AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತದ ಸರಕುಗಳ ರಫ್ತು ಇದೇ ಮೊದಲ ಬಾರಿಗೆ 40,000 ಕೋಟಿ ಅಮೆರಿಕನ್​ ಡಾಲರ್

ಇದೇ ಮೊದಲ ಬಾರಿಗೆ ಭಾರತದ ಸರಕುಗಳ ರಫ್ತು 40,000 ಕೋಟಿ ಯುಎಸ್​ಡಿ ಮುಟ್ಟಿದೆ. ಈ ಬಗ್ಗೆ ವಿವರಗಳನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Narendra Modi: ಭಾರತದ ಸರಕುಗಳ ರಫ್ತು ಇದೇ ಮೊದಲ ಬಾರಿಗೆ 40,000 ಕೋಟಿ ಅಮೆರಿಕನ್​ ಡಾಲರ್
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Srinivas Mata

Updated on: Mar 23, 2022 | 11:35 AM

ಇದೇ ಮೊದಲ ಬಾರಿಗೆ ಭಾರತದಿಂದ ಸರಕುಗಳ ರಫ್ತು 40,000 ಕೋಟಿ ಅಮೆರಿಕನ್​ ಡಾಲರ್​ನಷ್ಟು ಮಾಡಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಬುಧವಾರ ಹೇಳಿದ್ದಾರೆ. ಬಿಜೆಪಿ ನೇತೃತ್ವ ಸರ್ಕಾರದ ಸ್ವಾವಲಂಬಿ ಉತ್ಪಾದನೆಯ ಯೋಜನೆ ಆತ್ಮನಿರ್ಭರ್​ ಭಾರತಕ್ಕೆ ಪ್ರಮುಖ ಮೈಲುಗಲ್ಲು ಇದು ಎಂದು ಕರೆದಿದ್ದಾರೆ. 40 ಸಾವಿರ ಕೋಟಿ ಅಮೆರಿಕನ್ ಡಾಲರ್ ಅಂದರೆ, ಭಾರತದ ರೂಪಾಯಿ ಲೆಕ್ಕದಲ್ಲಿ 30,44,216 ಕೋಟಿ (30.44 ಲಕ್ಷ ಕೋಟಿ) ಆಗುತ್ತದೆ. ಟ್ವಿಟರ್​ನಲ್ಲಿ ಈ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಭಾರತದ ಸೇವೆ ಮತ್ತು ತಯಾರಿಕೆ ಚಟುವಟಿಕೆ ಫೆಬ್ರವರಿಯಲ್ಲಿ ಸ್ಥಿರವಾಗಿದ್ದು, ಉಕ್ರೇನ್​ ಯುದ್ಧದ ಕಾರ್ಮೋಡದಲ್ಲಿ ಬಳಕೆ ಆಧಾರಿತ ಆರ್ಥಿಕತೆ ದರ ಬೆಳವಣಿಗೆ ಹಾಗೂ ಬೆಲೆಯ ಮಧ್ಯೆ ಈ ಬೆಳವಣಿಗೆ ಆಗಿದೆ.

ಭಾರತವು 400 ಬಿಲಿಯನ್ ಯುಎಸ್​ಡಿ ಸರಕುಗಳ ರಫ್ತಿನ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿದೆ ಮತ್ತು ಮೊದಲ ಬಾರಿಗೆ ಈ ಗುರಿಯನ್ನು ಸಾಧಿಸಿದೆ. ಈ ಯಶಸ್ಸಿಗಾಗಿ ನಮ್ಮ ರೈತರು, ನೇಕಾರರು, ಎಂಎಸ್‌ಎಂಇಗಳು, ತಯಾರಕರು, ರಫ್ತುದಾರರನ್ನು ನಾನು ಅಭಿನಂದಿಸುತ್ತೇನೆ ಎಂದು ಅವರು ಗಡುವಿನ ಒಂಬತ್ತು ದಿನಗಳ ಮುಂಚಿತವಾಗಿ ಗುರಿಯನ್ನು ತಲುಪಿರುವ ಗ್ರಾಫಿಕ್ಸ್ ಅನ್ನು ಪೋಸ್ಟ್ ಮಾಡಿದ್ದಾರೆ.

ಬ್ಲೂಮ್‌ಬರ್ಗ್ ನ್ಯೂಸ್ ಸಂಗ್ರಹಿಸಿದ ಎಲ್ಲ ಎಂಟು ಹೈ-ಫ್ರೀಕ್ವೆನ್ಸಿ ಸೂಚಕಗಳು ಕಳೆದ ತಿಂಗಳು ಚಟುವಟಿಕೆಯು ಸ್ಥಿರವಾಗಿದೆ ಎಂದು ತೋರಿಸಿದ್ದು, ಅಳತೆಯ ಮಾಪನದಂತೆ ‘ಅನಿಮಲ್ ಸ್ಪಿರಿಟ್ಸ್’ ಸತತ ಎಂಟನೇ ತಿಂಗಳು 5ರಷ್ಟಿದೆ. ಒಂದು-ತಿಂಗಳ ವಾಚನಗಳಲ್ಲಿ ಏರಿಳಿತವನ್ನು ಸುಗಮಗೊಳಿಸಲು ಅಳತೆಯು ಮೂರು ತಿಂಗಳ ತೂಕದ ಸರಾಸರಿಯನ್ನು ಬಳಸುತ್ತದೆ.

ಇದನ್ನೂ ಓದಿ: Mann ki Baat ಅಮೂಲ್ಯವಾದ ಕಲಾಕೃತಿಗಳನ್ನು ಮರಳಿ ತರುವಲ್ಲಿ ಭಾರತ ಯಶಸ್ವಿಯಾಗಿದೆ: ಪ್ರಧಾನಿ ನರೇಂದ್ರ ಮೋದಿ

ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಚಲಿಸುತ್ತಿರುವಾಗಲೇ ಕಳಚಿದ ಸರ್ಕಾರಿ ಬಸ್​​ ಚಕ್ರ: ಮುಂದೇನಾಯ್ತು?
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಕೋಪಗೊಂಡು ರೈಲಿಗೆ ಬೆಂಕಿ ಹಚ್ಚಿದ ವ್ಯಕ್ತಿ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು