AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತದ ಸರಕುಗಳ ರಫ್ತು ಇದೇ ಮೊದಲ ಬಾರಿಗೆ 40,000 ಕೋಟಿ ಅಮೆರಿಕನ್​ ಡಾಲರ್

ಇದೇ ಮೊದಲ ಬಾರಿಗೆ ಭಾರತದ ಸರಕುಗಳ ರಫ್ತು 40,000 ಕೋಟಿ ಯುಎಸ್​ಡಿ ಮುಟ್ಟಿದೆ. ಈ ಬಗ್ಗೆ ವಿವರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Narendra Modi: ಭಾರತದ ಸರಕುಗಳ ರಫ್ತು ಇದೇ ಮೊದಲ ಬಾರಿಗೆ 40,000 ಕೋಟಿ ಅಮೆರಿಕನ್​ ಡಾಲರ್
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Mar 23, 2022 | 11:35 AM

Share

ಇದೇ ಮೊದಲ ಬಾರಿಗೆ ಭಾರತದಿಂದ ಸರಕುಗಳ ರಫ್ತು 40,000 ಕೋಟಿ ಅಮೆರಿಕನ್​ ಡಾಲರ್​ನಷ್ಟು ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಬುಧವಾರ ಹೇಳಿದ್ದಾರೆ. ಬಿಜೆಪಿ ನೇತೃತ್ವ ಸರ್ಕಾರದ ಸ್ವಾವಲಂಬಿ ಉತ್ಪಾದನೆಯ ಯೋಜನೆ ಆತ್ಮನಿರ್ಭರ್​ ಭಾರತಕ್ಕೆ ಪ್ರಮುಖ ಮೈಲುಗಲ್ಲು ಇದು ಎಂದು ಕರೆದಿದ್ದಾರೆ. 40 ಸಾವಿರ ಕೋಟಿ ಅಮೆರಿಕನ್ ಡಾಲರ್ ಅಂದರೆ, ಭಾರತದ ರೂಪಾಯಿ ಲೆಕ್ಕದಲ್ಲಿ 30,44,216 ಕೋಟಿ (30.44 ಲಕ್ಷ ಕೋಟಿ) ಆಗುತ್ತದೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಭಾರತದ ಸೇವೆ ಮತ್ತು ತಯಾರಿಕೆ ಚಟುವಟಿಕೆ ಫೆಬ್ರವರಿಯಲ್ಲಿ ಸ್ಥಿರವಾಗಿದ್ದು, ಉಕ್ರೇನ್​ ಯುದ್ಧದ ಕಾರ್ಮೋಡದಲ್ಲಿ ಬಳಕೆ ಆಧಾರಿತ ಆರ್ಥಿಕತೆ ದರ ಬೆಳವಣಿಗೆ ಹಾಗೂ ಬೆಲೆಯ ಮಧ್ಯೆ ಈ ಬೆಳವಣಿಗೆ ಆಗಿದೆ.

ಭಾರತವು 400 ಬಿಲಿಯನ್ ಯುಎಸ್​ಡಿ ಸರಕುಗಳ ರಫ್ತಿನ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಮತ್ತು ಮೊದಲ ಬಾರಿಗೆ ಈ ಗುರಿಯನ್ನು ಸಾಧಿಸಿದೆ. ಈ ಯಶಸ್ಸಿಗಾಗಿ ನಮ್ಮ ರೈತರು, ನೇಕಾರರು, ಎಂಎಸ್‌ಎಂಇಗಳು, ತಯಾರಕರು, ರಫ್ತುದಾರರನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಗಡುವಿನ ಒಂಬತ್ತು ದಿನಗಳ ಮುಂಚಿತವಾಗಿ ಗುರಿಯನ್ನು ತಲುಪಿರುವ ಗ್ರಾಫಿಕ್ಸ್ ಅನ್ನು ಪೋಸ್ಟ್ ಮಾಡಿದ್ದಾರೆ.

ಬ್ಲೂಮ್‌ಬರ್ಗ್ ನ್ಯೂಸ್ ಸಂಗ್ರಹಿಸಿದ ಎಲ್ಲ ಎಂಟು ಹೈ-ಫ್ರೀಕ್ವೆನ್ಸಿ ಸೂಚಕಗಳು ಕಳೆದ ತಿಂಗಳು ಚಟುವಟಿಕೆಯು ಸ್ಥಿರವಾಗಿದೆ ಎಂದು ತೋರಿಸಿದ್ದು, ಅಳತೆಯ ಮಾಪನದಂತೆ ‘ಅನಿಮಲ್ ಸ್ಪಿರಿಟ್ಸ್’ ಸತತ ಎಂಟನೇ ತಿಂಗಳು 5ರಷ್ಟಿದೆ. ಒಂದು-ತಿಂಗಳ ವಾಚನಗಳಲ್ಲಿ ಏರಿಳಿತವನ್ನು ಸುಗಮಗೊಳಿಸಲು ಅಳತೆಯು ಮೂರು ತಿಂಗಳ ತೂಕದ ಸರಾಸರಿಯನ್ನು ಬಳಸುತ್ತದೆ.

ಇದನ್ನೂ ಓದಿ: Mann ki Baat ಅಮೂಲ್ಯವಾದ ಕಲಾಕೃತಿಗಳನ್ನು ಮರಳಿ ತರುವಲ್ಲಿ ಭಾರತ ಯಶಸ್ವಿಯಾಗಿದೆ: ಪ್ರಧಾನಿ ನರೇಂದ್ರ ಮೋದಿ

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು