AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆಯ ಲಾಭದಲ್ಲಿದ್ದರೂ ಲೇ ಆಫ್ ಮಾಡ್ತಾರೆ… ಇದು ಅಪ್ಪಟ ದುರಾಸೆ… ಫ್ರೆಷ್​ವರ್ಕ್ಸ್​ಗೆ ತಿವಿದ ಜೋಹೋ ಸಿಇಒ ಶ್ರೀಧರ್ ವೆಂಬು

Zoho CEO unhappy with Freshworks layoffs: ಫ್ರೆಷ್​ವರ್ಕ್ಸ್ ಸಂಸ್ಥೆ 660 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುವ ನಿರ್ಧಾರ ಮಾಡಿದೆ. ಅಮೆರಿಕ ಮೂಲದ ಈ ಕಂಪನಿಯ ಈ ಕ್ರಮವನ್ನು ಜೋಹೋ ಸಿಇಒ ಶ್ರೀಧರ್ ವೆಂಬು ಕಟುವಾಗಿ ಟೀಕಿಸಿದ್ದಾರೆ. ಕಂಪನಿ ಲಾಭದಲ್ಲಿದ್ದರೂ ಉದ್ಯೋಗಿಗಳನ್ನು ಲೇ ಆಫ್ ಮಾಡುವುದು ದುರಾಸೆಯಲ್ಲದೆ ಮತ್ತೇನಿಲ್ಲ ಎಂದು ಬಣ್ಣಿಸಿದ್ದಾರೆ.

ಒಳ್ಳೆಯ ಲಾಭದಲ್ಲಿದ್ದರೂ ಲೇ ಆಫ್ ಮಾಡ್ತಾರೆ... ಇದು ಅಪ್ಪಟ ದುರಾಸೆ... ಫ್ರೆಷ್​ವರ್ಕ್ಸ್​ಗೆ ತಿವಿದ ಜೋಹೋ ಸಿಇಒ ಶ್ರೀಧರ್ ವೆಂಬು
ಶ್ರೀಧರ್ ವೆಂಬು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 10, 2024 | 10:53 AM

Share

ಚೆನ್ನೈ, ನವೆಂಬರ್ 10: ಅಮೆರಿಕ ಮೂಲದ ಫ್ರೆಶ್​ವರ್ಕ್ಸ್ ಸಂಸ್ಥೆ ಶೇ. 12ರಷ್ಟು ಉದ್ಯೋಗಿಗಳನ್ನು ಲೇ ಆಫ್ ಮಾಡುವ ನಿರ್ಧಾರಕ್ಕೆ ಭಾರತದ ಸಿಇಒವೊಬ್ಬರು ಖಾರದ ಪ್ರತಿಕ್ರಿಯೆ ನೀಡಿದ್ದಾರೆ. ಫ್ರೆಶ್​ವರ್ಕ್ಸ್​ನ ಹೆಸರು ಎತ್ತದೆಯೇ ಕಂಪನಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಇದು ಅಪ್ಪಟ ದುರಾಸೆಯ ಧೋರಣೆ ಎಂದು ಟೀಕಿಸಿದ್ದಾರೆ. ತನ್ನ ವಾರ್ಷಿಕ ಆದಾಯದ ಒಂದೂವರೆ ಪಟ್ಟು ಕ್ಯಾಷ್ ಅನ್ನು ಹೊಂದಿದ ಮತ್ತು ಇಪ್ಪತ್ತು ಪ್ರತಿಶತ ದರದಲ್ಲಿ ಬೆಳೆಯುತ್ತಿರುವ ಕಂಪನಿಯೊಂದು ಶೇ. 12-13ರಷ್ಟು ನೌಕರರನ್ನು ಕೆಲಸದಿಂದ ತೆಗೆದುಹಾಕುತ್ತದೆ ಎಂದರೆ ಆ ಉದ್ಯೋಗಿಗಳು ಯಾವತ್ತಾದರೂ ನಿಷ್ಠೆಯಿಂದ ಕೆಲಸ ಮಾಡಲು ಆಗುತ್ತದಾ ಎಂದು ಝೋಹೋ ಕಾರ್ಪೊರೇಶನ್​ನ ಸಿಇಒ ಶ್ರೀಧರ್ ವೆಂಬು ಹೇಳಿದ್ದಾರೆ.

ತಮ್ಮ ಎಕ್ಸ್ ಅಕೌಂಟ್​ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ ಅವರು, ಲಾಭದಲ್ಲಿ ನಡೆಯುತ್ತಿರುವ ಕಂಪನಿಯೊಂದು ಉದ್ಯೋಗಿಗಳನ್ನು ಲೇ ಆಫ್ ಮಾಡುವ ಕ್ರಮ ತೆಗೆದುಕೊಳ್ಳುವುದನ್ನು ಬಲವಾಗಿ ವಿರೋಧಿಸಿದ್ದಾರೆ.

ಉದ್ಯೋಗಿಗಳ ಗಾಯದ ಮೇಲೆ ಬರೆ ಎಳೆದಂತೆ ಈ ಕಂಪನಿ 400 ಬಿಲಿಯನ್ ಡಾಲರ್​ನಷ್ಟು ಸ್ಟಾಕ್ ಬಯ್​ಬ್ಯಾಕ್ ಮಾಡುತ್ತಿದೆ. ಒಂದು ಬಿಸಿನೆಸ್ ಸಂಕಷ್ಟದಲ್ಲಿದ್ದಾಗ ಲೇ ಆಫ್ ಮಾಡುವ ನಿರ್ಧಾರವನ್ನು ಅರ್ಥ ಮಾಡಿಕೊಳ್ಳಬಹುದು. ಆದರೆ, ಈ ಕಂಪನಿಯ ವಿಚಾರದಲ್ಲಿ ಇದು ಅಪ್ಪಟ ದುರಾಸೆಯೇ ಎಂದು ತಮಿಳುನಾಡು ಮೂಲದ ಕಂಪನಿಯ ಸಿಇಒ ಹೇಳಿದ್ದಾರೆ.

ಇದನ್ನೂ ಓದಿ: ರಿಷಿತ್, ಈ ಬೆಂಗಳೂರು ಹುಡುಗ ಈಗ ಸ್ವೀಡನ್ ಮೂಲದ ಟ್ರೂಕಾಲರ್ ಸಿಇಒ; ಯಾರು ಈ ಜುಂಜುನವಾಲ?

400 ಮಿಲಿಯನ್ ಡಾಲರ್ ಮೊತ್ತವನ್ನು ಸ್ಟಾಕ್ ಬಯ್​ಬ್ಯಾಕ್​ಗೆ ಉಪಯೋಗಿಸುತ್ತಿರುವ ಕಂಪನಿಯ ನಿರ್ಧಾರವನ್ನು ಪ್ರಶ್ನಿಸಿದ ಅವರು, ‘ಈ 400 ಮಿಲಿಯನ್ ಡಾಲರ್ ಹಣವನ್ನು ಬೇರೆ ಬಿಸಿನೆಸ್​ಗೆ ಹೂಡಿಕೆ ಮಾಡಿ, ಈ ಉದ್ಯೋಗಿಗಳನ್ನು ಅಲ್ಲಿಗೆ ಜೋಡಿಸಬಹುದಿತ್ತಲ್ಲವಾ? ತಂತ್ರಜ್ಞಾನ ಕ್ಷೇತ್ರದಲ್ಲಿ ಇಂಥ ಅವಕಾಶಗಳು ಇಲ್ಲವಾ? ನಿಮಗೆ ಕುತೂಹಲ, ಕಲ್ಪನೆ, ದೂರದೃಷ್ಟಿ ಇವ್ಯಾವುದೂ ಇಲ್ಲವಾ? ಕನಿಕರ ಎನ್ನುವುದೂ ಕನಿಷ್ಠವೂ ಇಲ್ಲವಾ?’ ಎಂದು ಶ್ರೀಧರ್ ವೆಂಬು ತಮ್ಮ ಪೋಸ್ಟ್​ನಲ್ಲಿ ಫ್ರೆಶ್​ವರ್ಕ್ಸ್ ಕಂಪನಿಯ ಹೆಸರು ಎತ್ತದೆಯೇ ಕಿಡಿಕಾರಿದ್ದಾರೆ.

‘ಅಮೆರಿಕದ ಕಾರ್ಪೊರೇಟ್ ಜಗತ್ತಿನಲ್ಲಿ ಈ ರೀತಿಯ ವರ್ತನೆ ತೀರಾ ಸಾಮಾನ್ಯವಾಗಿಬಿಟ್ಟಿದೆ. ದುರದೃಷ್ಟಕರವೆಂಬಂತೆ ಭಾರತದಲ್ಲೂ ಇದನ್ನು ಅನುಸರಿಸುತ್ತಿದ್ದೇವೆ’ ಎಂದು ವೆಂಬು ಖೇದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಭಾರತವೇನಾದರೂ ರಷ್ಯಾದಿಂದ ತೈಲ ಖರೀಸದೇ ಹೋಗಿದ್ದರೆ ಜಾಗತಿಕವಾಗಿ ಬೆಲ ದುಬಾರಿಯಾಗುತ್ತಿತ್ತು: ಸಚಿವ ಹರ್ದೀಪ್ ಸಿಂಗ್ ಪುರಿ

ತಮ್ಮ ಜೋಹೋ ಸಂಸ್ಥೆ ಯಾಕೆ ಇನ್ನೂ ಷೇರುಮಾರುಕಟ್ಟೆ ಬರದೇ ಪ್ರೈವೇಟ್ ಕಂಪನಿಯಾಗಿದೆ ಎಂಬುದಕ್ಕೆ ಅವರು ಇದೇ ಕಾರಣ ನೀಡಿದ್ದಾರೆ. ‘ಗ್ರಾಹಕರು ಮತ್ತು ಉದ್ಯೋಗಿಗಳು ನಮಗೆ ಮೊದಲ ಆದ್ಯತೆ. ಷೇರುದಾರರಿಗೆ ಕೊನೆಯ ಆದ್ಯತೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ