AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tax Collection: ತೆರಿಗೆ ದರ ಹೆಚ್ಚಿಸಿಲ್ಲ, ಆದರೂ ತೆರಿಗೆ ಸಂಗ್ರಹ ಹೆಚ್ಚಿಸಿದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Nirmala Sitharaman @Income Tax Day: ಇತ್ತೀಚಿನ ಕೆಲ ವರ್ಷಗಳಲ್ಲಿ ಆದಾಯ ತೆರಿಗೆ ದರ ಹೆಚ್ಚಿಸದೇ ಇದ್ದರೂ ತೆರಿಗೆ ಸಂಗ್ರಹಣೆ ಹೆಚ್ಚಾಗಿದೆ. ಇದಕ್ಕೆ ತಂತ್ರಜ್ಞಾನದ ಸಮರ್ಪಕ ಬಳಕೆ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Tax Collection: ತೆರಿಗೆ ದರ ಹೆಚ್ಚಿಸಿಲ್ಲ, ಆದರೂ ತೆರಿಗೆ ಸಂಗ್ರಹ ಹೆಚ್ಚಿಸಿದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 25, 2023 | 12:26 PM

Share

ನವದೆಹಲಿ, ಜುಲೈ 25: ಸಮರ್ಪಕ ವ್ಯವಸ್ಥೆಯ ಕಾರಣದಿಂದಾಗಿ ಕಳೆದ ಕೆಲ ವರ್ಷಗಳಿಂದ ಹೆಚ್ಚು ತೆರಿಗೆ ಸಂಗ್ರಹ (Tax Collection) ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾಮನ್ (Nirmala Sitharaman) ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ತೆರಿಗೆ ದರ ಹೆಚ್ಚಿಸಿಲ್ಲ. ಆದರೂ ಕೂಡ ತೆರಿಗೆ ಆದಾಯ ಹೆಚ್ಚಾಗಿದೆ. ತೆರಿಗೆ ಸಂಗ್ರಹ ವ್ಯವಸ್ಥೆಯ ದಕ್ಷತೆಯಿಂದಾಗಿ (System Efficiency) ಅಧಿಕ ತೆರಿಗೆ ಸಂಗ್ರಹ ಸಾಧ್ಯವಾಗಿದೆ ಎಂದು ಸಚಿವೆ ಹೇಳಿದ್ದಾರೆ. ಜುಲೈ 24ರಂದು ನಡೆದ 164ನೇ ಆದಾಯ ತೆರಿಗೆ ದಿನಾಚರಣೆ (Income Tax Day Celebration) ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ನಿರ್ಮಲಾ ಸೀತಾರಾಮನ್, ತೆರಿಗೆ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಬದಲಾವಣೆ ತಂದಿದೆ ಎಂದಿದ್ದಾರೆ.

ಬಹುತೇಕ ಸಮಸ್ಯೆಗಳಿಗೆ ತಂತ್ರಜ್ಞಾನವೇ ಉತ್ತರ ಎಂಬ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಬಹಳ ಸ್ಪಷ್ಟತೆ ಇದೆ. ಈ ವಿಚಾರ ಗಮನದಲ್ಲಿಟ್ಟುಕೊಂಡು ಕೇಂದ್ರೀಯ ನೇರ ತೆರಿಗೆ ಮಂಡಳಿ ಕೆಲಸ ನಿರ್ವಹಿಸುತ್ತಿದೆ. ಇದರಿಂದಾಗಿ ತೆರಿಗೆ ವಂಚನೆ ಪ್ರಕರಣಗಳು ಕಡಿಮೆ ಆಗಿವೆ. ತಂತ್ರಜ್ಞಾನದ ಕಾರಣದಿಂದಾಗಿ ಇನ್ಕಮ್ ಟ್ಯಾಕ್ಸ್ ಅಸೆಸ್ಮೆಂಟ್​ನಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇದನ್ನೂ ಓದಿ: Income Tax Day 2023: ಸಿಪಾಯಿ ದಂಗೆಯಿಂದಾದ ನಷ್ಟಕ್ಕೆ ಪರಿಹಾರವಾಗಿ ಬ್ರಿಟಿಷರು ಜಾರಿಗೊಳಿಸಿದ್ದರು ಆದಾಯ ತೆರಿಗೆ

ಬಹಳ ಪಾರದರ್ಶಕವಾದ, ಗ್ರಾಹಕ ಸ್ನೇಹಿ ಆದಾಯ ತೆರಿಗೆ ವ್ಯವಸ್ಥೆಯು ಆದಾಯ ತೆರಿಗೆ ಪಾವತಿದಾರರಿಗೆ ಲಭ್ಯ ಇರುತ್ತದೆ ಎಂದು ಭರವಸೆ ನೀಡಿದ ಕೇಂದ್ರ ಸಚಿವೆ, ಈ ವರ್ಷ ನೋಟೀಸ್ ನೀಡಲಾದ 1 ಲಕ್ಷ ತೆರಿಗೆ ಪಾವತಿದಾರರ ಅಸೆಸ್ಮೆಂಟ್​ಗಳನ್ನು ಮುಂದಿನ ವರ್ಷದ ಮಾರ್ಚ್​ನೊಳಗೆ ಮುಗಿಸಲಾಗುವುದು ಎಂದೂ ಹೇಳಿದ್ದಾರೆ.

50 ಲಕ್ಷ ರೂಗಿಂತ ಹೆಚ್ಚು ಮೊತ್ತದ ವಾರ್ಷಿಕ ಆದಾಯ ಇರುವ ತೆರಿಗೆ ಪಾವತಿದಾರರಿಗೆ ಮಾತ್ರ ಈ ನೋಟೀಸ್​ಗಳನ್ನು ನೀಡಲಾಗಿರುವುದು ತಿಳಿದುಬಂದಿದೆ. ಇತ್ತೀಚೆಗಷ್ಟೇ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ವಿನಾಯಿತಿ ಮಿತಿ ವಿಚಾರದ ಬಗ್ಗೆ ಸ್ಪಷ್ಟನೆ ನೀಡುತ್ತಾ, 7 ಲಕ್ಷದಿಂದ ಮೇಲ್ಪಟ್ಟು 27 ಸಾವಿರ ರೂವರೆಗೂ ತೆರಿಗೆ ವಿನಾಯಿತಿ ಇರುತ್ತದೆ ಎಂದಿದ್ದರು. ಅಧಿಕೃತವಾಗಿ ತೆರಿಗೆ ವಿನಾಯಿತಿ ಮಿತಿ ಇರುವುದು 7 ಲಕ್ಷ ರೂವರೆಗೆ ಮಾತ್ರ. ಆದರೆ, ಅದಕ್ಕೆ ಅಲ್ಪಸ್ವಲ್ಪ ಆದಾಯ ಹೆಚ್ಚಿದ್ದರೆ ತೆರಿಗೆ ಪಾವತಿಸಬಹುದಾ ಎಂಬ ಗೊಂದಲ ಏರ್ಪಟ್ಟ ಹಿನ್ನೆಲೆಯಲ್ಲಿ ಹೆಚ್ಚುವರಿ 27,000 ರೂವರೆಗೂ ವಿನಾಯಿತಿ ಮಿತಿ ಹೆಚ್ಚಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ