AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾಗೆ ಹತ್ತು ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ, ಯಾಕೆ ಗೊತ್ತಾ?

Air India: ಏರ್ ಇಂಡಿಯಾಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹತ್ತು ಲಕ್ಷ ರೂ. ದಂಡವನ್ನು ವಿಧಿಸಿದೆ. ಡಿಜಿಸಿಎ ನಿಯಮಾವಳಿಗಳನ್ನು ಅನುಸರಿಸದಿದ್ದಕ್ಕಾಗಿ ಈ ದಂಡವನ್ನು ಹಾಕಲಾಗಿದೆ.

ಏರ್ ಇಂಡಿಯಾಗೆ ಹತ್ತು ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ, ಯಾಕೆ ಗೊತ್ತಾ?
ಏರ್ ಇಂಡಿಯಾ
ಅಕ್ಷಯ್​ ಪಲ್ಲಮಜಲು​​
|

Updated on:Nov 22, 2023 | 3:55 PM

Share

ಏರ್ ಇಂಡಿಯಾಗೆ (Air India) ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಹತ್ತು ಲಕ್ಷ ರೂ. ದಂಡವನ್ನು ವಿಧಿಸಿದೆ. ಡಿಜಿಸಿಎ ನಿಯಮಾವಳಿಗಳನ್ನು ಅನುಸರಿಸದಿದ್ದಕ್ಕಾಗಿ ಈ ದಂಡವನ್ನು ಹಾಕಲಾಗಿದೆ. ಈ ಹಿಂದೆ ಅಂದರೆ ನವೆಂಬರ್​​ 3ರಂದು ಡಿಜಿಸಿಎ ಸಂಬಂಧಿತ ನಿಯಮಾವಳಿಗಳ ನಿಬಂಧನೆಗಳನ್ನು ಅನುಸರಿಸದಿದ್ದಕ್ಕಾಗಿ ಏರ್ ಇಂಡಿಯಾಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಡಿಜಿಸಿಎ ಹೇಳಿದೆ.

ದೆಹಲಿ, ಕೊಚ್ಚಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಲ್ಲಿ ವಿಮಾನಯಾನ ಸಂಸ್ಥೆಗಳ ತಪಾಸಣೆ ನಡೆಸಿದ ನಂತರ, ಸಂಬಂಧಿತ ನಾಗರಿಕ ವಿಮಾನಯಾನ ಅಗತ್ಯತೆಯ (ಸಿಎಆರ್) ನಿಬಂಧನೆಗಳನ್ನು ಏರ್ ಇಂಡಿಯಾ ಅನುಸರಿಸುತ್ತಿಲ್ಲ ಎಂದು ನಿಯಂತ್ರಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಏರ್​​ ಇಂಡಿಯಾಕ್ಕೆ ನವೆಂಬರ್​​ 3ರಂದು ಶೋಕಾಸ್ ನೋಟಿಸ್ ನೀಡಲಾಗಿದೆ.

ಏರ್​​ ಇಂಡಿಯಾ ಈ ಶೋಕಾಸ್ ನೋಟಿಸ್​​ಗೆ ಉತ್ತರ ನೀಡಿದ ಆಧಾರದ ಮೇಲೆ ಸಿಎಆರ್‌ನ ನಿಬಂಧನೆಗಳನ್ನು ಅನುಸರಿಸುತ್ತಿಲ್ಲ ಎಂದು ಕಂಡುಬಂದಿದೆ ಎಂದು ಡಿಜಿಸಿಎ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ಪ್ರಯಾಣಿಕರಿಗೆ ಸೌಕರ್ಯಗಳ ಕೊರತೆ: ಒಂದೇ ಕೋಣೆಯಲ್ಲಿ 20 ಮಂದಿ; ಆಹಾರ,ಶೌಚಕ್ಕೂ ಸಮಸ್ಯೆ

ಏರ್​​ ಇಂಡಿಯಾ ವಿಮಾನಯಾನದಲ್ಲಿ ಅನೇಕ ದೋಷಗಳು ಕಂಡು ಬಂದಿದೆ. ತಡವಾಗಿ ಬಂದ ವಿಮಾನಗಳಿಂದ ತೊಂದರೆಗೀಡಾದ ಪ್ರಯಾಣಿಕರಿಗೆ ಹೋಟೆಲ್ ಸೌಕರ್ಯಗಳನ್ನು ಒದಗಿಸದಿರುವುದು, ನಿಲ್ದಾಣದ ಸಿಬ್ಬಂದಿಗಳಿಗೆ ಸರಿಯಾದ ತರಬೇತಿ ನೀಡದಿರುವುದು, ಇನ್ನು ಅನೇಕ ಲೋಪಗಳು ಏರ್​​​ ಇಂಡಿಯಾದಲ್ಲಿ ಕಂಡು ಬಂದಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:06 pm, Wed, 22 November 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ