AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM- KISAN: ಈ ರೈತ ಕುಟುಂಬಗಳು ಪಿಎಂ ಕಿಸಾನ್ ಯೋಜನೆ ಅನುಕೂಲ ಪಡೆಯುವುದಕ್ಕೆ ಅರ್ಹವಲ್ಲ

ಕೇಂದ್ರ ಸರ್ಕಾರದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಈ ರೈತ ಕುಟುಂಬಗಳು ಅರ್ಹವಲ್ಲ. ಯಾವುವು ಅವು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

PM- KISAN: ಈ ರೈತ ಕುಟುಂಬಗಳು ಪಿಎಂ ಕಿಸಾನ್ ಯೋಜನೆ ಅನುಕೂಲ ಪಡೆಯುವುದಕ್ಕೆ ಅರ್ಹವಲ್ಲ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Jul 11, 2022 | 3:55 PM

Share

2022ರ ಮೇ 31ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 11ನೇ ಕಂತಿನ ಆರ್ಥಿಕ ನೆರವನನ್ನು ರೈತ ಫಲಾನುಭವಿಗಳಿಗಾಗಿ ಬಿಡುಗಡೆ ಮಾಡಿದರು. ಪ್ರಧಾನಿ ಮೋದಿ ಅವರು 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ ಸುಮಾರು 21,000 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿದ್ದು, ದೇಶದಾದ್ಯಂತ ಪಿಎಂ-ಕಿಸಾನ್​ನ ಪ್ರತಿಯೊಬ್ಬ ಫಲಾನುಭವಿಯು ತಮ್ಮ ಬ್ಯಾಂಕ್ ಖಾತೆಗೆ ರೂ. 2000 ಪಡೆಯಲು ಅರ್ಹರಾಗಿದ್ದಾರೆ. ರೈತರ ಆಧಾರ್ ಕಾರ್ಡ್‌ನೊಂದಿಗೆ ಜೋಡಣೆ ಮಾಡಿದ ರೈತರ ಬ್ಯಾಂಕ್ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕಂತುಗಳನ್ನು ತಲುಪಿಸಲಾಗುತ್ತದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿ ಪ್ರತಿ ವರ್ಷ 6000 ರೂಪಾಯಿಗಳ ವಾರ್ಷಿಕ ನಗದು ವರ್ಗಾವಣೆಯನ್ನು ರೈತರಿಗೆ ಮೂರು ಕಂತುಗಳಲ್ಲಿ ವಿತರಿಸಲಾಗುತ್ತದೆ. ಮೊದಲ ಕಂತು ಏಪ್ರಿಲ್-ಜುಲೈ ನಡುವೆ, ಎರಡನೇ ಕಂತು ಆಗಸ್ಟ್-ನವೆಂಬರ್ ನಡುವೆ ಮತ್ತು ಮೂರನೇ ಕಂತು ಡಿಸೆಂಬರ್-ಮಾರ್ಚ್ ನಡುವೆ ಇರುತ್ತದೆ.

ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ ಮಾತ್ರ ಯೋಜನೆ?

ಆರಂಭದಲ್ಲಿ ಪಿಎಂ-ಕಿಸಾನ್ ಯೋಜನೆಯನ್ನು ಪ್ರಾರಂಭಿಸಿದಾಗ (ಫೆಬ್ರವರಿ, 2019) ಅದರ ಪ್ರಯೋಜನಗಳು 2 ಹೆಕ್ಟೇರ್​ವರೆಗೆ ಸಂಯೋಜಿತ ಭೂ ಹಿಡುವಳಿಯೊಂದಿಗೆ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳಿಗೆ ಮಾತ್ರ ಇತ್ತು. ಯೋಜನೆಯನ್ನು ಆ ನಂತರ ಜೂನ್ 2019ರಲ್ಲಿ ಪರಿಷ್ಕರಿಸಲಾಯಿತು ಮತ್ತು ಅವರ ಜಮೀನುಗಳ ಗಾತ್ರವನ್ನು ಲೆಕ್ಕಿಸದೆ ಎಲ್ಲ ರೈತ ಕುಟುಂಬಗಳಿಗೆ ವಿಸ್ತರಿಸಲಾಯಿತು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ವರ್ಷಕ್ಕೆ 6,000 ರೂಪಾಯಿಗಳ ಲಾಭವನ್ನು ದೇಶದ ಎಲ್ಲ 14.5 ಕೋಟಿ ರೈತರಿಗೆ ವಿಸ್ತರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರವು ಅವರ ಭೂ ಹಿಡುವಳಿಯ ಗಾತ್ರವನ್ನು ಲೆಕ್ಕಿಸದೆ ಅಧಿಸೂಚನೆ ಹೊರಡಿಸಿದೆ.

ಪಿಎಂ-ಕಿಸಾನ್ ಯೋಜನೆಯಿಂದ ಯಾವ ರೈತ ಕುಟುಂಬಗಳನ್ನು ಹೊರಗಿಡಲಾಗಿದೆ?

ಸಾಂಸ್ಥಿಕ ಭೂಮಿ ಹೊಂದಿರುವವರು, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ರೈತ ಕುಟುಂಬಗಳು, ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಅಧಿಕಾರಿಗಳು ಮತ್ತು ರಾಜ್ಯ ಅಥವಾ ಕೇಂದ್ರ ಸರ್ಕಾರದ ನೌಕರರು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳು ಮತ್ತು ಸರ್ಕಾರಿ ಸ್ವಾಯತ್ತ ಸಂಸ್ಥೆಗಳ ನೌಕರರನ್ನು ಪಿಎಂ-ಕಿಸಾನ್​ನಿಂದ ಹೊರಗಿಡಲಾಗಿದೆ. ವೈದ್ಯರು, ಎಂಜಿನಿಯರ್‌ಗಳು ಮತ್ತು ವಕೀಲರಂತಹ ವೃತ್ತಿಪರರು ಹಾಗೂ 10,000 ರೂಪಾಯಿಗಿಂತ ಹೆಚ್ಚಿನ ಮಾಸಿಕ ಪಿಂಚಣಿ ಹೊಂದಿರುವ ನಿವೃತ್ತ ಪಿಂಚಣಿದಾರರು ಹಾಗೂ ಕಳೆದ ಅಸೆಸ್​ಮೆಂಟ್​ ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದವರು ಸಹ ಈ ಬೆನಿಫಿಟ್​ ಪಡೆಯುವುದಕ್ಕೆ ಅರ್ಹರಲ್ಲ.

Published On - 3:55 pm, Mon, 11 July 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್