AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Holidays: ಈ ವಾರದಲ್ಲಿ ಏಳರಲ್ಲಿ ನಾಲ್ಕು ದಿನ ಬ್ಯಾಂಕ್ ರಜಾ; ನಿಮ್ಮ ಕೆಲಸಗಳು ಇವೆಯಾ?

ಈ ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಏಳರಲ್ಲಿ ನಾಲ್ಕು ದಿನ ಬ್ಯಾಂಕ್ ರಜಾ ಇರುತ್ತದೆ. ಯಾವ್ಯಾವ ದಿನ ಎಂಬ ಬಗ್ಗೆ ಮಾಹಿತಿ ಈ ಲೇಖನದಲ್ಲಿ ಇದೆ.

Bank Holidays: ಈ ವಾರದಲ್ಲಿ ಏಳರಲ್ಲಿ ನಾಲ್ಕು ದಿನ ಬ್ಯಾಂಕ್ ರಜಾ; ನಿಮ್ಮ ಕೆಲಸಗಳು ಇವೆಯಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 11, 2022 | 1:09 PM

Share

ನಿಮಗೆ ಶೀಘ್ರದಲ್ಲೇ ಪೂರ್ಣಗೊಳಿಸಬೇಕಾದ ಬ್ಯಾಂಕ್ ಕೆಲಸಗಳು (Banking) ಏನಾದರೂ ಇದೆಯೇ? ಒಂದು ವೇಳೆ ಆ ರೀತಿಯ ಕೆಲಸಗಳನ್ನು ನೀವು ಹೊಂದಿದ್ದಲ್ಲಿ ಮುಂದಿನ ವಾರ ನೀವು ಈ ರಜಾ ದಿನಗಳನ್ನು ಪರಿಗಣಿಸಲು ಪರಿಗಣಿಸಬೇಕಾಗುತ್ತದೆ. ಉದಾಹರಣೆಗೆ, ಕೆಲವು ರಾಜ್ಯಗಳಲ್ಲಿ ಸಾರ್ವಜನಿಕ ರಜಾದಿನಗಳ ಕಾರಣ ಏಪ್ರಿಲ್ 14 ಮತ್ತು ಏಪ್ರಿಲ್ 15ರಂದು ಬ್ಯಾಂಕ್ ಶಾಖೆಗಳು ಮುಚ್ಚಿರುತ್ತವೆ. ಏಪ್ರಿಲ್ 16ನೇ ತಾರೀಕಿನಂದು ಅಸ್ಸಾಂನಲ್ಲಿ ಮತ್ತು ಆ ನಂತರ ಮತ್ತೆ ಏಪ್ರಿಲ್ 17ರಂದು ಭಾನುವಾರವಾದ್ದರಿಂದ ಎಲ್ಲ ರಾಜ್ಯಗಳಲ್ಲೂ ರಜಾ ಇರುತ್ತದೆ. ಏಪ್ರಿಲ್‌ನ ಎರಡನೇ ವಾರದಲ್ಲಿ ಬಹುತೇಕ ರಜಾ ದಿನಗಳೇ ಇದ್ದು, 14 ಮತ್ತು 15ರಂದು ವಾರಾಂತ್ಯದ ನಂತರ ಬ್ಯಾಂಕ್ ರಜಾದಿನಗಳಿವೆ.

ಏಪ್ರಿಲ್ 14ರಂದು ಡಾ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ/ಮಹಾವೀರ್ ಜಯಂತಿ/ಬೈಸಾಖಿ/ವೈಶಾಖಿ/ತಮಿಳು ಹೊಸ ವರ್ಷದ ದಿನ/ಚೀರೋಬಾ/ಬಿಜು ಹಬ್ಬ/ಬೋಹಾಗ್ ಬಿಹು ಎಂದು ವಿವಿಧ ಪ್ರದೇಶಗಳಲ್ಲಿ ಗುರುತಿಸಲಾಗುತ್ತದೆ. ಏಪ್ರಿಲ್ 15ರಂದು ಗುಡ್​ ಫ್ರೈಡೇ/ಬಂಗಾಳಿ ಹೊಸ ವರ್ಷದ ದಿನದಂದು ರಜಾ (ನಬಬರ್ಶ)/ಹಿಮಾಚಲ ದಿನ/ವಿಶು/ಬೋಹಾಗ್ ಬಿಹು ಇರುತ್ತದೆ. ಆದರೆ ಕೆಲವು ದಿನಗಳನ್ನು ಹೊರತುಪಡಿಸಿ, ಈ ರಜಾದಿನಗಳಲ್ಲಿ ಹೆಚ್ಚಿನವು ಒಂದು ಸಮಯದಲ್ಲಿ ಬೆರಳೆಣಿಕೆಯ ನಗರಗಳು ಮತ್ತು ರಾಜ್ಯಗಳಿಗೆ ಮಾತ್ರ ಅನ್ವಯಿಸುತ್ತವೆ ಎಂಬುದನ್ನು ಗಮನಿಸಬೇಕು.

ಆರ್‌ಬಿಐ ಮಾರ್ಗಸೂಚಿಗಳ ಪ್ರಕಾರ, ಸಾರ್ವಜನಿಕ ವಲಯ, ಖಾಸಗಿ ವಲಯ, ವಿದೇಶೀ ಬ್ಯಾಂಕ್‌ಗಳು, ಸಹಕಾರಿ ಬ್ಯಾಂಕ್‌ಗಳು ಮತ್ತು ದೇಶಾದ್ಯಂತ ಪ್ರಾದೇಶಿಕ ಬ್ಯಾಂಕ್‌ಗಳು ಸೂಚಿಸಿದ ದಿನಾಂಕಗಳಲ್ಲಿ ಮುಚ್ಚಿರುತ್ತದೆ. ಆರ್​ಬಿಐ ರಜಾದಿನಗಳ ಪಟ್ಟಿಯನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ: ರಾಜ್ಯ-ನಿರ್ದಿಷ್ಟ ಹಬ್ಬಗಳು, ಧಾರ್ಮಿಕ ರಜಾದಿನಗಳು ಮತ್ತು ಹಬ್ಬದ ಆಚರಣೆಗಳು. ಆರ್‌ಬಿಐ ಈ ವರ್ಗಗಳ ಅಡಿಯಲ್ಲಿ ಬ್ಯಾಂಕ್​ಗಳಿಗೆ ರಜಾದಿನಗಳನ್ನು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆ್ಯಕ್ಟ್, ಹಾಲಿಡೇ, ರಿಯಲ್ ಟೈಮ್ ಗ್ರಾಸ್ ಸೆಟ್ಲ್​ಮೆಂಟ್ ಹಾಲಿಡೇ ಮತ್ತು ಬ್ಯಾಂಕ್‌ಗಳ ಖಾತೆಗಳನ್ನು ಮುಚ್ಚುವುದು ಹೀಗೆ ವರ್ಗೀಕರಿಸಿದೆ.

ಈ ರಜಾದಿನಗಳು ಭೌತಿಕವಾಗಿ ಶಾಖೆಗೆ ಭೇಟಿ ನೀಡುವ ಅಗತ್ಯ ಇರುವವರೊಂದಿಗೆ ಗೊಂದಲಕ್ಕೀಡಾಗುವುದು ಖಚಿತ; ಇಂಟರ್​ನೆಟ್ ಬ್ಯಾಂಕಿಂಗ್, ಎಟಿಎಂಗಳು, ಮೊಬೈಲ್ ಬ್ಯಾಂಕಿಂಗ್ ಇತ್ಯಾದಿಗಳು ಕಾರ್ಯ ನಿರ್ವಹಿಸುವುದನ್ನು ಮುಂದುವರಿಸುವುದರಿಂದ ಹಣ ವರ್ಗಾವಣೆಗಳಂತಹ ಪ್ರಮುಖ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ.

ಇದನ್ನೂ ಓದಿ: SBI Internet Banking: ಕನ್ನಡ, ತಮಿಳು, ತೆಲುಗು ಸೇರಿ 15 ಭಾಷೆಗಳಲ್ಲಿ ಎಸ್​ಬಿಐ ಇಂಟರ್ನೆಟ್ ಬ್ಯಾಂಕಿಂಗ್ ಸೇವೆ ಲಭ್ಯ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ