Sign In

By signing in or creating an account, you agree with Associated Broadcasting Company's Terms & Conditions and Privacy Policy.

Personal Loan: ಕಡಿಮೆ ಬಡ್ಡಿ ದರಕ್ಕೆ ಪರ್ಸನಲ್ ಲೋನ್ ನೀಡುತ್ತಿರುವ 9 ಬ್ಯಾಂಕ್​ಗಳಿವು

ಇಲ್ಲಿ ಪ್ರಸ್ತಾಪಿಸಿರುವ 9 ಬ್ಯಾಂಕ್​ಗಳು ಅಗ್ಗದ ದರದ ಬಡ್ಡಿಯಲ್ಲಿ ವಯಕ್ತಿಕ ಸಾಲವನ್ನು ಒದಗಿಸುತ್ತಿವೆ. ತುರ್ತು ಅಗತ್ಯಗಳಿಗೆ ಈ ಸಾಲವನ್ನು ಪರಿಗಣಿಸಬಹುದು.

Personal Loan: ಕಡಿಮೆ ಬಡ್ಡಿ ದರಕ್ಕೆ ಪರ್ಸನಲ್ ಲೋನ್ ನೀಡುತ್ತಿರುವ 9 ಬ್ಯಾಂಕ್​ಗಳಿವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Nov 13, 2021 | 6:12 PM

ಸಾಲಗಾರರ ಸಾಮರ್ಥ್ಯಕ್ಕೆ ಅನುಗುಣವಾಗಿ ಆಯ್ಕೆ ಮಾಡಿದ ಮರುಪಾವತಿ ವೇಳಾಪಟ್ಟಿಯೊಂದಿಗೆ ದೀರ್ಘಾವಧಿಯ ಅಥವಾ ತುರ್ತು ಪರಿಸ್ಥಿತಿಗೆ ಹಣಕಾಸು ಒದಗಿಸಲು ಪರ್ಸನಲ್ ಲೋನ್ ಸುಲಭವಾದ ಪರಿಹಾರವಾಗಿದೆ. ಇದು ಅನ್​ ಸೆಕ್ಯೂರ್ಡ್​ ಸಾಲವಾಗಿದೆ. ಆದ್ದರಿಂದ ಸಾಲ ನೀಡುವವರಿಗೆ ಯಾವುದೇ ಆಧಾರ ಅಗತ್ಯವಿಲ್ಲ. ಇತರ ಸಾಲಗಳಿಗೆ ಹೋಲಿಸಿದರೆ ಬಡ್ಡಿ ದರ ಹೆಚ್ಚಾಗಿರುತ್ತದೆ. ಗರಿಷ್ಠ ಸಾಲ ಮತ್ತು ಬ್ಯಾಂಕ್ ವಿಧಿಸುವ ಬಡ್ಡಿದರಗಳನ್ನು ಕ್ರೆಡಿಟ್ ಸ್ಕೋರ್ ನಿರ್ಧರಿಸುತ್ತದೆ. ಬಡ್ಡಿದರಗಳು ಒಂದು ಬ್ಯಾಂಕ್‌ನಿಂದ ಮತ್ತೊಂದಕ್ಕೆ ಬದಲಾಗುತ್ತವೆ.

ಬಡ್ಡಿ ದರಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗಳು ವಾರ್ಷಿಕ ಶೇ 8.90 ಬಡ್ಡಿದರಗಳೊಂದಿಗೆ ಅಗ್ಗದ ವಯಕ್ತಿಕ ಸಾಲವನ್ನು ನೀಡುತ್ತಿವೆ.

ಸಾರ್ವಜನಿಕ ವಲಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಎರಡನೇ ಸ್ಥಾನದಲ್ಲಿದೆ. ವಯಕ್ತಿಕ ಸಾಲಗಳ ಮೇಲೆ ಕನಿಷ್ಠ ಶೇ 8.95ರ ಬಡ್ಡಿಯನ್ನು ತೆಗೆದುಕೊಳ್ಳುತ್ತದೆ.

ಇಂಡಿಯನ್ ಬ್ಯಾಂಕ್ ಶೇ 9.05ರ ಬಡ್ಡಿಗೆ ವಯಕ್ತಿಕ ಸಾಲ ನೀಡುತ್ತಿದೆ.

ಶೇ 9.45ರ ಬಡ್ಡಿ ದರದೊಂದಿಗೆ ಬ್ಯಾಂಕ್ ಆಫ್ ಮಹಾರಾಷ್ಟ್ರ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಪಂಜಾಬ್ ಅಂಡ್ ಸಿಂಧ್ ಬ್ಯಾಂಕ್ ಮತ್ತು ಪಟ್ಟಿಯಲ್ಲಿರುವ ಏಕೈಕ ಖಾಸಗಿ ಬ್ಯಾಂಕ್ ಐಡಿಬಿಐ ಬ್ಯಾಂಕ್ ವೈಯಕ್ತಿಕ ಸಾಲದ ಮೇಲಿನ ಶೇ 9.50ರ ಬಡ್ಡಿಯೊಂದಿಗೆ ಜಂಟಿಯಾಗಿ ಐದನೇ ಸ್ಥಾನವನ್ನು ಪಡೆದುಕೊಂಡಿವೆ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆರನೇ ಸ್ಥಾನದಲ್ಲಿದೆ. ಗ್ರಾಹಕರಿಗೆ ಶೇ 9.60 ಬಡ್ಡಿ ದರದಲ್ಲಿ ವಯಕ್ತಿಕ ಸಾಲಗಳನ್ನು ನೀಡುತ್ತಿದೆ.

ಬ್ಯಾಂಕ್ ಆಫ್ ಬರೋಡಾದಲ್ಲಿ (BoB) ವಯಕ್ತಿಕ ಸಾಲದ ಬಡ್ಡಿ ದರಗಳು ಶೇ 10ರಿಂದ ಪ್ರಾರಂಭವಾಗುತ್ತವೆ.

ಕೊನೆಯ ಮಾತು ವಯಕ್ತಿಕ ಸಾಲಗಳ ಮರುಪಾವತಿ ಅವಧಿಯು ಸಾಮಾನ್ಯವಾಗಿ ಒಂದರಿಂದ ಐದು ವರ್ಷಗಳ ಮಧ್ಯೆ ಇರುತ್ತದೆ. ಸಾಲದ ಅವಧಿಯು ಹೆಚ್ಚಾದಷ್ಟೂ ಬ್ಯಾಂಕ್ ವಿಧಿಸುವ ಬಡ್ಡಿ ದರ ಹೆಚ್ಚಾಗುತ್ತದೆ.

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ