AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TCS FY22 Q4 Results: ಟಿಸಿಎಸ್ ನಾಲ್ಕನೇ ತ್ರೈಮಾಸಿಕ ಲಾಭ 9926 ಕೋಟಿ ರೂಪಾಯಿ; 22 ರೂ. ಡಿವಿಡೆಂಡ್

ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್​ನಿಂದ 2022ರ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಘೋಷಣೆಯನ್ನು ಮಾಡಲಾಗಿದ್ದು, 22 ರೂಪಾಯಿ ಅಂತಿಮ ಡಿವಿಡೆಂಡ್ ಪ್ರಸ್ತಾಪಿಸಲಾಗಿದೆ.

TCS FY22 Q4 Results: ಟಿಸಿಎಸ್ ನಾಲ್ಕನೇ ತ್ರೈಮಾಸಿಕ ಲಾಭ 9926 ಕೋಟಿ ರೂಪಾಯಿ; 22 ರೂ. ಡಿವಿಡೆಂಡ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 11, 2022 | 7:16 PM

Share

2021- 22ರ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಟಿಸಿಎಸ್ (TCS) ಫಲಿತಾಂಶಗಳು ಅಂದಾಜುಗಳಿಗೆ ಅನುಗುಣವಾಗಿ ಬಂದಿವೆ. ಏಪ್ರಿಲ್ 11ನೇ ತಾರೀಕಿನ ಸೋಮವಾರದಂದು ಪ್ರಕಟಿಸಿರುವ ಫಲಿತಾಂಶದಲ್ಲಿ ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪೆನಿಗಳಲ್ಲಿ ಒಂದಾದ ಟಿಸಿಎಸ್ ನಿವ್ವಳ ಲಾಭವು ವರ್ಷದಿಂದ ವರ್ಷಕ್ಕೆ ಶೇ 7.3ರಷ್ಟು ಹೆಚ್ಚುವರಿಯಾಗಿ ದಾಖಲಿಸಿದೆ ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಅದು ರೂ. 9926 ಕೋಟಿ ಆಗಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪೆನಿಯು ನಿವ್ವಳ ಲಾಭವು ರೂ. 9246 ಕೋಟಿ ಇತ್ತು. ಪರಿಶೀಲನೆಯಲ್ಲಿ ಇರುವ ತ್ರೈಮಾಸಿಕದ ಒಟ್ಟು ಆದಾಯವು ವರ್ಷದಿಂದ ವರ್ಷಕ್ಕೆ ಶೇ 16ರಷ್ಟು ಹೆಚ್ಚಳವಾಗಿ, 50,591 ಕೋಟಿ ರೂಪಾಯಿ ಮುಟ್ಟಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ 43706 ಕೋಟಿ ರೂಪಾಯಿ ಆಗಿತ್ತು.

ಫೈಲಿಂಗ್ ಮೂಲಕ ಕಂಪೆನಿಯು ನಿರ್ದೇಶಕರು 1 ರೂಪಾಯಿ ಮುಖಬೆಲೆಯ ಪ್ರತಿ ಷೇರಿಗೆ 22 ರೂಪಾಯಿ ಅಂತಿಮ ಲಾಭಾಂಶವನ್ನು ಶಿಫಾರಸು ಮಾಡುತ್ತಾರೆ ಎಂದು ತಿಳಿಸಿದೆ. ಇದು ಕಂಪೆನಿಯ ಷೇರುದಾರರ ಅನುಮೋದನೆಗೆ ಒಳಪಟ್ಟಿದ್ದು, 27ನೇ ವಾರ್ಷಿಕ ಸಾಮಾನ್ಯ ಸಭೆಯ ಮುಕ್ತಾಯದಿಂದ ನಾಲ್ಕನೇ ದಿನದಂದು ಪಾವತಿಸಲಾಗುವುದು/ರವಾನೆ ಮಾಡಲಾಗುವುದು.

“ಎಲ್ಲ ವರ್ಟಿಕಲ್​ಗಳು ಮಧ್ಯದಿಂದ ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿವೆ. ಬೆಳವಣಿಗೆಯು ರೀಟೇಲ್ ಮತ್ತು ಸಿಪಿಜಿ (ಶೇ 22.1), ಉತ್ಪಾದನೆಯ ವರ್ಟಿಕಲ್ (ಶೇ 19) ಮತ್ತು ಸಂವಹನ ಮತ್ತು ಮಾಧ್ಯಮ (ಶೇ 18.7) ಬೆಳವಣಿಗೆಯನ್ನು ಕಂಡಿವೆ. ತಂತ್ರಜ್ಞಾನ ಮತ್ತು ಸೇವೆಗಳು (ಶೇ 18) ಬೆಳೆದಿವೆ. ಮತ್ತು ಲೈಫ್ ಸೈನ್ಸಸ್ ಹಾಗೂ ಹೆಲ್ತ್‌ಕೇರ್ (ಶೇ 16.4 ರಷ್ಟು) ಬಿಎಫ್‌ಎಸ್‌ಐ (ಶೇ 12.9 ರಷ್ಟು) ಬೆಳೆದಿದೆ” ಎಂದು ಕಂಪೆನಿ ಹೇಳಿದೆ.

ಇದನ್ನೂ ಓದಿ: TCS Shares Buyback: ಮಾರ್ಚ್​ 9ರಿಂದ 23ರ ಮಧ್ಯೆ 18 ಸಾವಿರ ಕೋಟಿ ರೂ. ಮೊತ್ತದ ಟಿಸಿಎಸ್​ ಷೇರು ಮರುಖರೀದಿ

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ