AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಸಿಎಸ್ ಕಚೇರಿಯಲ್ಲಿ ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್; ಸಿಕ್ಕಿಬಿದ್ದ ಕಾಮಾಂಧರು

TCS sexual harassment case: ಟಾಟಾ ಕನ್ಸಲ್ಟೆನ್ಸಿ ಸರ್ವಿಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮತಾಂತರ ಒತ್ತಾಯ ಇತ್ಯಾದಿ ಘಟನೆಗಳು ಬೆಳಕಿಗೆ ಬಂದಿವೆ. ಆರೋಪಿಗಳನ್ನು ಹಿಡಿಯುವ ಮುನ್ನ ಆರು ಮಹಿಳಾ ಪೊಲೀಸರು ಟಿಸಿಎಸ್ ಕಚೇರಿಯಲ್ಲಿ ಅಂಡರ್​ಕವರ್ ಆಪರೇಶನ್ ನಡೆಸಿದ್ದರು. ಉದ್ಯೋಗಿಗಳ ಸೋಗಿನಲ್ಲಿ ಈ ಮಹಿಳಾ ಪೊಲೀಸರು 40 ದಿನ ಕಾರ್ಯಾಚರಣೆ ಮಾಡಿ, ದುರುಳರನ್ನು ಹಿಡಿಯಲು ನೆರವಾಗಿದ್ದಾರೆ.

ಟಿಸಿಎಸ್ ಕಚೇರಿಯಲ್ಲಿ ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್; ಸಿಕ್ಕಿಬಿದ್ದ ಕಾಮಾಂಧರು
ಟಿಸಿಎಸ್Image Credit source: Alamy
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 13, 2026 | 11:29 PM

Share

ಮುಂಬೈ, ಏಪ್ರಿಲ್ 13: ದೇಶದ ಅತಿದೊಡ್ಡ ಐಟಿ ಸರ್ವಿಸಸ್ ಸಂಸ್ಥೆಯಾದ ಟಿಸಿಎಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ (Sexual harassment) ಇತ್ಯಾದಿ ಅನ್ಯಾಯ ಘಟನೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಕೆಲ ಟಿಸಿಎಸ್ (TCS) ಉದ್ಯೋಗಿಗಳು ನೀಡಿದ ದೂರಿನ ಆಧಾರದ ಮೇಲೆ ಸತ್ಯಾಂಶ ಪತ್ತೆ ಮಾಡಲು ಆರು ಮಹಿಳಾ ಪೊಲೀಸರು ಅಂಡರ್​ಕವರ್ ಆಪರೇಷನ್ ಮಾಡಿ ಕಾಮಾಂಧರ ಬಣ್ಣ ಬಯಲು ಮಾಡಲು ನೆರವಾಗಿದ್ದಾರೆ. ಟಿಸಿಎಸ್​ನ ಎಚ್​ಆರ್ ಮ್ಯಾನೇಜರ್ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಆರು ಮಹಿಳಾ ಪೊಲೀಸರ ಅಂಡರ್​ಕವರ್ ಆಪರೇಷನ್

ಟಿಸಿಎಸ್​ನ ನಾಶಿಕ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ ಇತ್ಯಾದಿ ಘಟನೆಗಳು ನಡೆಯುತ್ತಿವೆ ಎಂದು ಸಾಲು ಸಾಲಾಗಿ ಕೆಲ ಉದ್ಯೋಗಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸರನ್ನು ಅಂಡರ್​ಕವರ್ ಆಪರೇಷನ್​ಗೆ ಕಳುಹಿಸಲಾಯಿತು. ಟಿಸಿಎಸ್ ಉದ್ಯೋಗಿಗಳ ಸೋಗಿನಲ್ಲಿ ಈ ಆರು ಮಹಿಳಾ ಪೊಲೀಸರು ಕಚೇರಿಯಲ್ಲಿ ಪ್ರತಿಯೊಬ್ಬರ ಚಲನವಲನ, ವರ್ತನೆಗಳ ಮೇಲೆ ಕಣ್ಣಿಡುತ್ತಾ ಹೋಗಿದ್ದರು. ಅದರಲ್ಲೂ ದೂರಿನಲ್ಲಿ ಪ್ರಸ್ತಾಪವಾದ ಆರೋಪಿಗಳ ಮೇಲೆ ಅವರು ನಿಗಾ ಇರಿಸಿದ್ದರು.

ಇದನ್ನೂ ಓದಿ: ಟಿಸಿಎಸ್​ ಮತಾಂತರ, ಲೈಂಗಿಕ ಕಿರುಕುಳ ಪ್ರಕರಣ; ಕಠಿಣ ತನಿಖೆಗೆ ಟಾಟಾ ಕಂಪನಿ​ ಆದೇಶ

40 ದಿನಗಳವರೆಗೆ ಈ ಆಪರೇಷನ್ ನಡೆದಿತ್ತು. ಬಿಪಿಒ ಕಚೇರಿಯಲ್ಲಿ ಮೀಟಿಂಗ್​ಗಳು ಮತ್ತು ವರ್ಕ್​ಸ್ಟೇಶನ್​ಗಳಲ್ಲಿ ಆರೋಪಿಗಳ ವರ್ತನೆಯನ್ನು ಗಮನಿಸತೊಡಗಿದ್ದರು. ಕಚೇರಿಯಲ್ಲಿ ತಮ್ಮ ಕೆಲಸದ ಅವಧಿ ಮುಗಿದ ಬಳಿಕ ಈ ಪೊಲೀಸರು ತಮ್ಮ ಹಿರಿಯ ಅಧಿಕಾರಿಗಳಿಗೆ ಎಲ್ಲಾ ಮಾಹಿತಿಯನ್ನೂ ಒಪ್ಪಿಸುತ್ತಿದ್ದರು. ಆರೋಪಿಗಳ ವಿರುದ್ಧ ಕೇಳಿಬಂದ ಆರೋಪಗಳಲ್ಲಿ ಹುರುಳಿದೆ ಎನ್ನುವುದು ಪೊಲೀಸರಿಗೆ ಮನವರಿಕೆ ಆಗಿತ್ತು.

ಟಿಸಿಎಸ್​ನ ಮಹಿಳಾ ಉದ್ಯೋಗಿಯೊಬ್ಬರು ಮಾರ್ಚ್ 26ರಂದು ದೇವಲಾಲಿ ಪೊಲೀಸ್ ಠಾಣೆಯಲ್ಲಿ ದೂರು ಕೊಡುತ್ತಾರೆ. ತನ್ನ ಮೇಲೆ ಹಿರಿಯ ಸಹೋದ್ಯೋಗಿಯಿಂದ ರೇಪ್ ಆಗಿದೆ ಎಂದು ಆರೋಪಿಸುತ್ತಾರೆ. ತನಿಖೆ ನಡೆಯುತ್ತಿರುವಂತೆಯೇ ಮತ್ತಷ್ಟು ಉದ್ಯೋಗಿಗಳು ಮುಂದೆ ಬಂದು ಕಂಪ್ಲೇಂಟ್ ನೀಡುತ್ತಾರೆ. ಮಾರ್ಚ್ 26ರಿಂದ ಏಪ್ರಿಲ್ 3ರವರೆಗೆ ಎಂಟು ಎಫ್​ಐಆರ್​ಗಳು ದಾಖಲಾಗುತ್ತವೆ.

ಟಿಸಿಎಸ್​ನ ಈ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯದ ದೂರುಗಳನ್ನು ಆಲಿಸಲು ಇಂಟರ್ನಲ್ ಕಂಪ್ಲೇಂಟ್ ಕಮಿಟಿ ಇದೆ. ಆದರೆ, ಉದ್ಯೋಗಿಗಳು ಇಲ್ಲಿ ದೂರು ಕೊಡಲು ಹಿಂಜರಿದಿದ್ದರು. ಆದರೆ, ಎಚ್​ಆರ್​ಗೆ ಉದ್ಯೋಗಿಗಳು ನೀಡಿದ ದೂರಿಗೆ ಯಾವುದೇ ಸ್ಪಂದನೆ ಸಿಗಲಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ನಾಸಿಕ್​ನ ಐಟಿ ಕಂಪನಿಯಲ್ಲಿ ಮಹಿಳೆಯರ ಮತಾಂತರ, ಲೈಂಗಿಕ ದೌರ್ಜನ್ಯ ದಂಧೆ ಬಯಲು 

ಪೊಲೀಸರು ಈ ಎಚ್​ಆರ್ ಮ್ಯಾನೇಜರ್ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ನಾಶಿಕ್ ಟಿಸಿಎಸ್ ಬಿಪಿಒದಲ್ಲಿ ಲೈಂಗಿಕ ಕಿರುಕುಳ ಘಟನೆಗಳು ಮಾತ್ರವಲ್ಲ, ದಬ್ಬಾಳಿಕೆ, ಬೆದರಿಕೆ, ಧಾರ್ಮಿಕ ಅವಹೇಳನ ಇತ್ಯಾದಿ ಪೀಡನೆಗಳು ನಡೆಯುತ್ತಿವೆ ಎಂಬುದು ದೂರುಗಳಿಂದ ತಿಳಿದುಬರುತ್ತದೆ.

ಸದ್ಯ ಈ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ರಚಿಸಲಾಗಿದೆ. ಸಂದೀಪ್ ಮಿಟ್ಕೆ ಈ ಎಸ್​ಐಟಿ ತಂಡದ ನೇತೃತ್ವ ವಹಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ