AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Exemption: ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆಯಿಂದ ಎಷ್ಟು ಮಂದಿಗೆ ಪ್ರಯೋಜನ? ಇಲ್ಲಿದೆ ಮಾಹಿತಿ

ಆದಾಗ್ಯೂ 7 ಲಕ್ಷ ರೂ.ವರೆಗೆ ಆದಾಯ ಹೊಂದಿರುವ ಎಷ್ಟು ಮಂದಿ ಇದ್ದಾರೆ ಎಂಬ ಸಂಖ್ಯೆಗಳನ್ನು ಸರ್ಕಾರ ಬಹಿರಂಗಪಡಿಸಿಲ್ಲ. 7 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಅಂದಾಜು ಸುಮಾರು 4 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Tax Exemption: ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ವಿಸ್ತರಣೆಯಿಂದ ಎಷ್ಟು ಮಂದಿಗೆ ಪ್ರಯೋಜನ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 14, 2023 | 12:22 PM

Share

ಹೊಸ ತೆರಿಗೆ ಪದ್ಧತಿಯಡಿ (New Tax Regime) 7 ಲಕ್ಷ ರೂ. ವರೆಗೆ ತೆರಿಗೆ ವಿನಾಯಿತಿ (Tax Exemption) ಪಡೆಯಲು ಅವಕಾಶ ನೀಡಲಾಗಿದ್ದು, ಹಳೆ ತೆರಿಗೆ ಪದ್ಧತಿಯಡಿಯಲ್ಲಿಯೂ 3 ಲಕ್ಷ ರೂ.ವರೆಗಿನ ಆದಾಯಕ್ಕೆ ತೆರಿಗೆ ಪಾವತಿಸಬೇಕಾಗುವುದಿಲ್ಲ. ಹೊಸ ತೆರಿಗೆ ಪದ್ಧತಿಯಲ್ಲಿ 50,000 ರೂ. ಸ್ಟಾಂಡರ್ಡ್ ಡಿಡಕ್ಷನ್ (Standard Deduction) ಘೋಷಿಸಲಾಗಿದ್ದು, ವೇತನದಾರ ವರ್ಗಕ್ಕೆ ಮತ್ತು ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ. 7.5 ಲಕ್ಷ ರೂ.ವರೆಗೆ ಆದಾಯ ಗಳಿಸುತ್ತಿರುವವರಿಗೆ 2024-25ನೇ ಸಾಲಿನಿಂದ ತೆರಿಗೆ ಪಾವತಿಸಬೇಕಾಗುವುದಿಲ್ಲ. ಆದರೆ, ಎಷ್ಟು ಮಂದಿಗೆ ಈ ತೆರಿಗೆ ವಿನಾಯಿತಿಯ ಪ್ರಯೋಜನ ದೊರೆಯಲಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಸರ್ಕಾರವು ಲೋಕಸಭೆಗೆ ನೀಡಿರುವ ಮಾಹಿತಿಯ ಪ್ರಕಾರ, 4.1 ಕೋಟಿ ತೆರಿಗೆದಾರರು 2021-22ರಲ್ಲಿ ತಮ್ಮ ಆದಾಯ 5 ಲಕ್ಷ ರೂ.ವರೆಗೆ ಇದೆ ಎಂದು ಘೋಷಿಸಿಕೊಂಡಿದ್ದಾರೆ. 1.4 ಕೋಟಿ ತೆರಿಗೆದಾರರು ತಮ್ಮ ಆದಾಯ 5ರಿಂದ 10 ಲಕ್ಷ ರೂ.ವರೆಗೆ ಇದೆ ಎಂದು ಘೋಷಿಸಿದ್ದಾರೆ. 2021-22ರಲ್ಲಿ ಒಟ್ಟಾರೆಯಾಗಿ 6.3 ಕೋಟಿ ಮಂದಿ ಐಟಿಆರ್ ಫೈಲ್ ಮಾಡಿದ್ದಾರೆ.

ಆದಾಗ್ಯೂ 7 ಲಕ್ಷ ರೂ.ವರೆಗೆ ಆದಾಯ ಹೊಂದಿರುವ ಎಷ್ಟು ಮಂದಿ ಇದ್ದಾರೆ ಎಂಬ ಸಂಖ್ಯೆಗಳನ್ನು ಸರ್ಕಾರ ಬಹಿರಂಗಪಡಿಸಿಲ್ಲ. 7 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಿರುವುದರಿಂದ ಅಂದಾಜು ಸುಮಾರು 4 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. 7 ಲಕ್ಷ ರೂ.ಗಿಂತ ಕಡಿಮೆ ಆದಾಯ ಇರುವವರು 2024-25ರಲ್ಲಿ ತೆರಿಗೆ ಪಾವತಿಸಬೇಕಿರುವುದಿಲ್ಲ.

ಇದನ್ನೂ ಓದಿ: Income Tax Slabs: ಆದಾಯ ತೆರಿಗೆ ಸ್ಲ್ಯಾಬ್​ ಬದಲಾವಣೆ; ಗೊಂದಲವಿದೆಯಾ? ಇಲ್ಲಿದೆ ಹಳೆದು, ಹೊಸದರ ನಡುವಣ ಪೂರ್ಣ ವ್ಯತ್ಯಾಸ

2022ರ ಡಿಸೆಂಬರ್ 31ರ ವರೆಗೆ ಐಟಿ ರಿಟರ್ನ್ಸ್​​ ಫೈಲ್ ಮಾಡಿದವರ ವಿವರವನ್ನು ಸರ್ಕಾರ ಇನ್ನಷ್ಟೇ ಬಹಿರಂಗಪಡಿಸಬೇಕಿದೆ.

ಆದಾಯ ತೆರಿಗೆ ಇಲಾಖೆ ವೆಬ್​ಸೈಟ್​​ನಿಂದ ದೊರೆತ ಇತ್ತೀಚಿನ ಮಾಹಿತಿ ಪ್ರಕಾರ, 2022-23ನೇ ಸಾಲಿನಲ್ಲಿ 7,54,79,837 ಐಟಿ ರಿಟರ್ನ್ಸ್​​ ಫೈಲ್ ಮಾಡಲಾಗಿದೆ. ಈ ಪೈಕಿ 7.19 ಕೋಟಿ ಐಟಿಆರ್​​ ಅನ್ನು ದೃಢೀಕರಿಸಲಾಗಿದ್ದು, ಉಳಿದವುಗಳ ದೃಢೀಕರಣ ಪ್ರಕ್ರಿಯೆ ನಡೆಯುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ