AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali Gift: ಈ ಕಂಪೆನಿಯಿಂದ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್

ಈ ಕಂಪೆನಿಯು ದೀಪಾವಳಿ ಹಬ್ಬದ ಉಡುಗೊರೆಯಾಗಿ ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕಲ್ ಸ್ಕೂಟರ್ ಅನ್ನು ನೀಡುತ್ತಿದೆ. ಆ ಬಗ್ಗೆ ವಿವರಗಳು ಇಲ್ಲಿವೆ.

Diwali Gift: ಈ ಕಂಪೆನಿಯಿಂದ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಎಲೆಕ್ಟ್ರಿಕ್ ಸ್ಕೂಟರ್
ಓಕಿನಾವ ಸ್ಕೂಟರ್ಸ್ (ಸಾಂದರ್ಭಿಕ ಚಿತ್ರ)
TV9 Web
| Updated By: Srinivas Mata|

Updated on: Nov 05, 2021 | 5:15 PM

Share

ದೀಪಾವಳಿಯ ಸಂದರ್ಭದಲ್ಲಿ ಸೂರತ್‌ನ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಉಡುಗೊರೆಯಾಗಿ ನೀಡಿದೆ. ಕಸೂತಿ ಯಂತ್ರಗಳ ವ್ಯಾಪಾರವನ್ನು ನಡೆಸುತ್ತಿರುವ ಕಂಪೆನಿಯಾದ ಅಲೈಯನ್ಸ್ ಸಮೂಹವು ಓಕಿನಾವಾ ಪ್ರೈಸ್‌ಪ್ರೊ ಎಂಬ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನೀಡಲು ನಿರ್ಧರಿಸಿದೆ, ಇದರ ಬೆಲೆ 76,848 ರೂಪಾಯಿ (ಎಕ್ಸ್ ಶೋ ರೂಂ). “ಹೆಚ್ಚುತ್ತಿರುವ ಇಂಧನ ಬೆಲೆಗಳು ಮತ್ತು ಇತರ ಅಂಶಗಳ ದೃಷ್ಟಿಯಿಂದ ನಾವು ನಮ್ಮ ಉದ್ಯೋಗಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದ್ದೇವೆ,” ಎಂದು ಕಂಪೆನಿಯ ನಿರ್ದೇಶಕ ಸುಭಾಷ್ ದಾವರ್ ಹೇಳಿದ್ದಾರೆ.

“ಈ ಸಮಸ್ಯೆಯು ಕೇವಲ ಮಾಧ್ಯಮದ ಮುಖ್ಯಾಂಶಗಳಲ್ಲಿ ಉಳಿದಿಲ್ಲ. ಇದರ ಜತೆಗೆ ಕಂಪೆನಿಯ ಹಣಕಾಸಿನ ಸ್ಥಿತಿಯ ಮೇಲೆ ಪರಿಣಾಮ ಬೀರಿದೆ. ಇದು ಇಂಧನದ ಮೇಲಿನ ವೆಚ್ಚವನ್ನು ಮಾತ್ರ ಉಳಿಸುವುದಿಲ್ಲ. ನಮ್ಮ ಕಂಪೆನಿಯು ಪರಿಸರ ಸಂರಕ್ಷಣೆ ಮತ್ತು ಹಸಿರು ನೋಟಕ್ಕೆ ಕೊಡುಗೆ ನೀಡಲು ಅವಕಾಶ ಮಾಡಿಕೊಡುತ್ತದೆ,” ಎಂದು ಅವರು ಹೇಳಿದ್ದಾರೆ. ಸುಭಾಷ್ ಮುಂದುವರಿದು ಮಾತನಾಡಿ, ನಾನು ಯಾವಾಗಲೂ ಪರಿಸರದ ಸಂಪನ್ನತೆಯನ್ನು ನಂಬುತ್ತೇನೆ ಮತ್ತು ಪ್ರಕೃತಿಯ ಸಹವಾಸದಲ್ಲಿ ಬದುಕಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ. ಪರಿಸರ ಸಂರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವ ಹಂಬಲ ಇರುವುದಾಗಿ ಕೂಡ ಅವರು ತಿಳಿಸಿದ್ದಾರೆ.

ಕಂಪೆನಿಯು ತನ್ನ ಉದ್ಯೋಗಿಗಳಿಗೆ 35 ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ದೀಪಾವಳಿ ಉಡುಗೊರೆಯಾಗಿ ನೀಡಿದ್ದಾರೆ ಎಂದು ವ್ಯವಹಾರವನ್ನು ನೋಡಿಕೊಳ್ಳುತ್ತಿರುವ ಸುಭಾಷ್ ದಾವರ್ ಅವರ ಮಗ ಚಿರಾಗ್ ದಾವರ್ ಹೇಳಿದ್ದಾರೆ.

ಇದನ್ನೂ ಓದಿ: Indian Railways Bonus: ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ವೇತನಕ್ಕೆ ಸಮನಾದ ದೀಪಾವಳಿ ಬೋನಸ್: ಕೇಂದ್ರ ಸಚಿವ ಸಂಪುಟ ನಿರ್ಧಾರ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ