Tax Collection: ತೆರಿಗೆ ದರ ಹೆಚ್ಚಿಸಿಲ್ಲ, ಆದರೂ ತೆರಿಗೆ ಸಂಗ್ರಹ ಹೆಚ್ಚಿಸಿದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Nirmala Sitharaman @Income Tax Day: ಇತ್ತೀಚಿನ ಕೆಲ ವರ್ಷಗಳಲ್ಲಿ ಆದಾಯ ತೆರಿಗೆ ದರ ಹೆಚ್ಚಿಸದೇ ಇದ್ದರೂ ತೆರಿಗೆ ಸಂಗ್ರಹಣೆ ಹೆಚ್ಚಾಗಿದೆ. ಇದಕ್ಕೆ ತಂತ್ರಜ್ಞಾನದ ಸಮರ್ಪಕ ಬಳಕೆ ಕಾರಣ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Tax Collection: ತೆರಿಗೆ ದರ ಹೆಚ್ಚಿಸಿಲ್ಲ, ಆದರೂ ತೆರಿಗೆ ಸಂಗ್ರಹ ಹೆಚ್ಚಿಸಿದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾಮನ್
Follow us
|

Updated on: Jul 25, 2023 | 12:26 PM

ನವದೆಹಲಿ, ಜುಲೈ 25: ಸಮರ್ಪಕ ವ್ಯವಸ್ಥೆಯ ಕಾರಣದಿಂದಾಗಿ ಕಳೆದ ಕೆಲ ವರ್ಷಗಳಿಂದ ಹೆಚ್ಚು ತೆರಿಗೆ ಸಂಗ್ರಹ (Tax Collection) ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾಮನ್ (Nirmala Sitharaman) ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ತೆರಿಗೆ ದರ ಹೆಚ್ಚಿಸಿಲ್ಲ. ಆದರೂ ಕೂಡ ತೆರಿಗೆ ಆದಾಯ ಹೆಚ್ಚಾಗಿದೆ. ತೆರಿಗೆ ಸಂಗ್ರಹ ವ್ಯವಸ್ಥೆಯ ದಕ್ಷತೆಯಿಂದಾಗಿ (System Efficiency) ಅಧಿಕ ತೆರಿಗೆ ಸಂಗ್ರಹ ಸಾಧ್ಯವಾಗಿದೆ ಎಂದು ಸಚಿವೆ ಹೇಳಿದ್ದಾರೆ. ಜುಲೈ 24ರಂದು ನಡೆದ 164ನೇ ಆದಾಯ ತೆರಿಗೆ ದಿನಾಚರಣೆ (Income Tax Day Celebration) ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ನಿರ್ಮಲಾ ಸೀತಾರಾಮನ್, ತೆರಿಗೆ ವ್ಯವಸ್ಥೆಯಲ್ಲಿ ತಂತ್ರಜ್ಞಾನ ಬದಲಾವಣೆ ತಂದಿದೆ ಎಂದಿದ್ದಾರೆ.

ಬಹುತೇಕ ಸಮಸ್ಯೆಗಳಿಗೆ ತಂತ್ರಜ್ಞಾನವೇ ಉತ್ತರ ಎಂಬ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಬಹಳ ಸ್ಪಷ್ಟತೆ ಇದೆ. ಈ ವಿಚಾರ ಗಮನದಲ್ಲಿಟ್ಟುಕೊಂಡು ಕೇಂದ್ರೀಯ ನೇರ ತೆರಿಗೆ ಮಂಡಳಿ ಕೆಲಸ ನಿರ್ವಹಿಸುತ್ತಿದೆ. ಇದರಿಂದಾಗಿ ತೆರಿಗೆ ವಂಚನೆ ಪ್ರಕರಣಗಳು ಕಡಿಮೆ ಆಗಿವೆ. ತಂತ್ರಜ್ಞಾನದ ಕಾರಣದಿಂದಾಗಿ ಇನ್ಕಮ್ ಟ್ಯಾಕ್ಸ್ ಅಸೆಸ್ಮೆಂಟ್​ನಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇದನ್ನೂ ಓದಿ: Income Tax Day 2023: ಸಿಪಾಯಿ ದಂಗೆಯಿಂದಾದ ನಷ್ಟಕ್ಕೆ ಪರಿಹಾರವಾಗಿ ಬ್ರಿಟಿಷರು ಜಾರಿಗೊಳಿಸಿದ್ದರು ಆದಾಯ ತೆರಿಗೆ

ಬಹಳ ಪಾರದರ್ಶಕವಾದ, ಗ್ರಾಹಕ ಸ್ನೇಹಿ ಆದಾಯ ತೆರಿಗೆ ವ್ಯವಸ್ಥೆಯು ಆದಾಯ ತೆರಿಗೆ ಪಾವತಿದಾರರಿಗೆ ಲಭ್ಯ ಇರುತ್ತದೆ ಎಂದು ಭರವಸೆ ನೀಡಿದ ಕೇಂದ್ರ ಸಚಿವೆ, ಈ ವರ್ಷ ನೋಟೀಸ್ ನೀಡಲಾದ 1 ಲಕ್ಷ ತೆರಿಗೆ ಪಾವತಿದಾರರ ಅಸೆಸ್ಮೆಂಟ್​ಗಳನ್ನು ಮುಂದಿನ ವರ್ಷದ ಮಾರ್ಚ್​ನೊಳಗೆ ಮುಗಿಸಲಾಗುವುದು ಎಂದೂ ಹೇಳಿದ್ದಾರೆ.

50 ಲಕ್ಷ ರೂಗಿಂತ ಹೆಚ್ಚು ಮೊತ್ತದ ವಾರ್ಷಿಕ ಆದಾಯ ಇರುವ ತೆರಿಗೆ ಪಾವತಿದಾರರಿಗೆ ಮಾತ್ರ ಈ ನೋಟೀಸ್​ಗಳನ್ನು ನೀಡಲಾಗಿರುವುದು ತಿಳಿದುಬಂದಿದೆ. ಇತ್ತೀಚೆಗಷ್ಟೇ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ವಿನಾಯಿತಿ ಮಿತಿ ವಿಚಾರದ ಬಗ್ಗೆ ಸ್ಪಷ್ಟನೆ ನೀಡುತ್ತಾ, 7 ಲಕ್ಷದಿಂದ ಮೇಲ್ಪಟ್ಟು 27 ಸಾವಿರ ರೂವರೆಗೂ ತೆರಿಗೆ ವಿನಾಯಿತಿ ಇರುತ್ತದೆ ಎಂದಿದ್ದರು. ಅಧಿಕೃತವಾಗಿ ತೆರಿಗೆ ವಿನಾಯಿತಿ ಮಿತಿ ಇರುವುದು 7 ಲಕ್ಷ ರೂವರೆಗೆ ಮಾತ್ರ. ಆದರೆ, ಅದಕ್ಕೆ ಅಲ್ಪಸ್ವಲ್ಪ ಆದಾಯ ಹೆಚ್ಚಿದ್ದರೆ ತೆರಿಗೆ ಪಾವತಿಸಬಹುದಾ ಎಂಬ ಗೊಂದಲ ಏರ್ಪಟ್ಟ ಹಿನ್ನೆಲೆಯಲ್ಲಿ ಹೆಚ್ಚುವರಿ 27,000 ರೂವರೆಗೂ ವಿನಾಯಿತಿ ಮಿತಿ ಹೆಚ್ಚಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್