TCS Shocker: ಕಾಸು ಕೊಟ್ಟವನಿಗೆ ಕೆಲಸ; ಟಿಸಿಎಸ್​ನಲ್ಲಿ ಹಿರಿಯ ಅಧಿಕಾರಿಗಳಿಂದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಖಾಸಗಿ ವಲಯಕ್ಕೂ ಬಂತಾ ಸರ್ಕಾರಿ ಕಾಯಿಲೆ?

Bribes for Jobs Scam at TCS: ಟಿಸಿಎಸ್​ನ ಹಿರಿಯ ಅಧಿಕಾರಿಗಳು ಅಭ್ಯರ್ಥಿಗಳಿಗೆ ಕೆಲಸ ಕೊಡಲು ರೆಕ್ರುಟಿಂಗ್ ಏಜೆನ್ಸಿಗಳಿಂದ ಕಮಿಷನ್ ಪಡೆಯುತ್ತಿದ್ದ ಅಚ್ಚರಿಯ ಪ್ರಕರಣ ಬಯಲಿಗೆ ಬಂದಿದೆ. ಟಿಸಿಎಸ್​ನ ಆರ್​ಎಂಜಿ ಗ್ಲೋಬಲ್ ಹೆಡ್ ಸೇರಿದಂತೆ ಹಲವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

TCS Shocker: ಕಾಸು ಕೊಟ್ಟವನಿಗೆ ಕೆಲಸ; ಟಿಸಿಎಸ್​ನಲ್ಲಿ ಹಿರಿಯ ಅಧಿಕಾರಿಗಳಿಂದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಖಾಸಗಿ ವಲಯಕ್ಕೂ ಬಂತಾ ಸರ್ಕಾರಿ ಕಾಯಿಲೆ?
ಟಿಸಿಎಸ್
Follow us
|

Updated on: Jun 23, 2023 | 12:10 PM

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದೆನಿಸಿರುವ ಮತ್ತು ಭಾರತದಲ್ಲಿ ಅತಿಹೆಚ್ಚು ಐಟಿ ಉದ್ಯೋಗಿಗಳನ್ನು ಹೊಂದಿರುವ ಹಾಗೂ ಅತ್ಯುತ್ತಮ ಕೆಲಸದ ವಾತಾರವಣಕ್ಕೆ ಹೆಸರುವಾಸಿಯೂ ಆಗಿರುವ ಟಾಟಾ ಕನ್ಸಲ್ಟೆನ್ಸಿ ಸಂಸ್ಥೆ(TCS- Tata Consultancy Services) ಒಳ್ಳೆಯ ಹೆಸರಿಗೆ ಮಸಿ ಮೆತ್ತುವಂತಹ ಬೆಳವಣಿಗೆ ಬೆಳಕಿಗೆ ಬಂದಿದೆ. ಟಿಸಿಎಸ್​ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲಸ ಕೊಡಲು ಕನ್ಸಲ್ಟೆನ್ಸಿ ಸಂಸ್ಥೆಗಳಿಂದ ಲಂಚ ಸ್ವೀಕರಿಸಿದ (Bribes For Jobs Scam) ಪ್ರಕರಣ ಇದು. ಟಿಸಿಎಸ್​ನ ಕೆಲ ಹಿರಿಯ ಅಧಿಕಾರಿಗಳೇ ಈ ಕೃತ್ಯದಲ್ಲಿ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ. ದಿ ಮಿಂಟ್ ಪತ್ರಿಕೆ ಈ ಎಕ್ಸ್​ಕ್ಲೂಸಿವ್ ವರದಿ ಪ್ರಕಟಿಸಿದ್ದು, 100 ಕೋಟಿ ರೂ ಮೊತ್ತದ ಕರ್ಮಕಾಂಡದ ಕಥೆ ಇದಾಗಿದೆ. ಕಂಪನಿಯ ಉದ್ಯೋಗಿಯೊಬ್ಬರು ಈ ಪ್ರಕರಣವನ್ನು ಸಿಇಒ ಮತ್ತು ಸಿಒಒ ಗಮನಕ್ಕೆ ತಂದಿದ್ದರಿಂದ ಕರ್ಮಕಾಂಡ ಬಯಲಿಗೆ ಬಂದಿದೆ. ಭ್ರಷ್ಟಾಚಾರದಲ್ಲಿ ತೊಡಗಿದ್ದರೆಂದು ಆರೋಪಿಸಲಾಗಿರುವ ರಿಸೋರ್ಸ್ ಮ್ಯಾನೇಜ್ಮೆಂಟ್ ಗ್ರೂಪ್​ನ ಗ್ಲೋಬಲ್ ಹೆಡ್ ಇಎಸ್ ಚಕ್ರವರ್ತಿ ಸೆರಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ಟಿಸಿಎಸ್ ವಜಾಗೊಳಿಸಿದೆ. ಜೊತೆಗೆ, ಮೂರು ಸ್ಟ್ಯಾಫಿಂಗ್ ಸಂಸ್ಥೆ ಅಥವಾ ಕನ್ಸಲ್ಟೆನ್ಸಿ ಸಂಸ್ಥೆಗಳನ್ನು ನಿಷೇಧಿಸಿದೆ.

ಟಿಸಿಎಸ್​ನಲ್ಲಿ ಇಂಥದ್ದೊಂದು ಭ್ರಷ್ಟಾಚಾರ ಹಗರಣ ಬಯಲಿಗೆ ಬಂದಿದ್ದು ಇದೇ ಮೊದಲು. ಸಂಸ್ಥೆಯ ಹಿರಿಯರಾದ ಕೆ ಕೃತಿವಾಸನ್ ಅವರು ಸಿಇಒ ಆಗಿ ನೇಮಕವಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಆಗಿದೆ.

ಇದನ್ನೂ ಓದಿHAL: ಅಮೆರಿಕದ ಜಿಇ ಜೊತೆ ಸೇರಿ ಫೈಟರ್ ಜೆಟ್ ಎಂಜಿನ್ ತಯಾರಿಕೆಗೆ ಎಚ್​ಎಎಲ್ ಒಪ್ಪಂದ; ಒಮ್ಮೆಲೇ ಜಿಗಿದ ಷೇರುಬೆಲೆ

ಗಮನಿಸಬೇಕಾದ ಸಂಗತಿ ಎಂದರೆ ಉದ್ಯೋಗ ಹಂಚಿಕೆಗೆ ಲಂಚ ಸ್ವೀಕರಿಸುವ ಕಾರ್ಯ ಕಳೆದ 3 ವರ್ಷಗಳಿಂದ ನಡೆದಿತ್ತು ಎಂದು ಹೇಳಲಾಗುತ್ತಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಉದ್ಯೋಗಿ ಈ ಬಗ್ಗೆ ಸಿಇಒ ಮತ್ತು ಸಿಒಒ ಅವರಿಗೆ ರಹಸ್ಯವಾಗಿ ಮಾಹಿತಿ ಕೊಟ್ಟಿದ್ದರು. ಟಿಸಿಎಸ್​ನ ರಿಸೋರ್ಸ್ ಮ್ಯಾನೇಜ್ಮೆಂಟ್ ಗ್ರೂಪ್​ನ ಗ್ಲೋಬಲ್ ಮುಖ್ಯಸ್ಥ ಇಎಸ್ ಚಕ್ರವರ್ತಿ ಅವರು ಹೈರಿಂಗ್ ಏಜೆನ್ಸಿಗಳಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು.

ಆ ಬಳಿಕ ಟಿಸಿಎಸ್​ನ ಟಾಪ್ ಮ್ಯಾನೇಜ್ಮೆಂಟ್ ಒಂದು ಕಮಿಟಿ ರಚಿಸಿ ತನಿಖೆ ನಡೆಸಿತು. ಅದಾದ ಬಳಿಕ ನೇಮಕಾತಿ ವಿಭಾಗದ ಮುಖ್ಯಸ್ಥರನ್ನು ರಜೆಯ ಮೆಲೆ ಕಳುಹಿಸಿತು. ಆರ್​ಎಂಜಿಯ ನಾಲ್ವರು ಅಧಿಕಾರಿಗಳನ್ನು ಕೆಲಸದಿಂದ ತೆಗೆದುಹಾಕಲಾಯಿತು. ಇಎಸ್ ಚಕ್ರವರ್ತಿ ಅವರನ್ನು ಕಚೇರಿಗೆ ಬರದಂತೆ ನಿರ್ಬಂಧಿಸಲಾಯಿತು. ಆರ್​ಬಿಎಂ ವಿಭಾಗದ ಮತ್ತೊಬ್ಬ ಅಧಿಕಾರಿ ಜಿಕೆ ಅರುಣ್ ಅವರನ್ನೂ ಮನೆಗೆ ಕಳುಹಿಸಲಾಯಿತು.

ಇದನ್ನೂ ಓದಿPM Kisan: ಮೊಬೈಲ್​ನಲ್ಲಿ ಮುಖ ಸ್ಕ್ಯಾನ್ ಮಾಡಿ, ಪಿಎಂ ಕಿಸಾನ್ ಸ್ಕೀಮ್​ಗೆ ಇಕೆವೈಸಿ ಪೂರ್ಣಗೊಳಿಸಿ; ಫಿಂಗರ್ ಪ್ರಿಂಟ್ ಬೇಕಿಲ್ಲ, ಕೂತಲ್ಲೇ ಮುಗಿಯುತ್ತೆ ಇ-ಕೆವೈಸಿ

ಟಿಸಿಎಸ್​ನ ಅಧಿಕಾರಿಯೊಬ್ಬರು ಈ ಬಗ್ಗೆ ಮಿಂಟ್​ಗೆ ಪ್ರತಿಕ್ರಿಯಿಸಿದ್ದು, ಈ ಬೆಳವಣಿಗೆಯಿಂದ ಕಂಪನಿಯ ಹಿರಿಯ ನಾಯಕತ್ವವು ಆಘಾತಗೊಂಡಿರುವುದಾಗಿ ತಿಳಿಸಿದ್ದಾರೆ. ಕಳೆದ 3 ವರ್ಷಗಳಿಂದ ಕಂಪನಿ 3 ಲಕ್ಷ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಂಡಿದೆ. ಇವರಿಗೆ ಕೆಲಸ ಕೊಡಲು ಪಡೆದಿರುವ ಕಮಿಷನ್​ಗಳನ್ನು ಗಣಿಸಿದರೆ 100 ಕೋಟಿ ಆಗಬಹುದು ಎಂದೂ ಒಬ್ಬ ಅಧಿಕಾರಿ ಹೇಳಿದ್ದಾಗಿ ಮಿಂಟ್ ವರದಿ ಮಾಡಿದೆ. ಆದರೆ, ಕಳೆದ 3 ವರ್ಷಗಳಿಂದ ಈ ಘಟನೆ ನಡೆಯುತ್ತಿದ್ದರೂ ಟಾಪ್ ಎಕ್ಸಿಕ್ಯೂಟಿವ್​ಗಳ ಗಮನಕ್ಕೆ ಹೇಗೆ ಬಾರದೇ ಹೋಯಿತು ಎಂಬುದೂ ಸೋಜಿಗ.

ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಮಾತ್ರವೇ ಇಂಥ ಲಂಚ ಘಟನೆಗಳನ್ನು ಕಂಡು ಅಭ್ಯಾಸವಾಗಿರುವ ಜನಸಾಮಾನ್ಯರಿಗೆ ಕಾರ್ಪೊರೇಟ್ ಕಂಪನಿಯೊಳಗಿನ ಭ್ರಷ್ಟಾಚಾರ ಕಂಡು ಆಘಾತಗೊಳ್ಳುವುದರಲ್ಲಿ ಅಚ್ಚರಿ ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ