AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ

Leaders of Road Transport Conclave: ಟಿವಿ9 ನೆಟ್ವರ್ಕ್ ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಕಾಂಕ್ಲೇವ್ ಕಾರ್ಯಕ್ರಮ ಮುಂಬೈನಲ್ಲಿ ಜ. 23ರಂದು ನಡೆಯಲಿದೆ. ಮಧ್ಯಾಹ್ನ 2:45ಕ್ಕೆ ಸಮಾವೇಶ ಆರಂಭವಾಗಲಿದ್ದು ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕ್ಷೇತ್ರದ ಪರಿಣಿತರು ಪಾಲ್ಗೊಳ್ಳಲಿದ್ದಾರೆ.

ಮುಂಬೈನಲ್ಲಿ ಇಂದು ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್ ಸಮಾವೇಶ
ಲೀಡರ್ಸ್ ಆಫ್ ರೋಡ್ ಟ್ರಾನ್ಸ್​ಪೋರ್ಟ್
TV9 Web
| Edited By: |

Updated on: Jan 23, 2024 | 2:01 PM

Share

ಮುಂಬೈ, ಜನವರಿ 23: ಕಾಂಟಿನೆಂಟಲ್ ಪ್ರಸ್ತುಪಡಿಸುವ ಮತ್ತು ಟಿವಿ9 ನೆಟ್ವರ್ಕ್​ನಿಂದ ಆಯೋಜಿತವಾದ ರಸ್ತೆ ಸಾರಿಗೆ ಮುಂದಾಳುಗಳ ಸಮಾವೇಶ (Leaders of Road Transport Conclave) ಇಂದು ಮಂಗಳವಾರ ಮುಂಬೈನಲ್ಲಿ ನಡೆಯುತ್ತಿದೆ. ಮುಂಬೈನ ತಾಜ್ ಸಾಂತಾಕ್ರುಜ್​ನ ಇಂಪೀರಿಯಲ್ ಹಾಲ್​ನಲ್ಲಿ ಮಧ್ಯಾಹ್ನ 2:45ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಭಾರತದ ರಸ್ತೆ ಸಾರಿಗೆ ಕ್ಷೇತ್ರದ ಸಾಧನೆ, ಸವಾಲುಗಳ ಬಗ್ಗೆ ಮತ್ತು ಲಭ್ಯ ಇರುವ ಆಧುನಿಕ ತಂತ್ರಜ್ಞಾನ ಅಳವಡಿಕೆ ಸಾಧ್ಯತೆ ಕುರಿತು ಚರ್ಚೆ, ನಿಷ್ಕರ್ಷೆಗಳು ನಡೆಯಲಿವೆ. ಲಾಜಿಸ್ಟಿಕ್ಸ್ ಮತ್ತು ಸಾರಿಗೆ ಕ್ಷೇತ್ರದ ಪರಿಣಿತರು ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಳೆದ ಎರಡು ವರ್ಷಗಳಿಂದ ಟಿವಿ9 ನೆಟ್ವರ್ಕ್ ವತಿಯಿಂದ ಲೀಡರ್ಸ್ ಆಫ್ ರೋಡ್ ನೆಟ್ವರ್ಕ್ ಕಾಂಕ್ಲೇವ್ ನಡೆಯುತ್ತಾ ಬಂದಿದೆ. 2023ರ ನವೆಂಬರ್ ತಿಂಗಳಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯಕ್ರಮ ನಡೆದಿತ್ತು.

ಇದನ್ನೂ ಓದಿ: Stock Market: ಇತಿಹಾಸದಲ್ಲಿ ಮೊದಲ ಬಾರಿಗೆ ಹಾಂಕಾಂಗ್ ಅನ್ನು ಹಿಂದಿಕ್ಕಿದೆ ಭಾರತದ ಷೇರುಪೇಟೆ; ಚೀನಾ ಸಮೀಪ ದೌಡು

ದೆಹಲಿ ಸರ್ಕಾರದ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗು ಆಯುಕ್ತರಾದ ಆಶೀಶ್ ಕುಂದ್ರ, ಬೆಸ್ಟ್ ರೋಡ್​ವೇಸ್ ಸಂಸ್ಥೆಯ ಸಿಇಒ ಆಶೀಶ್ ಗುಪ್ತ, ಕ್ಯಾರವನ್ ರೋಡ್​ವೇಸ್ ಲಿ ಸಂಸ್ಥೆಯ ಮಾಲೀಕ ರಾಜೀವ್ ಎನ್ ಗುಪ್ತಾ, ಎಕ್ಸ್​ಪ್ರೆಸ್ ರೋಡ್​ವೇಸ್ ಪ್ರೈ ಲಿ ಸಂಸ್ಥೆಯ ಮಾಲೀಕ ಸಂಕಿತ್ ಗುಪ್ತಾ, ಕಾಂಟಿನೆಂಟಲ್ ಟೈರ್ ಕಂಪನಿಯ ಹಿರಿಯ ಪ್ರತಿನಿಧಿ ರಜನೀಶ್ ಕೊಚಗಾವೆ ಮೊದಲಾದವರು ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ