ಒಂದು.

Budget 2026: ಟ್ಯಾಕ್ಸ್ ಡಿಡಕ್ಷನ್, ಡೆವಲಪರ್ಸ್​ಗೆ ಕಡಿಮೆ ದರದಲ್ಲಿ ಭೂಮಿ ಇತ್ಯಾದಿ ಕ್ರಮಗಳ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ
ರಿಯಲ್ ಎಸ್ಟೇಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 30, 2026 | 6:30 PM

Share

ನವದೆಹಲಿ, ಜನವರಿ 30: ಕಳೆದ ಕೆಲ ವರ್ಷಗಳಿಂದ ಸರ್ಕಾರ ಇನ್​ಫ್ರಾಸ್ಟ್ರಕ್ಚರ್ ಕ್ಷೇತ್ರಕ್ಕೆ ಮುತುವರ್ಜಿ ತೋರುತ್ತಾ ಬರುತ್ತಿದೆ. ವಸತಿ ಪ್ರಾಜೆಕ್ಟ್​ಗಳು, ಕೈಗಾರಿಕಾ ಕಾರಿಡಾರ್​ಗಳು ಸಾಕಷ್ಟು ನಿರ್ಮಾಣ ಆಗಿವೆ, ಆಗುತ್ತಿವೆ. ಇನ್​ಫ್ರಾಸ್ಟ್ರಕ್ಚರ್ ಉತ್ತಮಗೊಂಡಂತೆ ರಿಯಲ್ ಎಸ್ಟೇಟ್ (Real Estate  sector) ಉದ್ಯಮವೂ ಗರಿಗೆದರುತ್ತಾ ಬಂದಿದೆ. ಸರ್ಕಾರದ ಈ ಸುಧಾರಣಾ ಕ್ರಮಗಳು ಸ್ಥಗಿತಗೊಳ್ಳದೆ ಮುಂದುವರಿಯುತ್ತಾ ಹೋಗಲಿ ಎಂಬುದು ಈ ಉದ್ಯಮವು ಬಜೆಟ್​ನಿಂದ ಮಾಡುತ್ತಿರುವ ನಿರೀಕ್ಷೆ.

ಉದ್ಯೋಗ ಸೃಷ್ಟಿ, ಯೋಜಿತ ನಗರೀಕರಣ, ದೀರ್ಘಕಾಲೀನ ಆರ್ಥಿಕ ಕ್ಷಮತೆ ಇವುಗಳಿಗೆ ರಿಯಲ್ ಎಸ್ಟೇಟ್ ಸೆಕ್ಟರ್ ಶಕ್ತಿ ತುಂಬಬೇಕಾದರೆ, ಅಭಿವೃದ್ಧಿ ಪೂರಕವಾದ ಮತ್ತು ಸಮತೋಲಿತವಾದ ಬಜೆಟ್​ನಿಂದ ಸಾಧ್ಯ ಎಂದು ಬೆಂಗಳೂರಿನ ಮನ ಪ್ರಾಜೆಕ್ಟ್ಸ್​ನ (Mana Projects) ಸಿಎಂಡಿ ಡಿ. ಕಿಶೋರ್ ರೆಡ್ಡಿ ಹೇಳುತ್ತಾರೆ.

ಸರ್ಕಾರದ ನೀತಿಗಳು ಮುಂದುವರಿಯಬೇಕು. ವಿವಿಧ ಹೌಸಿಂಗ್ ಸೆಗ್ಮೆಂಟ್​ಗಳಲ್ಲಿ ಗ್ರಾಹಕರ ವಿಶ್ವಾಸ ಮೂಡಿಸುವಂತಹ ಮತ್ತು ಭವಿಷ್ಯದ ದೃಷ್ಟಿಯಿಂದ ಮಾಡಲಾಗುವ ಸುಧಾರಣೆಗಳೂ ಬರಬೇಕು. ನಿರ್ಮಾಣ ಹಂತದಲ್ಲಿರುವ ಪ್ರಾಪರ್ಟಿಗಳ ಮೇಲೆ ಜಿಎಸ್​ಟಿ ದರ ಇಳಿಸಬೇಕು. ಗೃಹ ಸಾಲದ ಬಡ್ಡಿ ಮೇಲೆ ಡಿಡಕ್ಷನ್ ಮಿತಿಯನ್ನು ಹೆಚ್ಚಿಸಬೇಕು ಎಂದು ಕಿಶೋರ್ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಈ ಬಾರಿಯ ಬಜೆಟ್​ನಿಂದ ಇನ್ನಷ್ಟು ಸೂಕ್ಷ್ಮ ಕ್ರಮ ಎದುರು ನೋಡುತ್ತಿರುವ ಇನ್ಷೂರೆನ್ಸ್ ಸೆಕ್ಟರ್

ಉದಯೋನ್ಮುಖವಾಗಿರುವ ಹಾಗೂ ಎರಡನೇ ಸ್ತರದ ನಗರಗಳಲ್ಲಿ (ಟಯರ್-2 ಸಿಟಿ) ಇನ್​ಫ್ರಾಸ್ಟ್ರಕ್ಚರ್ ಮತ್ತು ನಗರ ಸಂಪರ್ಕತೆಯಲ್ಲಿ ಸತತ ಹೂಡಿಕೆ ಮಾಡಬೇಕು. ಇದರಿಂದ ಹೊಸ ವಸತಿ ಕಾರಿಡಾರ್​ಗಳು ಹೊರಹೊಮ್ಮಲು ಸಾಧ್ಯ. ಸಮತೋಲಿತವಾದ ನಗರ ಬೆಳವಣಿಗೆ ಸಾಧ್ಯ. ಹಾಗೆಯೇ, ಏಕ ಗವಾಕ್ಷಿ ಸಿಸ್ಟಂ ಮೂಲಕ ವೇಗವಾಗಿ ಪ್ರಾಜೆಕ್ಟ್​ಗಳ ಅನುಮೋದನೆ ಆಗಬೇಕು. ಎಫ್​ಡಿಐ ನಿಯಮಗಳಲ್ಲಿ ಸ್ಪಷ್ಟತೆ ಬರಬೇಕು ಎಂದೂ ಮನ ಪ್ರಾಜೆಕ್ಟ್ಸ್​ನ ಸಿಎಂಡಿ ಸಲಹೆ ನೀಡಿದ್ದಾರೆ.

ರಿಯಲ್ ಎಸ್ಟೇಟ್ ಮಾರುಕಟ್ಟೆ ನಿಧಾನಗೊಳ್ಳುತ್ತಿದೆಯಾ?

ವಿಎಸ್ ರಿಯಾಲ್ಟರ್ಸ್ ಸಂಸ್ಥೆಯ ಸಿಇಒ ವಿಜಯ್ ಹರ್ಷ್ ಪ್ರಕಾರ ರಿಯಲ್ ಎಸ್ಟೇಟ್ ಮಾರುಕಟ್ಟೆ ಮಂದಗೊಳ್ಳುತ್ತಿರುವ ಆರಂಭಿಕ ಸುಳಿವು ಇದೆ. ಪ್ರಾಪರ್ಟಿಗಳು ಮಾರಾಟವಾಗುತ್ತಿರುವ ಪ್ರಮಾಣ ಕಡಿಮೆ ಆಗುತ್ತಿದೆ. ಅದರಲ್ಲೂ ಅಧಿಕ ಬೇಡಿಕೆ ಇರುವ 1 ಕೋಟಿ ರೂ ಒಳಗಿನ ಮನೆಗಳ ಮಾರಾಟ ಕುಂಠಿತಗೊಳ್ಳುತ್ತಿದೆ ಎನ್ನುತ್ತಾರೆ ವಿಜಯ್ ಹರ್ಷ್.

ಇದನ್ನೂ ಓದಿ: ಬಜೆಟ್​ನಲ್ಲಿ ವಿತ್ತೀಯ ಶಿಸ್ತು ಕಾಯ್ದುಕೊಂಡು ಬಂಡವಾಳ ವೆಚ್ಚ ಹೆಚ್ಚಿಸಬಹುದು: ಜೆಎಂ ಫೈನಾನ್ಷಿಯಲ್ ನಿರೀಕ್ಷೆ

ಲ್ಯಾಂಡ್ ಡೆಲವಪರ್​ಗಳಿಗೆ ಕಡಿಮೆ ದರದಲ್ಲಿ ಭೂಮಿ ಸಿಗುವಂತಹ ವ್ಯವಸ್ಥೆ ಮಾಡಬೇಕು. ಮನೆ ಖರೀದಿದಾರರಿಗೆ ಗೃಹ ಸಾಲಗಳಿಗೆ ಡಿಡಕ್ಷನ್ ಇತ್ಯಾದಿ ತೆರಿಗೆ ರಿಯಾಯಿತಿ ಸೌಲಭ್ಯ ಕೊಟ್ಟರೆ ಈ ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಚುರುಕು ಮುಟ್ಟಬಹುದು ಎನ್ನುತ್ತಾರೆ ವಿಎಸ್ ರಿಯಾಲ್ಟರ್ಸ್​ನ ಸಂಸ್ಥಾಪಕರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ