Twitter Layoffs: ಸ್ತ್ರೀಯರನ್ನೇ ಗುರಿ ಮಾಡುತ್ತಾರೆ; ಎಲಾನ್​ ಮಸ್ಕ್​ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ ಮಹಿಳೆಯರು

ಸ್ಯಾನ್ ಫ್ರಾನ್ಸಿಸ್ಕೊ ಫೆಡರಲ್ ಕೋರ್ಟ್ ಮೆಟ್ಟಿಲೇರಿರುವ ಮಹಿಳೆಯರು, ಟ್ವಿಟರ್​ನಿಂದ ವಜಾಗೊಂಡಿರುವ ಉದ್ಯೋಗಿಗಳಲ್ಲಿ ಶೇಕಡಾ 57ರಷ್ಟು ಮಂದಿ ಮಹಿಳೆಯರು ಎಂದು ಆರೋಪಿಸಿದ್ದಾರೆ.

Twitter Layoffs: ಸ್ತ್ರೀಯರನ್ನೇ ಗುರಿ ಮಾಡುತ್ತಾರೆ; ಎಲಾನ್​ ಮಸ್ಕ್​ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ ಮಹಿಳೆಯರು
ಎಲಾನ್ ಮಸ್ಕ್​
Follow us
| Updated By: ಗಣಪತಿ ಶರ್ಮ

Updated on: Dec 09, 2022 | 4:46 PM

ಸ್ಯಾನ್ ಫ್ರಾನ್ಸಿಸ್ಕೊ: ಟ್ವಿಟರ್​​ನಿಂದ (Twitter) ವಜಾಗೊಂಡಿರುವ ಇಬ್ಬರು ಮಹಿಳೆಯರು ಕಂಪನಿ ಮಾಲೀಕ ಎಲಾನ್ ಮಸ್ಕ್ (Elon Musk) ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಟ್ವಿಟರ್​ ಸಾಮೂಹಿಕ ವಜಾ (Mass Layoffs) ಪ್ರಕ್ರಿಯೆಯಿಂದ ಮಹಿಳಾ ಉದ್ಯೋಗಿಗಳೇ ಹೆಚ್ಚು ತೊಂದರೆಗೆ ಒಳಗಾಗಿದ್ದಾರೆ. ವಜಾ ಪ್ರಕ್ರಿಯೆ ನಡೆಸುವಾಗ ಸ್ತ್ರೀಯರನ್ನೇ ಗುರಿಯಾಗಿಸಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಎಲಾನ್ ಮಸ್ಕ್ ಅವರು 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್​ ಅನ್ನು ಖರೀದಿಸಿದ ಬೆನ್ನಲ್ಲೇ ಮೈಕ್ರೋ ಬ್ಲಾಗಿಂಗ್ ತಾಣ ಉದ್ಯೋಗಿಗಳ ಸಾಮೂಹಿಕ ವಜಾ ಆರಂಭಿಸಿತ್ತು. ಇನ್ನು ಮುಂದೆ ನಿಮಗೆ ಕಂಪನಿಯಲ್ಲಿ ಉದ್ಯೋಗ ಇರುವುದಿಲ್ಲ. ಮೂರು ತಿಂಗಳ ವೇತನವನ್ನು ಪರಿಹಾರವಾಗಿ ನೀಡಲಾಗುವುದು ಎಂದು ನವೆಂಬರ್ 4ರಂದು ಅರ್ಧದಷ್ಟು ಉದ್ಯೋಗಿಗಳಿಗೆ ಟ್ವಿಟರ್ ತಿಳಿಸಿತ್ತು.

ಸ್ಯಾನ್ ಫ್ರಾನ್ಸಿಸ್ಕೊ ಫೆಡರಲ್ ಕೋರ್ಟ್ ಮೆಟ್ಟಿಲೇರಿರುವ ಮಹಿಳೆಯರು, ಟ್ವಿಟರ್​ನಿಂದ ವಜಾಗೊಂಡಿರುವ ಉದ್ಯೋಗಿಗಳಲ್ಲಿ ಶೇಕಡಾ 57ರಷ್ಟು ಮಂದಿ ಮಹಿಳೆಯರು ಎಂದು ಆರೋಪಿಸಿದ್ದಾರೆ. ವಜಾ ಪ್ರಕ್ರಿಯೆಗೂ ಮುನ್ನ ಟ್ವಿಟರ್​​ನಲ್ಲಿ ಪುರುಷರೇ ಹೆಚ್ಚು ಸಂಖ್ಯೆಯಲ್ಲಿದ್ದರು ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: Koo App: ಟ್ವಿಟರ್​ಗೆ ಗುಡ್ ಬೈ ಹೇಳಿದ ಉದ್ಯೋಗಿಗಳಿಗೆ ಕೂ ಯಿಂದ ಭರ್ಜರಿ ಆಫರ್

ಟ್ವಿಟರ್​ ಕ್ರಮದಿಂದಾಗಿ ಮಹಿಳೆಯರಿಗೆ ತೊಂದರೆಯಾಗಿದೆ. ಮಹಿಳೆಯರನ್ನು ಉದ್ಯೋಗದಿಂದ ವಜಾಗೊಳಿಸಿರುವುದು ಮಕ್ಕಳು, ಕುಟುಂಬದವರ ಮೇಲೆ ಹೆಚ್ಚು ಕಾಳಜಿ ವಹಿಸುವ ಅವರ ಮೇಲೆ ಪರಿಣಾಮ ಬೀರಿದೆ ಎಂದು ‘ಎಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ. ವಜಾಗೊಂಡ ಮಹಿಳಾ ಉದ್ಯೋಗಿಗಳ ಪರವಾಗಿ ಕೆರೊಲಿನಾ ಬರ್ನಾಲ್ ಸ್ಟ್ರಿಫ್ಲಿಂಗ್ ಹಾಗೂ ವಿಲೋ ರೆನ್ ಟರ್ಕಲ್ ಎಂಬವರು ಕೋರ್ಟ್​​ನಲ್ಲಿ ದಾವೆ ಹೂಡಿದ್ದಾರೆ ಎಂದು ವರದಿ ತಿಳಿಸಿದೆ.

ಟ್ವಿಟರ್‌ನಲ್ಲಿ ಉದ್ಯೋಗಿಗಳ ಸಾಮೂಹಿಕ ವಜಾಗೊಳಿಸುವಿಕೆಯು ಪುರುಷ ಉದ್ಯೋಗಿಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಇಷ್ಟೇ ಅಲ್ಲದೆ, ಎಲಾನ್ ಮಸ್ಕ್ ಅವರು ಮಹಿಳೆಯರ ಬಗ್ಗೆ ಹಲವಾರು ಬಾರಿ ಸಾರ್ವಜನಿಕವಾಗಿ ತಾರತಮ್ಯದ ಮಾತುಗಳನ್ನಾಡಿದ್ದಾರೆ. ಇದು ಸಾಮೂಹಿಕ ವಜಾಗೊಳಿಸುವಿಕೆಯ ವೇಳೆ ಮಹಿಳಾ ಉದ್ಯೋಗಿಗಳ ಮೇಲೆ ಹೆಚ್ಚಿನ ಪ್ರಭಾವ ಬೀರಿದೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು