AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apple CEO: ಆ್ಯಪಲ್ ಸಿಇಒ ಟಿಮ್ ಕುಕ್ ವೇತನದಲ್ಲಿ ಶೇ 40ಕ್ಕೂ ಹೆಚ್ಚಿನ ಕಡಿತ

2022ರ ಸೆಪ್ಟೆಂಬರ್​ಗೆ ಕೊನೆಗೊಂಡಂತೆ ಟಿಮ್ ಕುಕ್ ಅವರಿಗೆ ವಾರ್ಷಿಕ 99.4 ಕೋಟಿ ಡಾಲರ್ ವೇತನ ನೀಡಲಾಗಿತ್ತು. ಷೇರುದಾರರ ವಾರ್ಷಿಕ ಸಭೆಯ ಬಳಿಕ ಆ್ಯಪಲ್ ಕಂಪನಿಯು ಸಿಇಒ ವೇತನದಲ್ಲಿ ಕಡಿತ ಮಾಡುವ ನಿರ್ಧಾರಕ್ಕೆ ಬಂದಿದೆ.

Apple CEO: ಆ್ಯಪಲ್ ಸಿಇಒ ಟಿಮ್ ಕುಕ್ ವೇತನದಲ್ಲಿ ಶೇ 40ಕ್ಕೂ ಹೆಚ್ಚಿನ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 2:00 PM

Share

ನವದೆಹಲಿ: ಆ್ಯಪಲ್ (Apple) ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿಮ್​ ಕುಕ್ (Tim Cook) ವೇತನದಲ್ಲಿ 2023ನೇ ಸಾಲಿನಲ್ಲಿ ಶೇಕಡಾ 40ಕ್ಕೂ ಹೆಚ್ಚಿನ ಕಡಿತ ಮಾಡಲಾಗಿದ್ದು, 4.9 ಕೋಟಿ ಡಾಲರ್​ಗೆ ಇಳಿಕೆ ಮಾಡಲಾಗಿದೆ. ಕಂಪನಿಯು ಮಾರುಕಟ್ಟೆ ನಿಯಂತ್ರಕಕ್ಕೆ ಸಲ್ಲಿಸಿದ ವಿವರಗಳಿಂದ ಈ ಮಾಹಿತಿ ತಿಳಿದುಬಂದಿದೆ. ಆದರೆ, ಟಿಮ್​ ಕುಕ್ ಅವರಿಗೆ ನೀಡುವ ಷೇರಿನ ಪಾಲನ್ನು ಕಂಪನಿ ಹೆಚ್ಚಿಸಲಿದೆ. ಹೀಗಾಗಿ ಕಂಪನಿಯ ಷೇರುಗಳು ಹೇಗೆ ವಹಿವಾಟು ನಡೆಸುತ್ತವೆ ಎಂಬುದರ ಆಧಾರದಲ್ಲಿ ಹೆಚ್ಚು ಅಥವಾ ಕಡಿಮೆ ಮೊತ್ತ ಕುಕ್ ಅವರಿಗೆ ದೊರೆಯಲಿದೆ.

2022ರ ಸೆಪ್ಟೆಂಬರ್​ಗೆ ಕೊನೆಗೊಂಡಂತೆ ಟಿಮ್ ಕುಕ್ ಅವರಿಗೆ ವಾರ್ಷಿಕ 99.4 ಕೋಟಿ ಡಾಲರ್ ವೇತನ ನೀಡಲಾಗಿತ್ತು. ಷೇರುದಾರರ ವಾರ್ಷಿಕ ಸಭೆಯ ಬಳಿಕ ಆ್ಯಪಲ್ ಕಂಪನಿಯು ಸಿಇಒ ವೇತನದಲ್ಲಿ ಕಡಿತ ಮಾಡುವ ನಿರ್ಧಾರಕ್ಕೆ ಬಂದಿದೆ. 2026ರ ಮೊದಲು ನಿವೃತ್ತಿಯಾಗುವುದಿದ್ದಲ್ಲಿ ಅವರಿಗೆ ನೀಡುವ ನಿರ್ಬಂಧಿತ ಷೇರಿನ ಸಂಖ್ಯೆಯಲ್ಲಿಯೂ ಕಡಿತ ಮಾಡಲಾಗಿದೆ. ಕುಕ್ ಅವರೇ ಮಾಡಿದ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆ್ಯಪಲ್ ತಿಳಿಸಿದೆ.

ಇದನ್ನೂ ಓದಿ: Tata Apple stores: ದೇಶದಲ್ಲಿ ನೂರು ವಿಶೇಷ ಆ್ಯಪಲ್ ಸ್ಟೋರ್​ ಆರಂಭಿಸಲಿದೆ ಟಾಟಾ ಗ್ರೂಪ್; ವರದಿ 

ಆ್ಯಪಲ್​​ನ ಕಾರ್ಯನಿರ್ವಹಣೆಗೆ ಅನುಗುಣವಾಗಿ ಕುಕ್ ಅವರಿಗೆ ನೀಡಲಾಗುವ ಷೇರಿನ ಪ್ರಮಾಣವನ್ನು 2023ರಲ್ಲಿ ಶೇಕಡಾ 50ರಿಂದ 75ಕ್ಕೆ ಹೆಚ್ಚಿಸಲಾಗಿದೆ. ಮುಂದಿನ ವರ್ಷಗಳಲ್ಲೂ ಷೇರಿನ ಪ್ರಮಾಣವನ್ನು ಇದೇ ರೀತಿಯಲ್ಲಿ ಮುಂದುವರಿಸಲಾಗುವುದು ಎಂದು ಕಂಪನಿ ತಿಳಿಸಿದೆ. 2022ರಲ್ಲಿ ಕುಕ್ ಅವರು 30 ಲಕ್ಷ ಡಾಲರ್ ಮೂಲ ವೇತನದೊಂದಿಗೆ 99.4 ಕೋಟಿ ಡಾಲರ್ ಒಟ್ಟು ವೇತನ ಪಡೆದಿದ್ದರು. 83 ದಶಲಕ್ಷ ಡಾಲರ್ ಮೌಲ್ಯದ ಷೇರುಗಳನ್ನು ಬೋನಸ್ ಆಗಿ ನೀಡಲಾಗಿತ್ತು. ಇದರಿಂದಾಗಿ ಅವರ ಒಟ್ಟು ವೇತನ 9.87 ಕೋಟಿ ಡಾಲರ್ ಆಗಿತ್ತು.

2011ರಲ್ಲಿ ಸ್ಟೀವ್ ಜಾಬ್ಸ್ ಅವರಿಂದ ಸಿಇಒ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ನಿರಂತರವಾಗಿ ಉತ್ತಮ ಕಾರ್ಯನಿರ್ವಹಣೆ ತೋರುತ್ತಿರುವುದಕ್ಕಾಗಿ ಕುಕ್ ಅವರನ್ನು ಆ್ಯಪಲ್ ಅಭಿನಂದಿಸಿದೆ. ಕುಕ್ ನಾಯಕತ್ವದಲ್ಲಿ ಆ್ಯಪಲ್ ಷೇರುಗಳು ಶೇ 1,212ರಷ್ಟು ರಿಟರ್ನ್ಸ್ ತಂದುಕೊಟ್ಟಿವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!