AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಡೇರ್​2ಡ್ರೀಮ್​ ಪ್ರಶಸ್ತಿ​ ಸೀಸನ್​-3ರ ಪ್ರದಾನ ಸಮಾರಂಭ ನವೆಂಬರ್​ 30 ಮಧ್ಯಾಹ್ನ 1ಕ್ಕೆ

ಟಿವಿ9 ನೆಟ್​ವರ್ಕ್​ ಮತ್ತು SAP India ಸಹಯೋಗದಲ್ಲಿ ಡೇರ್​2ಡ್ರೀಮ್​ ಅವಾರ್ಡ್ಸ್​​ ಪ್ರಶಸ್ತಿ ಪ್ರದಾನ ಸಮಾರಂಭದ ಬಗ್ಗೆ ವಿವರ ಈ ಲೇಖನದಲ್ಲಿದೆ.

ಟಿವಿ9 ಡೇರ್​2ಡ್ರೀಮ್​ ಪ್ರಶಸ್ತಿ​ ಸೀಸನ್​-3ರ ಪ್ರದಾನ ಸಮಾರಂಭ ನವೆಂಬರ್​ 30 ಮಧ್ಯಾಹ್ನ 1ಕ್ಕೆ
ಪ್ರಶಸ್ತಿ ಪ್ರದಾನದ ಬಗ್ಗೆ ಮಾಹಿತಿ
TV9 Web
| Edited By: |

Updated on: Nov 27, 2021 | 1:08 PM

Share

ಟಿವಿ9 ನೆಟ್​ವರ್ಕ್​ ಮತ್ತು SAP India ಸಹಯೋಗದಲ್ಲಿ ಡೇರ್​2ಡ್ರೀಮ್​ ಅವಾರ್ಡ್ಸ್​​ ಮೂರನೇ ಅವತರಣಿಕೆಯ ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 30, 2021ರಂದು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಕಿರು, ಸಣ್ಣ ಮತ್ತು ಮಧ್ಯಮ ಸಂಸ್ಥೆಗಳ ಸಚಿವಾಲಯದ ಕಾರ್ಯದರ್ಶಿ ಆದ ಬಿ.ಬಿ. ಸ್ವಾಯಿನ್ ಅವರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂಕಷ್ಟ ಕಾಲವನ್ನು ಮೆಟ್ಟಿ ನಿಂತ ಉದ್ಯಮಿಗಳ ಯಶೋಗಾಥೆಯನ್ನು ಗುರುತಿಸುವುದು ಇದರ ಧ್ಯೇಯವಾಗಿದೆ. ಈ ಕೈಗಾರಿಕೋದ್ಯಮಿ ನಾಯಕರು ಕೊರೊನಾ ಪಿಡುಗಿನ ಸಂಕಷ್ಟ ಕಾಲದಲ್ಲಿ ಹೊಸ ವಿಧಾನಗಳನ್ನು ಅಳವಡಿಸಿಕೊಂಡು, ಡಿಜಿಟಲ್​ ಬದಲಾವಣೆಗೆ ಮಣೆ ಹಾಕಿ, ಉತ್ಪನ್ನ ಅಭಿವೃದ್ಧಿ ತಂತ್ರಗಳು ಮತ್ತು ತಂತ್ರಜ್ಞಾನ ಅಳವಡಿಸಿಕೊಳ್ಳುವ ಮೂಲಕ ತಮ್ಮ ಕೈಗಾರಿಕೆಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.

ಟಿವಿ9 ಡೇರ್​2ಡ್ರೀಮ್​ ಅವಾರ್ಡ್​ ವಿಭಾಗಗಳು ಹೀಗಿವೆ: ಎರಡು ಸೆಗ್ಮೆಂಟ್ ಒಟ್ಟು 15 ವಿಭಾಗಗಳಲ್ಲಿ ಅವಾರ್ಡ್​​ಗಳನ್ನು ನೀಡಲಾಗುವುದು: 1. 75 ಕೋಟಿ ರೂಪಾಯಿಯಿಂದ 150 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ಹೊಂದಿರುವ ಕೈಗಾರಿಕೆಗಳು 2. 150 ಕೋಟಿ ರೂಪಾಯಿ ವಾರ್ಷಿಕ ವಹಿವಾಟು ಹೊಂದಿರುವ ಮಧ್ಯಮ ಕಾರ್ಪೊರೇಟ್ ವಲಯ

15 ವಿಭಾಗಗಳು ಹೀಗಿವೆ: 1. ಕಂಪೆನಿ ಆಫ್​ ದಿ ಇಯರ್ ವಲಯವಾರು ಪ್ರಶಸ್ತಿಗಳು (ಪ್ರತಿ ವಲಯದಲ್ಲೂ 8-9 ಪ್ರಶಸ್ತಿ​​ಗಳು) 2. ಎಮರ್ಜಿಂಗ್​ ಕಂಪೆನಿ ಆಫ್​ ದಿ ಇಯರ್​ 3. ತಂತ್ರಜ್ಞಾನ ಅಳವಡಿಸಿಕೊಂಡು ಉದ್ಯಮವನ್ನು ಮಾರ್ಪಾಡು ಮಾಡಿರುವ ಕೈಗಾರಿಕೆ

ಪ್ರೇರಣಾದಾಯಕ ನಾಯಕ: 1. ಯುವ ಉದ್ಯಮ ನಾಯಕ 2. ವರ್ಷದ ಮಹಿಳಾ ಉದ್ಯಮಿ 3. ವರ್ಷದ ಉದ್ಯಮಿ

ಭಾರತದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದ ಕಾರ್ಯಕ್ರಮವನ್ನು ಮುಂಚೂಣಿ ನ್ಯೂಸ್​ ಚಾನೆಲ್​ ಟಿವಿ9 ಭಾರತ್​​ವರ್ಷ್​​ದಲ್ಲಿ ಮತ್ತು ಟಿವಿ9 ನೆಟ್​ವರ್ಕ್​​ನ ನಾನಾ​​ ಡಿಜಿಟಲ್​ ವೇದಿಕೆಗಳಲ್ಲಿ ಪ್ರಸಾರ ಮಾಡಲಾಗುವುದು.

ಇದನ್ನೂ ಓದಿ: Dare 2 Dream Awards: ಟಿವಿ9, ಸ್ಯಾಪ್ ಇಂಡಿಯಾ ಸಹಯೋಗದಲ್ಲಿ ಡೇರ್​2ಡ್ರೀಮ್ ಅವಾರ್ಡ್ಸ್; ವಿವರ ಓದಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ