AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಹೈದರಾಬಾದ್ ಮಧ್ಯೆ ಜೀವ ವಿಜ್ಞಾನ ಕಾರಿಡಾರ್: ತೆಲಂಗಾಣ ಸಚಿವ ಕೆಟಿಆರ್ ಪ್ರಸ್ತಾಪ

KT Rama Rao Speaks: ಹೈದರಾಬಾದ್ ಮತ್ತು ಬೆಂಗಳೂರು ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರತಿಸ್ಪರ್ಧಿಗಳಾಗಿವೆ. ನನಗೆ ಹೈದರಾಬಾದ್​ನಷ್ಟೇ ಬೆಂಗಳೂರೂ ಇಷ್ಟ. ನಾವು ಸಹಭಾಗಿತ್ವ ಸಾಧಿಸಿ ಒಗ್ಗೂಡಿದರೆ ಒಟ್ಟಿಗೆ ಬೆಳೆದು ದೇಶದ ಉನ್ನತಿಗೆ ಕಾರಣವಾಗಬಹುದು ಎಂದು ಕೆಟಿ ರಾಮರಾವ್ ಹೇಳಿದ್ದಾರೆ. ಬಯೋಲಜಿ ಮತ್ತು ಟೆಕ್ನಾಲಜಿ ಕ್ಷೇತ್ರದಲ್ಲಿ ಮುಂದಿರುವ ಈ ಎರಡು ನಗರಗಳ ಮಧ್ಯೆ ಜೀವ ವಿಜ್ಞಾನ ತಂತ್ರಜ್ಞಾನದ ಕಾರಿಡಾರ್ ಆದರೆ ಉತ್ತಮ ಎಂದೂ ಅವರು ಸಲಹೆ ನೀಡಿದ್ದಾರೆ.

ಬೆಂಗಳೂರು, ಹೈದರಾಬಾದ್ ಮಧ್ಯೆ ಜೀವ ವಿಜ್ಞಾನ ಕಾರಿಡಾರ್: ತೆಲಂಗಾಣ ಸಚಿವ ಕೆಟಿಆರ್ ಪ್ರಸ್ತಾಪ
ಕೆಟಿ ರಾಮರಾವ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 14, 2023 | 6:53 PM

Share

ಹೈದರಾಬಾದ್, ಸೆಪ್ಟೆಂಬರ್ 14: ಬೆಂಗಳೂರು ಮತ್ತು ಹೈದರಾಬಾದ್ ನಗರಗಳ ಮಧ್ಯೆ ಲೈಫ್ ಸೈನ್ಸಸ್ ತಂತ್ರಜ್ಞಾನ ಕಾರಿಡಾರ್ (Life Sciences Technology Corridor) ನಿರ್ಮಿಸುವ ಪ್ರಸ್ತಾಪವನ್ನು ತೆಲಂಗಾಣ ಸಚಿವ ಕೆಟಿ ರಾಮರಾವ್ ಮುಂದಿಟ್ಟಿದ್ದಾರೆ. ಇಲ್ಲಿಯ ಜಿನೋಮ್ ವ್ಯಾಲಿಯಲ್ಲಿ ನಡೆದ ಸಿನ್​ಜೀನ್ ಸೈಂಟಿಫಿಕ್ ಸಲ್ಯೂಶನ್ಸ್ ರಿಸರ್ಚ್ ಲ್ಯಾಬ್​ನ (Syngene Scientific Solutions Research Lab) ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ತೆಲಂಗಾಣ ಉದ್ಯಮ ಸಚಿವ ಕೆಟಿಆರ್, ಜೀವಶಾಸ್ತ್ರ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಿರುವ ಬೆಂಗಳೂರು ಮತ್ತು ಹೈದರಾಬಾದ್ ಮಧ್ಯೆ ಜೀವ ವಿಜ್ಞಾನ ತಂತ್ರಜ್ಞಾನದ ಕಾರಿಡಾರ್ ಸ್ಥಾಪನೆಯಾದರೆ ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ಹೈದರಾಬಾದ್ ಮತ್ತು ಬೆಂಗಳೂರು ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರತಿಸ್ಪರ್ಧಿಗಳಾಗಿವೆ. ನನಗೆ ಹೈದರಾಬಾದ್​ನಷ್ಟೇ ಬೆಂಗಳೂರೂ ಇಷ್ಟ. ನಾವು ಸಹಭಾಗಿತ್ವ ಸಾಧಿಸಿ ಒಗ್ಗೂಡಿದರೆ ಒಟ್ಟಿಗೆ ಬೆಳೆದು ದೇಶದ ಉನ್ನತಿಗೆ ಕಾರಣವಾಗಬಹುದು ಎಂದು ಕೆಟಿ ರಾಮರಾವ್ ಹೇಳಿದ್ದಾರೆ.

ಇದನ್ನೂ ಓದಿ: ಇಟಲಿಗೆ ಅಡಿ ಇಟ್ಟ ಅಂಬಾನಿ ಮಾಲಕತ್ವದ ಹ್ಯಾಮ್ಲೀಸ್; ಜಿಯೋಚಿ ಪ್ರೆಜಿಯೋಸಿ ಜೊತೆ ರಿಲಾಯನ್ಸ್ ಒಪ್ಪಂದ

ಕಳೆದ ಎರಡು ವರ್ಷದಲ್ಲೇ ತೆಲಂಗಾಣದಲ್ಲಿ ಲೈಫ್ ಸೈನ್ಸಸ್ ವಲಯ ಶೇ. 23ರಷ್ಟು ಬೆಳೆದಿದದೆ. ಈ ಅವಧಿಯಲ್ಲಿ ಶೇ. 14ರಷ್ಟಿರುವ ರಾಷ್ಟ್ರೀಯ ಸರಾಸರಿಗಿಂತ ತೆಲಂಗಾಣ ಉತ್ತಮ ಬೆಳವಣಿಗೆ ಕಂಡಿದೆ. ತೆಲಂಗಾಣ ರಾಜ್ಯ ನಿರ್ಮಾಣವಾದ ಬಳಿಕ ಐದು ಲಕ್ಷ ಉದ್ಯೋಗ ಸೃಷ್ಟಿಯಾಗಿದೆ. ಈ ಇಕೋಸಿಸ್ಟಂ ಅನ್ನು ಇನ್ನಷ್ಟು ಹೆಚ್ಚಿಸಿ, 2030ರಷ್ಟರಲ್ಲಿ ಹೈದರಾಬಾದ್ 250 ಬಿಲಿಯನ್ ಡಾಲರ್ ಮೊತ್ತದ ಉದ್ಯಮ ಹೊಂದುವಂತೆ ಮಾಡುವ ಗುರಿ ನಮ್ಮದಾಗಿದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗ ಕೂಡ ಆಗಿರುವ ಕೆಟಿಆರ್ ತಿಳಿಸಿದ್ದಾರೆ.

ಬೆಂಗಳೂರಿನ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಮ್ದಾರ್ ಷಾ ಅವರನ್ನು ಇದೇ ವೇಳೆ ಕೆಟಿಆರ್ ಶ್ಲಾಘಿಸಿದ್ದಾರೆ. ‘ಅವರನ್ನು ಭೇಟಿಯಾಗಿ ಮಾತನಾಡುವಾಗೆಲ್ಲಾ ನನಗೆ ಉತ್ಸಾಹ ಮೂಡುತ್ತದೆ. ಯುವಕ ಮತ್ತು ಯುವತಿಯರಿಗೆ ಅವರು ಮಾದರಿಯಾಗಿದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಭಾರತದ ಐಎಂಇಇಸಿ ಕಾರಿಡಾರ್ ಅದೆಷ್ಟು ಐತಿಹಾಸಿಕ ಗೊತ್ತಾ? ಇತಿಹಾಸಕಾರ ವಿಲಿಯಂ ಹೇಳೋದಿದು

ಇನ್ನು ಚುನಾವಣಾ ರಾಜಕೀಯದ ಬಗ್ಗೆ ಮಾತನಾಡಿದ ಕೆಟಿ ರಾಮರಾವ್, ಒಂದು ಚುನಾವಣೆಗೆ ಹಿಂದಿನ 6 ತಿಂಗಳು ರಾಜಕೀಯ ನಡೆಯಬಹುದು. ಅದರೆ, ಉಳಿದ ನಾಲ್ಕೂವರೆ ವರ್ಷ ಉತ್ತಮ ಆರ್ಥಿಕ ನಿರ್ವಹಣೆಯೇ ಉತ್ತಮ ರಾಜಕಾರಣ ಆಗಿರುತ್ತದೆ ಎಂದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ