AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TCS Shocker: ಕಾಸು ಕೊಟ್ಟವನಿಗೆ ಕೆಲಸ; ಟಿಸಿಎಸ್​ನಲ್ಲಿ ಹಿರಿಯ ಅಧಿಕಾರಿಗಳಿಂದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಖಾಸಗಿ ವಲಯಕ್ಕೂ ಬಂತಾ ಸರ್ಕಾರಿ ಕಾಯಿಲೆ?

Bribes for Jobs Scam at TCS: ಟಿಸಿಎಸ್​ನ ಹಿರಿಯ ಅಧಿಕಾರಿಗಳು ಅಭ್ಯರ್ಥಿಗಳಿಗೆ ಕೆಲಸ ಕೊಡಲು ರೆಕ್ರುಟಿಂಗ್ ಏಜೆನ್ಸಿಗಳಿಂದ ಕಮಿಷನ್ ಪಡೆಯುತ್ತಿದ್ದ ಅಚ್ಚರಿಯ ಪ್ರಕರಣ ಬಯಲಿಗೆ ಬಂದಿದೆ. ಟಿಸಿಎಸ್​ನ ಆರ್​ಎಂಜಿ ಗ್ಲೋಬಲ್ ಹೆಡ್ ಸೇರಿದಂತೆ ಹಲವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

TCS Shocker: ಕಾಸು ಕೊಟ್ಟವನಿಗೆ ಕೆಲಸ; ಟಿಸಿಎಸ್​ನಲ್ಲಿ ಹಿರಿಯ ಅಧಿಕಾರಿಗಳಿಂದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆ; ಖಾಸಗಿ ವಲಯಕ್ಕೂ ಬಂತಾ ಸರ್ಕಾರಿ ಕಾಯಿಲೆ?
ಟಿಸಿಎಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 23, 2023 | 12:10 PM

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದೆನಿಸಿರುವ ಮತ್ತು ಭಾರತದಲ್ಲಿ ಅತಿಹೆಚ್ಚು ಐಟಿ ಉದ್ಯೋಗಿಗಳನ್ನು ಹೊಂದಿರುವ ಹಾಗೂ ಅತ್ಯುತ್ತಮ ಕೆಲಸದ ವಾತಾರವಣಕ್ಕೆ ಹೆಸರುವಾಸಿಯೂ ಆಗಿರುವ ಟಾಟಾ ಕನ್ಸಲ್ಟೆನ್ಸಿ ಸಂಸ್ಥೆ(TCS- Tata Consultancy Services) ಒಳ್ಳೆಯ ಹೆಸರಿಗೆ ಮಸಿ ಮೆತ್ತುವಂತಹ ಬೆಳವಣಿಗೆ ಬೆಳಕಿಗೆ ಬಂದಿದೆ. ಟಿಸಿಎಸ್​ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲಸ ಕೊಡಲು ಕನ್ಸಲ್ಟೆನ್ಸಿ ಸಂಸ್ಥೆಗಳಿಂದ ಲಂಚ ಸ್ವೀಕರಿಸಿದ (Bribes For Jobs Scam) ಪ್ರಕರಣ ಇದು. ಟಿಸಿಎಸ್​ನ ಕೆಲ ಹಿರಿಯ ಅಧಿಕಾರಿಗಳೇ ಈ ಕೃತ್ಯದಲ್ಲಿ ಶಾಮೀಲಾಗಿರುವುದು ಬೆಳಕಿಗೆ ಬಂದಿದೆ. ದಿ ಮಿಂಟ್ ಪತ್ರಿಕೆ ಈ ಎಕ್ಸ್​ಕ್ಲೂಸಿವ್ ವರದಿ ಪ್ರಕಟಿಸಿದ್ದು, 100 ಕೋಟಿ ರೂ ಮೊತ್ತದ ಕರ್ಮಕಾಂಡದ ಕಥೆ ಇದಾಗಿದೆ. ಕಂಪನಿಯ ಉದ್ಯೋಗಿಯೊಬ್ಬರು ಈ ಪ್ರಕರಣವನ್ನು ಸಿಇಒ ಮತ್ತು ಸಿಒಒ ಗಮನಕ್ಕೆ ತಂದಿದ್ದರಿಂದ ಕರ್ಮಕಾಂಡ ಬಯಲಿಗೆ ಬಂದಿದೆ. ಭ್ರಷ್ಟಾಚಾರದಲ್ಲಿ ತೊಡಗಿದ್ದರೆಂದು ಆರೋಪಿಸಲಾಗಿರುವ ರಿಸೋರ್ಸ್ ಮ್ಯಾನೇಜ್ಮೆಂಟ್ ಗ್ರೂಪ್​ನ ಗ್ಲೋಬಲ್ ಹೆಡ್ ಇಎಸ್ ಚಕ್ರವರ್ತಿ ಸೆರಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ಟಿಸಿಎಸ್ ವಜಾಗೊಳಿಸಿದೆ. ಜೊತೆಗೆ, ಮೂರು ಸ್ಟ್ಯಾಫಿಂಗ್ ಸಂಸ್ಥೆ ಅಥವಾ ಕನ್ಸಲ್ಟೆನ್ಸಿ ಸಂಸ್ಥೆಗಳನ್ನು ನಿಷೇಧಿಸಿದೆ.

ಟಿಸಿಎಸ್​ನಲ್ಲಿ ಇಂಥದ್ದೊಂದು ಭ್ರಷ್ಟಾಚಾರ ಹಗರಣ ಬಯಲಿಗೆ ಬಂದಿದ್ದು ಇದೇ ಮೊದಲು. ಸಂಸ್ಥೆಯ ಹಿರಿಯರಾದ ಕೆ ಕೃತಿವಾಸನ್ ಅವರು ಸಿಇಒ ಆಗಿ ನೇಮಕವಾದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಆಗಿದೆ.

ಇದನ್ನೂ ಓದಿHAL: ಅಮೆರಿಕದ ಜಿಇ ಜೊತೆ ಸೇರಿ ಫೈಟರ್ ಜೆಟ್ ಎಂಜಿನ್ ತಯಾರಿಕೆಗೆ ಎಚ್​ಎಎಲ್ ಒಪ್ಪಂದ; ಒಮ್ಮೆಲೇ ಜಿಗಿದ ಷೇರುಬೆಲೆ

ಗಮನಿಸಬೇಕಾದ ಸಂಗತಿ ಎಂದರೆ ಉದ್ಯೋಗ ಹಂಚಿಕೆಗೆ ಲಂಚ ಸ್ವೀಕರಿಸುವ ಕಾರ್ಯ ಕಳೆದ 3 ವರ್ಷಗಳಿಂದ ನಡೆದಿತ್ತು ಎಂದು ಹೇಳಲಾಗುತ್ತಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಉದ್ಯೋಗಿ ಈ ಬಗ್ಗೆ ಸಿಇಒ ಮತ್ತು ಸಿಒಒ ಅವರಿಗೆ ರಹಸ್ಯವಾಗಿ ಮಾಹಿತಿ ಕೊಟ್ಟಿದ್ದರು. ಟಿಸಿಎಸ್​ನ ರಿಸೋರ್ಸ್ ಮ್ಯಾನೇಜ್ಮೆಂಟ್ ಗ್ರೂಪ್​ನ ಗ್ಲೋಬಲ್ ಮುಖ್ಯಸ್ಥ ಇಎಸ್ ಚಕ್ರವರ್ತಿ ಅವರು ಹೈರಿಂಗ್ ಏಜೆನ್ಸಿಗಳಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು.

ಆ ಬಳಿಕ ಟಿಸಿಎಸ್​ನ ಟಾಪ್ ಮ್ಯಾನೇಜ್ಮೆಂಟ್ ಒಂದು ಕಮಿಟಿ ರಚಿಸಿ ತನಿಖೆ ನಡೆಸಿತು. ಅದಾದ ಬಳಿಕ ನೇಮಕಾತಿ ವಿಭಾಗದ ಮುಖ್ಯಸ್ಥರನ್ನು ರಜೆಯ ಮೆಲೆ ಕಳುಹಿಸಿತು. ಆರ್​ಎಂಜಿಯ ನಾಲ್ವರು ಅಧಿಕಾರಿಗಳನ್ನು ಕೆಲಸದಿಂದ ತೆಗೆದುಹಾಕಲಾಯಿತು. ಇಎಸ್ ಚಕ್ರವರ್ತಿ ಅವರನ್ನು ಕಚೇರಿಗೆ ಬರದಂತೆ ನಿರ್ಬಂಧಿಸಲಾಯಿತು. ಆರ್​ಬಿಎಂ ವಿಭಾಗದ ಮತ್ತೊಬ್ಬ ಅಧಿಕಾರಿ ಜಿಕೆ ಅರುಣ್ ಅವರನ್ನೂ ಮನೆಗೆ ಕಳುಹಿಸಲಾಯಿತು.

ಇದನ್ನೂ ಓದಿPM Kisan: ಮೊಬೈಲ್​ನಲ್ಲಿ ಮುಖ ಸ್ಕ್ಯಾನ್ ಮಾಡಿ, ಪಿಎಂ ಕಿಸಾನ್ ಸ್ಕೀಮ್​ಗೆ ಇಕೆವೈಸಿ ಪೂರ್ಣಗೊಳಿಸಿ; ಫಿಂಗರ್ ಪ್ರಿಂಟ್ ಬೇಕಿಲ್ಲ, ಕೂತಲ್ಲೇ ಮುಗಿಯುತ್ತೆ ಇ-ಕೆವೈಸಿ

ಟಿಸಿಎಸ್​ನ ಅಧಿಕಾರಿಯೊಬ್ಬರು ಈ ಬಗ್ಗೆ ಮಿಂಟ್​ಗೆ ಪ್ರತಿಕ್ರಿಯಿಸಿದ್ದು, ಈ ಬೆಳವಣಿಗೆಯಿಂದ ಕಂಪನಿಯ ಹಿರಿಯ ನಾಯಕತ್ವವು ಆಘಾತಗೊಂಡಿರುವುದಾಗಿ ತಿಳಿಸಿದ್ದಾರೆ. ಕಳೆದ 3 ವರ್ಷಗಳಿಂದ ಕಂಪನಿ 3 ಲಕ್ಷ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಂಡಿದೆ. ಇವರಿಗೆ ಕೆಲಸ ಕೊಡಲು ಪಡೆದಿರುವ ಕಮಿಷನ್​ಗಳನ್ನು ಗಣಿಸಿದರೆ 100 ಕೋಟಿ ಆಗಬಹುದು ಎಂದೂ ಒಬ್ಬ ಅಧಿಕಾರಿ ಹೇಳಿದ್ದಾಗಿ ಮಿಂಟ್ ವರದಿ ಮಾಡಿದೆ. ಆದರೆ, ಕಳೆದ 3 ವರ್ಷಗಳಿಂದ ಈ ಘಟನೆ ನಡೆಯುತ್ತಿದ್ದರೂ ಟಾಪ್ ಎಕ್ಸಿಕ್ಯೂಟಿವ್​ಗಳ ಗಮನಕ್ಕೆ ಹೇಗೆ ಬಾರದೇ ಹೋಯಿತು ಎಂಬುದೂ ಸೋಜಿಗ.

ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಮಾತ್ರವೇ ಇಂಥ ಲಂಚ ಘಟನೆಗಳನ್ನು ಕಂಡು ಅಭ್ಯಾಸವಾಗಿರುವ ಜನಸಾಮಾನ್ಯರಿಗೆ ಕಾರ್ಪೊರೇಟ್ ಕಂಪನಿಯೊಳಗಿನ ಭ್ರಷ್ಟಾಚಾರ ಕಂಡು ಆಘಾತಗೊಳ್ಳುವುದರಲ್ಲಿ ಅಚ್ಚರಿ ಇಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ