AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Mahindra: ಟೆಕ್​ ಮಹೀಂದ್ರಾ ಎರಡನೇ ತ್ರೈಮಾಸಿಕ ಲಾಭ ಶೇ 26ರಷ್ಟು ಹೆಚ್ಚಳ; 15 ರೂ. ವಿಶೇಷ ಡಿವಿಡೆಂಡ್ ಘೋಷಣೆ

ಟೆಕ್​ ಮಹೀಂದ್ರಾದಿಂದ 2021-22ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಫಲಿತಾಂಶ ಪ್ರಕಟಿಸಿದ್ದು, ಶೇ 26ರಷ್ಟು ಹೆಚ್ಚು ಲಾಭ ಗಳಿಸಿದೆ. 15 ರೂಪಾಯಿಯಂತೆ ಪ್ರತಿ ಷೇರಿಗೆ ವಿಶೇಷ ಲಾಭಾಂಶ ಘೋಷಣೆ ಮಾಡಲಾಗಿದೆ.

Tech Mahindra: ಟೆಕ್​ ಮಹೀಂದ್ರಾ ಎರಡನೇ ತ್ರೈಮಾಸಿಕ ಲಾಭ ಶೇ 26ರಷ್ಟು ಹೆಚ್ಚಳ; 15 ರೂ. ವಿಶೇಷ ಡಿವಿಡೆಂಡ್ ಘೋಷಣೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 25, 2021 | 6:59 PM

Share

ಮಾಹಿತಿ ತಂತ್ರಜ್ಞಾನ ಕಂಪೆನಿ ಟೆಕ್​ ಮಹೀಂದ್ರಾದ ಕ್ರೋಡೀಕೃತ ಲಾಭವು ಸೆಪ್ಟೆಂಬರ್ ತ್ರೈಮಾಸಿಕಕ್ಕೆ (Q2FY22) ಶೇ 26ರಷ್ಟು ಹೆಚ್ಚಾಗಿ 1,338 ಕೋಟಿ ರೂಪಾಯಿ ಆಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 1064 ಕೋಟಿ ರೂಪಾಯಿ ಲಾಭ ಬಂದಿತ್ತು. ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ತೆರಿಗೆ ನಂತರದ ಲಾಭ (PAT) ಶೇ 1.1ರಷ್ಟು ಇಳಿಕೆ ಆಗಿದೆ. ಮೊದಲ ತ್ರೈಮಾಸಿಕದಲ್ಲಿ 1353 ಕೋಟಿ ಲಾಭ ಬಂದಿತ್ತು.

ಕಾರ್ಯ ನಿರ್ವಹಣೆಯಿಂದ ಕ್ರೋಡೀಕೃತ ಆದಾಯವು ಶೇ 16ರಷ್ಟು ಏರಿಕೆಯಾಗಿ 10,881 ಕೋಟಿ ಬಂದಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ 9371 ಕೋಟಿ ರೂಪಾಯಿ ಆಗಿತ್ತು. ಡಾಲರ್ ಪರಿಭಾಷೆಯಲ್ಲಿ, ಆದಾಯವು ಈ ತ್ರೈಮಾಸಿಕದಲ್ಲಿ 1473 ಮಿಲಿಯನ್ ಅಮೆರಿಕನ್ ಡಾಲರ್ ಆದಾಯ ಆಗಿದೆ. ಕಂಪೆನಿಯು ಪ್ರತಿ ಈಕ್ವಿಟಿ ಷೇರಿಗೆ 15 ರೂಪಾಯಿ ವಿಶೇಷ ಲಾಭಾಂಶ ಘೋಷಣೆ ಮಾಡಲಾಗಿದೆ.

ಈ ತ್ರೈಮಾಸಿಕದಲ್ಲಿ ಟೆಕ್​ ಮಹೀಂದ್ರಾಗೆ EBITDA 1995 ಕೋಟಿ ಬಂದಿದೆ. ಸೆಪ್ಟೆಂಬರ್ ಕೊನೆಗೆ ಕಂಪೆನಿಯ ಒಟ್ಟು ಉದ್ಯೋಗಿಗಳ ಸಂಖ್ಯೆ 1,41,193 ಇದೆ. ಕೆಲಸ ಬಿಡುವವರ ಸಂಖ್ಯೆ ಈ ತ್ರೈಮಾಸಿಕದಲ್ಲಿ ಶೇ 21ಕ್ಕೆ ಹೆಚ್ಚಳವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 14ರಷ್ಟು ಜಾಸ್ತಿಯಾಗಿದ್ದು, ಜೂನ್ ತ್ರೈಮಾಸಿಕಕ್ಕೆ ಹೋಲಿಸಿದಲ್ಲಿ ಶೇ17ರಷ್ಟು ಹೆಚ್ಚಾಗಿದೆ. ಫಲಿತಾಂಶಕ್ಕೂ ಮುನ್ನ ಟೆಕ್​ ಮಹೀಂದ್ರಾ ಷೇರಿನ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಿ, ಎನ್​ಎಸ್​ಇಯಲ್ಲಿ 1531 ರೂಪಾಯಿಗೆ ಸೋಮವಾರದ ವಹಿವಾಟು ಮುಗಿದಿದೆ.

ಇದನ್ನೂ ಓದಿ: Mahindra XUV700: ಅಪಾರ ಫೀಚರ್, ಹೊಸತನಗಳ ಮಹೀಂದ್ರಾ XUV700 ಎಸ್​ಯುವಿ ಬೆಲೆ ಮತ್ತಿತರ ವಿವರಗಳು

Published On - 6:58 pm, Mon, 25 October 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ