AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಕಡಾ 7ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಭಾರತ; ನೀತಿ ಆಯೋಗದ ಮಾಜಿ ಉಪಾಧ್ಯಕ್ಷ

ಉಕ್ರೇನ್ ಸಂಘರ್ಷ ಮುಂದುವರಿದಿರುವುದು ಜಾಗತಿಕ ತೈಲ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಇದು ಭಾರತದ ಹಣದುಬ್ಬರದ ಮೇಲೆ ಬೀರುತ್ತಿರುವ ಪರಿಣಾಮವೂ ಮುಂದುವರಿಯಲಿದೆ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಶೇಕಡಾ 7ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಭಾರತ; ನೀತಿ ಆಯೋಗದ ಮಾಜಿ ಉಪಾಧ್ಯಕ್ಷ
ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ರಾಜೀವ್ ಕುಮಾರ್Image Credit source: Reuters
TV9 Web
| Edited By: |

Updated on: Nov 21, 2022 | 10:51 AM

Share

ನವದೆಹಲಿ: ಜಾಗತಿಕ ಆರ್ಥಿಕ ಹಿಂಜರಿತ (Global recession) ಹೊರತಾಗಿಯೂ ಭಾರತವು 2023-24ನೇ ಸಾಲಿನಲ್ಲಿ ಶೇಕಡಾ 6ರಿಂದ 7ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಎಂದು ನೀತಿ ಆಯೋಗದ (NITI Aayog) ಮಾಜಿ ಉಪಾಧ್ಯಕ್ಷ ರಾಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕಳೆದ ತಿಂಗಳು ಅಂತಾರಾಷ್ಟ್ರೀಯ ಹಣಕಾಸು ನಿಧಿ (International Monetary Fund) ಭಾರತದ 2022-23ನೇ ಸಾಲಿನ ಆರ್ಥಿಕ ಬೆಳವಣಿಗೆ ದರ ಶೇಕಡಾ 6.8ರಿಂದ 7.4ರಷ್ಟಿರಲಿದೆ ಎಂದು ಪರಿಷ್ಕೃತ ಅಂದಾಜಿನಲ್ಲಿ ತಿಳಿಸಿತ್ತು. ರಷ್ಯಾ-ಉಕ್ರೇನ್ ಸಂಘರ್ಷ ಮುಂದುವರಿದಿರುವುದು ಮತ್ತು ಹಣದುಬ್ಬರ ಪ್ರಮಾಣ ಹೆಚ್ಚಿರುವುದು ಭಾರತದ ಆರ್ಥಿಕ ಬೆಳವಣಿಗೆ ದರದ ಅಂದಾಜನ್ನು ಪರಿಷ್ಕರಿಸಲು ಕಾರಣ ಎಂದು ಐಎಂಎಫ್ ತಿಳಿಸಿತ್ತು.

ಈ ಮಧ್ಯೆ, ಭಾರತದ ಹಣದುಬ್ಬರ ಪ್ರಮಾಣ ಅಕ್ಟೋಬರ್​​ನಲ್ಲಿ ಶೇಕಡಾ 6.77ಕ್ಕೆ ಇಳಿಕೆಯಾಗಿದೆ. ದೇಶದ ಸಗಟು ಹಣದುಬ್ಬರ ಪ್ರಮಾಣ ಶೇಕಡಾ 8.39ಕ್ಕೆ ಇಳಿಕೆಯಾಗಿದೆ.

‘ಹಣದುಬ್ಬರ ಸ್ಥಿರವಾಗಿರಲಿದೆ’

ದರ ಏರಿಕೆಯ ಸೂಚಕವಾಗಿರುವ ಹಣದುಬ್ಬರ ಪ್ರಮಾಣ ಶೇಕಡಾ 6ರಿಂದ 7ರ ಆಸುಪಾಸಿನಲ್ಲಿ ಕೆಲವು ಸಮಯ ಮುಂದುವರಿಯಲಿದೆ. ಗರಿಷ್ಠ ಮಟ್ಟ ತಲುಪಿದ ಬಳಿಕ ಇನ್ನೀಗ ಹಣದುಬ್ಬರ ಕಡಿಮೆಯಾಗಲಿದೆ ಎಂದು ರಾಜೀವ್ ಕುಮಾರ್ ‘ಪಿಟಿಐ’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಉಕ್ರೇನ್ ಸಂಘರ್ಷ ಮುಂದುವರಿದಿರುವುದು ಜಾಗತಿಕ ತೈಲ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಇದು ಭಾರತದ ಹಣದುಬ್ಬರದ ಮೇಲೆ ಬೀರುತ್ತಿರುವ ಪರಿಣಾಮವೂ ಮುಂದುವರಿಯಲಿದೆ ಎಂದು ಅವರು ಹೇಳಿದ್ದಾರೆ.

‘ರಫ್ತು ಹೆಚ್ಚಿಸಲು ನೀತಿ ರೂಪಿಸಬೇಕು’

ದೇಶದ ಸರಕು ರಫ್ತು ಅಕ್ಟೋಬರ್​ನಲ್ಲಿ ಶೇಕಡಾ 17ರಷ್ಟು ಕಡಿಮೆಯಾಗಿರುವುದು ವಾಣಿಜ್ಯ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿರುವ ದತ್ತಾಂಶಗಳಿಂದ ತಿಳಿದುಬಂದಿದೆ. ಸೆಪ್ಟೆಂಬರ್​ನಲ್ಲಿ ಸುಮಾರು 2.8 ಲಕ್ಷ ಕೋಟಿ ರೂ. ಮೌಲ್ಯದ ಸರಕು ರಫ್ತು ಮಾಡಲಾಗಿದ್ದರೆ ಅಕ್ಟೋಬರ್​ನಲ್ಲಿ ಸುಮಾರು 2.4 ಲಕ್ಷ ಕೋಟಿ ರೂ. ಮೌಲ್ಯದ ಸರಕುಗಳನ್ನು ರಫ್ತು ಮಾಡಲಾಗಿದೆ. ಆಮದು ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ರಫ್ತು ಬೆಳವಣಿಗೆ ಕುಂಠಿತವಾಗುತ್ತಿರುವುದನ್ನು ತಡೆಯಲು ಸರ್ಕಾರ ಸ್ಪಷ್ಟ ನೀತಿ ರೂಪಿಸಬೇಕಿದೆ ಎಂದು ರಾಜೀವ್ ಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ