Personal Loan: ಕಡಿಮೆ ಬಡ್ಡಿ ದರಕ್ಕೆ ಪರ್ಸನಲ್ ಲೋನ್ ನೀಡುತ್ತಿರುವ 9 ಬ್ಯಾಂಕ್​ಗಳಿವು

ಇಲ್ಲಿ ಪ್ರಸ್ತಾಪಿಸಿರುವ 9 ಬ್ಯಾಂಕ್​ಗಳು ಅಗ್ಗದ ದರದ ಬಡ್ಡಿಯಲ್ಲಿ ವಯಕ್ತಿಕ ಸಾಲವನ್ನು ಒದಗಿಸುತ್ತಿವೆ. ತುರ್ತು ಅಗತ್ಯಗಳಿಗೆ ಈ ಸಾಲವನ್ನು ಪರಿಗಣಿಸಬಹುದು.

Personal Loan: ಕಡಿಮೆ ಬಡ್ಡಿ ದರಕ್ಕೆ ಪರ್ಸನಲ್ ಲೋನ್ ನೀಡುತ್ತಿರುವ 9 ಬ್ಯಾಂಕ್​ಗಳಿವು
ಸಾಂದರ್ಭಿಕ ಚಿತ್ರ
Follow us
| Updated By: Srinivas Mata

Updated on: Nov 13, 2021 | 6:12 PM

ಸಾಲಗಾರರ ಸಾಮರ್ಥ್ಯಕ್ಕೆ ಅನುಗುಣವಾಗಿ ಆಯ್ಕೆ ಮಾಡಿದ ಮರುಪಾವತಿ ವೇಳಾಪಟ್ಟಿಯೊಂದಿಗೆ ದೀರ್ಘಾವಧಿಯ ಅಥವಾ ತುರ್ತು ಪರಿಸ್ಥಿತಿಗೆ ಹಣಕಾಸು ಒದಗಿಸಲು ಪರ್ಸನಲ್ ಲೋನ್ ಸುಲಭವಾದ ಪರಿಹಾರವಾಗಿದೆ. ಇದು ಅನ್​ ಸೆಕ್ಯೂರ್ಡ್​ ಸಾಲವಾಗಿದೆ. ಆದ್ದರಿಂದ ಸಾಲ ನೀಡುವವರಿಗೆ ಯಾವುದೇ ಆಧಾರ ಅಗತ್ಯವಿಲ್ಲ. ಇತರ ಸಾಲಗಳಿಗೆ ಹೋಲಿಸಿದರೆ ಬಡ್ಡಿ ದರ ಹೆಚ್ಚಾಗಿರುತ್ತದೆ. ಗರಿಷ್ಠ ಸಾಲ ಮತ್ತು ಬ್ಯಾಂಕ್ ವಿಧಿಸುವ ಬಡ್ಡಿದರಗಳನ್ನು ಕ್ರೆಡಿಟ್ ಸ್ಕೋರ್ ನಿರ್ಧರಿಸುತ್ತದೆ. ಬಡ್ಡಿದರಗಳು ಒಂದು ಬ್ಯಾಂಕ್‌ನಿಂದ ಮತ್ತೊಂದಕ್ಕೆ ಬದಲಾಗುತ್ತವೆ.

ಬಡ್ಡಿ ದರಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗಳು ವಾರ್ಷಿಕ ಶೇ 8.90 ಬಡ್ಡಿದರಗಳೊಂದಿಗೆ ಅಗ್ಗದ ವಯಕ್ತಿಕ ಸಾಲವನ್ನು ನೀಡುತ್ತಿವೆ.

ಸಾರ್ವಜನಿಕ ವಲಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಎರಡನೇ ಸ್ಥಾನದಲ್ಲಿದೆ. ವಯಕ್ತಿಕ ಸಾಲಗಳ ಮೇಲೆ ಕನಿಷ್ಠ ಶೇ 8.95ರ ಬಡ್ಡಿಯನ್ನು ತೆಗೆದುಕೊಳ್ಳುತ್ತದೆ.

ಇಂಡಿಯನ್ ಬ್ಯಾಂಕ್ ಶೇ 9.05ರ ಬಡ್ಡಿಗೆ ವಯಕ್ತಿಕ ಸಾಲ ನೀಡುತ್ತಿದೆ.

ಶೇ 9.45ರ ಬಡ್ಡಿ ದರದೊಂದಿಗೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಪಂಜಾಬ್ ಅಂಡ್ ಸಿಂಧ್ ಬ್ಯಾಂಕ್ ಮತ್ತು ಪಟ್ಟಿಯಲ್ಲಿರುವ ಏಕೈಕ ಖಾಸಗಿ ಬ್ಯಾಂಕ್ ಐಡಿಬಿಐ ಬ್ಯಾಂಕ್ ವೈಯಕ್ತಿಕ ಸಾಲದ ಮೇಲಿನ ಶೇ 9.50ರ ಬಡ್ಡಿಯೊಂದಿಗೆ ಜಂಟಿಯಾಗಿ ಐದನೇ ಸ್ಥಾನವನ್ನು ಪಡೆದುಕೊಂಡಿವೆ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆರನೇ ಸ್ಥಾನದಲ್ಲಿದೆ. ಗ್ರಾಹಕರಿಗೆ ಶೇ 9.60 ಬಡ್ಡಿ ದರದಲ್ಲಿ ವಯಕ್ತಿಕ ಸಾಲಗಳನ್ನು ನೀಡುತ್ತಿದೆ.

ಬ್ಯಾಂಕ್ ಆಫ್ ಬರೋಡಾದಲ್ಲಿ (BoB) ವಯಕ್ತಿಕ ಸಾಲದ ಬಡ್ಡಿ ದರಗಳು ಶೇ 10ರಿಂದ ಪ್ರಾರಂಭವಾಗುತ್ತವೆ.

ಕೊನೆಯ ಮಾತು ವಯಕ್ತಿಕ ಸಾಲಗಳ ಮರುಪಾವತಿ ಅವಧಿಯು ಸಾಮಾನ್ಯವಾಗಿ ಒಂದರಿಂದ ಐದು ವರ್ಷಗಳ ಮಧ್ಯೆ ಇರುತ್ತದೆ. ಸಾಲದ ಅವಧಿಯು ಹೆಚ್ಚಾದಷ್ಟೂ ಬ್ಯಾಂಕ್ ವಿಧಿಸುವ ಬಡ್ಡಿ ದರ ಹೆಚ್ಚಾಗುತ್ತದೆ.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ