Sign In

By signing in or creating an account, you agree with Associated Broadcasting Company's Terms & Conditions and Privacy Policy.

Tech Mahindra: ಟೆಕ್​ ಮಹೀಂದ್ರಾ ಎರಡನೇ ತ್ರೈಮಾಸಿಕ ಲಾಭ ಶೇ 26ರಷ್ಟು ಹೆಚ್ಚಳ; 15 ರೂ. ವಿಶೇಷ ಡಿವಿಡೆಂಡ್ ಘೋಷಣೆ

ಟೆಕ್​ ಮಹೀಂದ್ರಾದಿಂದ 2021-22ರ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದ ಫಲಿತಾಂಶ ಪ್ರಕಟಿಸಿದ್ದು, ಶೇ 26ರಷ್ಟು ಹೆಚ್ಚು ಲಾಭ ಗಳಿಸಿದೆ. 15 ರೂಪಾಯಿಯಂತೆ ಪ್ರತಿ ಷೇರಿಗೆ ವಿಶೇಷ ಲಾಭಾಂಶ ಘೋಷಣೆ ಮಾಡಲಾಗಿದೆ.

Tech Mahindra: ಟೆಕ್​ ಮಹೀಂದ್ರಾ ಎರಡನೇ ತ್ರೈಮಾಸಿಕ ಲಾಭ ಶೇ 26ರಷ್ಟು ಹೆಚ್ಚಳ; 15 ರೂ. ವಿಶೇಷ ಡಿವಿಡೆಂಡ್ ಘೋಷಣೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Oct 25, 2021 | 6:59 PM

ಮಾಹಿತಿ ತಂತ್ರಜ್ಞಾನ ಕಂಪೆನಿ ಟೆಕ್​ ಮಹೀಂದ್ರಾದ ಕ್ರೋಡೀಕೃತ ಲಾಭವು ಸೆಪ್ಟೆಂಬರ್ ತ್ರೈಮಾಸಿಕಕ್ಕೆ (Q2FY22) ಶೇ 26ರಷ್ಟು ಹೆಚ್ಚಾಗಿ 1,338 ಕೋಟಿ ರೂಪಾಯಿ ಆಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 1064 ಕೋಟಿ ರೂಪಾಯಿ ಲಾಭ ಬಂದಿತ್ತು. ಕಳೆದ ತ್ರೈಮಾಸಿಕಕ್ಕೆ ಹೋಲಿಸಿದರೆ ತೆರಿಗೆ ನಂತರದ ಲಾಭ (PAT) ಶೇ 1.1ರಷ್ಟು ಇಳಿಕೆ ಆಗಿದೆ. ಮೊದಲ ತ್ರೈಮಾಸಿಕದಲ್ಲಿ 1353 ಕೋಟಿ ಲಾಭ ಬಂದಿತ್ತು.

ಕಾರ್ಯ ನಿರ್ವಹಣೆಯಿಂದ ಕ್ರೋಡೀಕೃತ ಆದಾಯವು ಶೇ 16ರಷ್ಟು ಏರಿಕೆಯಾಗಿ 10,881 ಕೋಟಿ ಬಂದಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ 9371 ಕೋಟಿ ರೂಪಾಯಿ ಆಗಿತ್ತು. ಡಾಲರ್ ಪರಿಭಾಷೆಯಲ್ಲಿ, ಆದಾಯವು ಈ ತ್ರೈಮಾಸಿಕದಲ್ಲಿ 1473 ಮಿಲಿಯನ್ ಅಮೆರಿಕನ್ ಡಾಲರ್ ಆದಾಯ ಆಗಿದೆ. ಕಂಪೆನಿಯು ಪ್ರತಿ ಈಕ್ವಿಟಿ ಷೇರಿಗೆ 15 ರೂಪಾಯಿ ವಿಶೇಷ ಲಾಭಾಂಶ ಘೋಷಣೆ ಮಾಡಲಾಗಿದೆ.

ಈ ತ್ರೈಮಾಸಿಕದಲ್ಲಿ ಟೆಕ್​ ಮಹೀಂದ್ರಾಗೆ EBITDA 1995 ಕೋಟಿ ಬಂದಿದೆ. ಸೆಪ್ಟೆಂಬರ್ ಕೊನೆಗೆ ಕಂಪೆನಿಯ ಒಟ್ಟು ಉದ್ಯೋಗಿಗಳ ಸಂಖ್ಯೆ 1,41,193 ಇದೆ. ಕೆಲಸ ಬಿಡುವವರ ಸಂಖ್ಯೆ ಈ ತ್ರೈಮಾಸಿಕದಲ್ಲಿ ಶೇ 21ಕ್ಕೆ ಹೆಚ್ಚಳವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 14ರಷ್ಟು ಜಾಸ್ತಿಯಾಗಿದ್ದು, ಜೂನ್ ತ್ರೈಮಾಸಿಕಕ್ಕೆ ಹೋಲಿಸಿದಲ್ಲಿ ಶೇ17ರಷ್ಟು ಹೆಚ್ಚಾಗಿದೆ. ಫಲಿತಾಂಶಕ್ಕೂ ಮುನ್ನ ಟೆಕ್​ ಮಹೀಂದ್ರಾ ಷೇರಿನ ಬೆಲೆಯಲ್ಲಿ ಅಲ್ಪ ಪ್ರಮಾಣದ ಏರಿಕೆಯಾಗಿ, ಎನ್​ಎಸ್​ಇಯಲ್ಲಿ 1531 ರೂಪಾಯಿಗೆ ಸೋಮವಾರದ ವಹಿವಾಟು ಮುಗಿದಿದೆ.

ಇದನ್ನೂ ಓದಿ: Mahindra XUV700: ಅಪಾರ ಫೀಚರ್, ಹೊಸತನಗಳ ಮಹೀಂದ್ರಾ XUV700 ಎಸ್​ಯುವಿ ಬೆಲೆ ಮತ್ತಿತರ ವಿವರಗಳು

Published On - 6:58 pm, Mon, 25 October 21

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!