AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali Gift: ಈ ಕಂಪೆನಿಯಿಂದ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್

ಈ ಕಂಪೆನಿಯು ದೀಪಾವಳಿ ಹಬ್ಬದ ಉಡುಗೊರೆಯಾಗಿ ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕಲ್ ಸ್ಕೂಟರ್ ಅನ್ನು ನೀಡುತ್ತಿದೆ. ಆ ಬಗ್ಗೆ ವಿವರಗಳು ಇಲ್ಲಿವೆ.

Diwali Gift: ಈ ಕಂಪೆನಿಯಿಂದ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್
ಓಕಿನಾವ ಸ್ಕೂಟರ್ಸ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Nov 05, 2021 | 5:15 PM

Share

ದೀಪಾವಳಿಯ ಸಂದರ್ಭದಲ್ಲಿ ಸೂರತ್‌ನ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದೆ. ಕಸೂತಿ ಯಂತ್ರಗಳ ವ್ಯಾಪಾರವನ್ನು ನಡೆಸುತ್ತಿರುವ ಕಂಪೆನಿಯಾದ ಅಲೈಯನ್ಸ್ ಸಮೂಹವು ಓಕಿನಾವಾ ಪ್ರೈಸ್‌ಪ್ರೊ ಎಂಬ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನೀಡಲು ನಿರ್ಧರಿಸಿದೆ, ಇದರ ಬೆಲೆ 76,848 ರೂಪಾಯಿ (ಎಕ್ಸ್ ಶೋ ರೂಂ). “ಹೆಚ್ಚುತ್ತಿರುವ ಇಂಧನ ಬೆಲೆಗಳು ಮತ್ತು ಇತರ ಅಂಶಗಳ ದೃಷ್ಟಿಯಿಂದ ನಾವು ನಮ್ಮ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದೇವೆ,” ಎಂದು ಕಂಪೆನಿಯ ನಿರ್ದೇಶಕ ಸುಭಾಷ್ ದಾವರ್ ಹೇಳಿದ್ದಾರೆ.

“ಈ ಸಮಸ್ಯೆಯು ಕೇವಲ ಮಾಧ್ಯಮದ ಮುಖ್ಯಾಂಶಗಳಲ್ಲಿ ಉಳಿದಿಲ್ಲ. ಇದರ ಜತೆಗೆ ಕಂಪೆನಿಯ ಹಣಕಾಸಿನ ಸ್ಥಿತಿಯ ಮೇಲೆ ಪರಿಣಾಮ ಬೀರಿದೆ. ಇದು ಇಂಧನದ ಮೇಲಿನ ವೆಚ್ಚವನ್ನು ಮಾತ್ರ ಉಳಿಸುವುದಿಲ್ಲ. ನಮ್ಮ ಕಂಪೆನಿಯು ಪರಿಸರ ಸಂರಕ್ಷಣೆ ಮತ್ತು ಹಸಿರು ನೋಟಕ್ಕೆ ಕೊಡುಗೆ ನೀಡಲು ಅವಕಾಶ ಮಾಡಿಕೊಡುತ್ತದೆ,” ಎಂದು ಅವರು ಹೇಳಿದ್ದಾರೆ. ಸುಭಾಷ್ ಮುಂದುವರಿದು ಮಾತನಾಡಿ, ನಾನು ಯಾವಾಗಲೂ ಪರಿಸರದ ಸಂಪನ್ನತೆಯನ್ನು ನಂಬುತ್ತೇನೆ ಮತ್ತು ಪ್ರಕೃತಿಯ ಸಹವಾಸದಲ್ಲಿ ಬದುಕಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಪರಿಸರ ಸಂರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಹಂಬಲ ಇರುವುದಾಗಿ ಕೂಡ ಅವರು ತಿಳಿಸಿದ್ದಾರೆ.

ಕಂಪೆನಿಯು ತನ್ನ ಉದ್ಯೋಗಿಗಳಿಗೆ 35 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೀಪಾವಳಿ ಉಡುಗೊರೆಯಾಗಿ ನೀಡಿದ್ದಾರೆ ಎಂದು ವ್ಯವಹಾರವನ್ನು ನೋಡಿಕೊಳ್ಳುತ್ತಿರುವ ಸುಭಾಷ್ ದಾವರ್ ಅವರ ಮಗ ಚಿರಾಗ್ ದಾವರ್ ಹೇಳಿದ್ದಾರೆ.

ಇದನ್ನೂ ಓದಿ: Indian Railways Bonus: ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮನಾದ ದೀಪಾವಳಿ ಬೋನಸ್: ಕೇಂದ್ರ ಸಚಿವ ಸಂಪುಟ ನಿರ್ಧಾರ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ