AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾಗೆ ಹತ್ತು ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ, ಯಾಕೆ ಗೊತ್ತಾ?

Air India: ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹತ್ತು ಲಕ್ಷ ರೂ. ದಂಡವನ್ನು ವಿಧಿಸಿದೆ. ಡಿಜಿಸಿಎ ನಿಯಮಾವಳಿಗಳನ್ನು ಅನುಸರಿಸದಿದ್ದಕ್ಕಾಗಿ ಈ ದಂಡವನ್ನು ಹಾಕಲಾಗಿದೆ.

ಏರ್ ಇಂಡಿಯಾಗೆ ಹತ್ತು ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ, ಯಾಕೆ ಗೊತ್ತಾ?
ಏರ್ ಇಂಡಿಯಾ
ಅಕ್ಷಯ್​ ಪಲ್ಲಮಜಲು​​
|

Updated on:Nov 22, 2023 | 3:55 PM

Share

ಏರ್ ಇಂಡಿಯಾಗೆ (Air India) ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹತ್ತು ಲಕ್ಷ ರೂ. ದಂಡವನ್ನು ವಿಧಿಸಿದೆ. ಡಿಜಿಸಿಎ ನಿಯಮಾವಳಿಗಳನ್ನು ಅನುಸರಿಸದಿದ್ದಕ್ಕಾಗಿ ಈ ದಂಡವನ್ನು ಹಾಕಲಾಗಿದೆ. ಈ ಹಿಂದೆ ಅಂದರೆ ನವೆಂಬರ್​​ 3ರಂದು ಡಿಜಿಸಿಎ ಸಂಬಂಧಿತ ನಿಯಮಾವಳಿಗಳ ನಿಬಂಧನೆಗಳನ್ನು ಅನುಸರಿಸದಿದ್ದಕ್ಕಾಗಿ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಡಿಜಿಸಿಎ ಹೇಳಿದೆ.

ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ಸಂಸ್ಥೆಗಳ ತಪಾಸಣೆ ನಡೆಸಿದ ನಂತರ, ಸಂಬಂಧಿತ ನಾಗರಿಕ ವಿಮಾನಯಾನ ಅಗತ್ಯತೆಯ (ಸಿಎಆರ್) ನಿಬಂಧನೆಗಳನ್ನು ಏರ್ ಇಂಡಿಯಾ ಅನುಸರಿಸುತ್ತಿಲ್ಲ ಎಂದು ನಿಯಂತ್ರಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಏರ್​​ ಇಂಡಿಯಾಕ್ಕೆ ನವೆಂಬರ್​​ 3ರಂದು ಶೋಕಾಸ್ ನೋಟಿಸ್ ನೀಡಲಾಗಿದೆ.

ಏರ್​​ ಇಂಡಿಯಾ ಈ ಶೋಕಾಸ್ ನೋಟಿಸ್​​ಗೆ ಉತ್ತರ ನೀಡಿದ ಆಧಾರದ ಮೇಲೆ ಸಿಎಆರ್‌ನ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ಪ್ರಯಾಣಿಕರಿಗೆ ಸೌಕರ್ಯಗಳ ಕೊರತೆ: ಒಂದೇ ಕೋಣೆಯಲ್ಲಿ 20 ಮಂದಿ; ಆಹಾರ,ಶೌಚಕ್ಕೂ ಸಮಸ್ಯೆ

ಏರ್​​ ಇಂಡಿಯಾ ವಿಮಾನಯಾನದಲ್ಲಿ ಅನೇಕ ದೋಷಗಳು ಕಂಡು ಬಂದಿದೆ. ತಡವಾಗಿ ಬಂದ ವಿಮಾನಗಳಿಂದ ತೊಂದರೆಗೀಡಾದ ಪ್ರಯಾಣಿಕರಿಗೆ ಹೋಟೆಲ್ ಸೌಕರ್ಯಗಳನ್ನು ಒದಗಿಸದಿರುವುದು, ನಿಲ್ದಾಣದ ಸಿಬ್ಬಂದಿಗಳಿಗೆ ಸರಿಯಾದ ತರಬೇತಿ ನೀಡದಿರುವುದು, ಇನ್ನು ಅನೇಕ ಲೋಪಗಳು ಏರ್​​​ ಇಂಡಿಯಾದಲ್ಲಿ ಕಂಡು ಬಂದಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Wed, 22 November 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ