AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali Gift: ಈ ಕಂಪೆನಿಯಿಂದ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್

ಈ ಕಂಪೆನಿಯು ದೀಪಾವಳಿ ಹಬ್ಬದ ಉಡುಗೊರೆಯಾಗಿ ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕಲ್ ಸ್ಕೂಟರ್ ಅನ್ನು ನೀಡುತ್ತಿದೆ. ಆ ಬಗ್ಗೆ ವಿವರಗಳು ಇಲ್ಲಿವೆ.

Diwali Gift: ಈ ಕಂಪೆನಿಯಿಂದ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್
ಓಕಿನಾವ ಸ್ಕೂಟರ್ಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 05, 2021 | 5:15 PM

Share

ದೀಪಾವಳಿಯ ಸಂದರ್ಭದಲ್ಲಿ ಸೂರತ್‌ನ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದೆ. ಕಸೂತಿ ಯಂತ್ರಗಳ ವ್ಯಾಪಾರವನ್ನು ನಡೆಸುತ್ತಿರುವ ಕಂಪೆನಿಯಾದ ಅಲೈಯನ್ಸ್ ಸಮೂಹವು ಓಕಿನಾವಾ ಪ್ರೈಸ್‌ಪ್ರೊ ಎಂಬ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನೀಡಲು ನಿರ್ಧರಿಸಿದೆ, ಇದರ ಬೆಲೆ 76,848 ರೂಪಾಯಿ (ಎಕ್ಸ್ ಶೋ ರೂಂ). “ಹೆಚ್ಚುತ್ತಿರುವ ಇಂಧನ ಬೆಲೆಗಳು ಮತ್ತು ಇತರ ಅಂಶಗಳ ದೃಷ್ಟಿಯಿಂದ ನಾವು ನಮ್ಮ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದೇವೆ,” ಎಂದು ಕಂಪೆನಿಯ ನಿರ್ದೇಶಕ ಸುಭಾಷ್ ದಾವರ್ ಹೇಳಿದ್ದಾರೆ.

“ಈ ಸಮಸ್ಯೆಯು ಕೇವಲ ಮಾಧ್ಯಮದ ಮುಖ್ಯಾಂಶಗಳಲ್ಲಿ ಉಳಿದಿಲ್ಲ. ಇದರ ಜತೆಗೆ ಕಂಪೆನಿಯ ಹಣಕಾಸಿನ ಸ್ಥಿತಿಯ ಮೇಲೆ ಪರಿಣಾಮ ಬೀರಿದೆ. ಇದು ಇಂಧನದ ಮೇಲಿನ ವೆಚ್ಚವನ್ನು ಮಾತ್ರ ಉಳಿಸುವುದಿಲ್ಲ. ನಮ್ಮ ಕಂಪೆನಿಯು ಪರಿಸರ ಸಂರಕ್ಷಣೆ ಮತ್ತು ಹಸಿರು ನೋಟಕ್ಕೆ ಕೊಡುಗೆ ನೀಡಲು ಅವಕಾಶ ಮಾಡಿಕೊಡುತ್ತದೆ,” ಎಂದು ಅವರು ಹೇಳಿದ್ದಾರೆ. ಸುಭಾಷ್ ಮುಂದುವರಿದು ಮಾತನಾಡಿ, ನಾನು ಯಾವಾಗಲೂ ಪರಿಸರದ ಸಂಪನ್ನತೆಯನ್ನು ನಂಬುತ್ತೇನೆ ಮತ್ತು ಪ್ರಕೃತಿಯ ಸಹವಾಸದಲ್ಲಿ ಬದುಕಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಪರಿಸರ ಸಂರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಹಂಬಲ ಇರುವುದಾಗಿ ಕೂಡ ಅವರು ತಿಳಿಸಿದ್ದಾರೆ.

ಕಂಪೆನಿಯು ತನ್ನ ಉದ್ಯೋಗಿಗಳಿಗೆ 35 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೀಪಾವಳಿ ಉಡುಗೊರೆಯಾಗಿ ನೀಡಿದ್ದಾರೆ ಎಂದು ವ್ಯವಹಾರವನ್ನು ನೋಡಿಕೊಳ್ಳುತ್ತಿರುವ ಸುಭಾಷ್ ದಾವರ್ ಅವರ ಮಗ ಚಿರಾಗ್ ದಾವರ್ ಹೇಳಿದ್ದಾರೆ.

ಇದನ್ನೂ ಓದಿ: Indian Railways Bonus: ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮನಾದ ದೀಪಾವಳಿ ಬೋನಸ್: ಕೇಂದ್ರ ಸಚಿವ ಸಂಪುಟ ನಿರ್ಧಾರ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್