AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter Layoffs: ಸ್ತ್ರೀಯರನ್ನೇ ಗುರಿ ಮಾಡುತ್ತಾರೆ; ಎಲಾನ್​ ಮಸ್ಕ್​ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ ಮಹಿಳೆಯರು

ಸ್ಯಾನ್ ಫ್ರಾನ್ಸಿಸ್ಕೊ ಫೆಡರಲ್ ಕೋರ್ಟ್ ಮೆಟ್ಟಿಲೇರಿರುವ ಮಹಿಳೆಯರು, ಟ್ವಿಟರ್​ನಿಂದ ವಜಾಗೊಂಡಿರುವ ಉದ್ಯೋಗಿಗಳಲ್ಲಿ ಶೇಕಡಾ 57ರಷ್ಟು ಮಂದಿ ಮಹಿಳೆಯರು ಎಂದು ಆರೋಪಿಸಿದ್ದಾರೆ.

Twitter Layoffs: ಸ್ತ್ರೀಯರನ್ನೇ ಗುರಿ ಮಾಡುತ್ತಾರೆ; ಎಲಾನ್​ ಮಸ್ಕ್​ ವಿರುದ್ಧ ಕೋರ್ಟ್​​ ಮೆಟ್ಟಿಲೇರಿದ ಮಹಿಳೆಯರು
ಎಲಾನ್ ಮಸ್ಕ್​
Follow us
TV9 Web
| Updated By: Ganapathi Sharma

Updated on: Dec 09, 2022 | 4:46 PM

ಸ್ಯಾನ್ ಫ್ರಾನ್ಸಿಸ್ಕೊ: ಟ್ವಿಟರ್​​ನಿಂದ (Twitter) ವಜಾಗೊಂಡಿರುವ ಇಬ್ಬರು ಮಹಿಳೆಯರು ಕಂಪನಿ ಮಾಲೀಕ ಎಲಾನ್ ಮಸ್ಕ್ (Elon Musk) ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾರೆ. ಟ್ವಿಟರ್​ ಸಾಮೂಹಿಕ ವಜಾ (Mass Layoffs) ಪ್ರಕ್ರಿಯೆಯಿಂದ ಮಹಿಳಾ ಉದ್ಯೋಗಿಗಳೇ ಹೆಚ್ಚು ತೊಂದರೆಗೆ ಒಳಗಾಗಿದ್ದಾರೆ. ವಜಾ ಪ್ರಕ್ರಿಯೆ ನಡೆಸುವಾಗ ಸ್ತ್ರೀಯರನ್ನೇ ಗುರಿಯಾಗಿಸಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಎಲಾನ್ ಮಸ್ಕ್ ಅವರು 44 ಶತಕೋಟಿ ಡಾಲರ್ ಮೊತ್ತಕ್ಕೆ ಟ್ವಿಟರ್​ ಅನ್ನು ಖರೀದಿಸಿದ ಬೆನ್ನಲ್ಲೇ ಮೈಕ್ರೋ ಬ್ಲಾಗಿಂಗ್ ತಾಣ ಉದ್ಯೋಗಿಗಳ ಸಾಮೂಹಿಕ ವಜಾ ಆರಂಭಿಸಿತ್ತು. ಇನ್ನು ಮುಂದೆ ನಿಮಗೆ ಕಂಪನಿಯಲ್ಲಿ ಉದ್ಯೋಗ ಇರುವುದಿಲ್ಲ. ಮೂರು ತಿಂಗಳ ವೇತನವನ್ನು ಪರಿಹಾರವಾಗಿ ನೀಡಲಾಗುವುದು ಎಂದು ನವೆಂಬರ್ 4ರಂದು ಅರ್ಧದಷ್ಟು ಉದ್ಯೋಗಿಗಳಿಗೆ ಟ್ವಿಟರ್ ತಿಳಿಸಿತ್ತು.

ಸ್ಯಾನ್ ಫ್ರಾನ್ಸಿಸ್ಕೊ ಫೆಡರಲ್ ಕೋರ್ಟ್ ಮೆಟ್ಟಿಲೇರಿರುವ ಮಹಿಳೆಯರು, ಟ್ವಿಟರ್​ನಿಂದ ವಜಾಗೊಂಡಿರುವ ಉದ್ಯೋಗಿಗಳಲ್ಲಿ ಶೇಕಡಾ 57ರಷ್ಟು ಮಂದಿ ಮಹಿಳೆಯರು ಎಂದು ಆರೋಪಿಸಿದ್ದಾರೆ. ವಜಾ ಪ್ರಕ್ರಿಯೆಗೂ ಮುನ್ನ ಟ್ವಿಟರ್​​ನಲ್ಲಿ ಪುರುಷರೇ ಹೆಚ್ಚು ಸಂಖ್ಯೆಯಲ್ಲಿದ್ದರು ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ: Koo App: ಟ್ವಿಟರ್​ಗೆ ಗುಡ್ ಬೈ ಹೇಳಿದ ಉದ್ಯೋಗಿಗಳಿಗೆ ಕೂ ಯಿಂದ ಭರ್ಜರಿ ಆಫರ್

ಟ್ವಿಟರ್​ ಕ್ರಮದಿಂದಾಗಿ ಮಹಿಳೆಯರಿಗೆ ತೊಂದರೆಯಾಗಿದೆ. ಮಹಿಳೆಯರನ್ನು ಉದ್ಯೋಗದಿಂದ ವಜಾಗೊಳಿಸಿರುವುದು ಮಕ್ಕಳು, ಕುಟುಂಬದವರ ಮೇಲೆ ಹೆಚ್ಚು ಕಾಳಜಿ ವಹಿಸುವ ಅವರ ಮೇಲೆ ಪರಿಣಾಮ ಬೀರಿದೆ ಎಂದು ‘ಎಪಿ’ ಸುದ್ದಿಸಂಸ್ಥೆ ವರದಿ ಮಾಡಿದೆ. ವಜಾಗೊಂಡ ಮಹಿಳಾ ಉದ್ಯೋಗಿಗಳ ಪರವಾಗಿ ಕೆರೊಲಿನಾ ಬರ್ನಾಲ್ ಸ್ಟ್ರಿಫ್ಲಿಂಗ್ ಹಾಗೂ ವಿಲೋ ರೆನ್ ಟರ್ಕಲ್ ಎಂಬವರು ಕೋರ್ಟ್​​ನಲ್ಲಿ ದಾವೆ ಹೂಡಿದ್ದಾರೆ ಎಂದು ವರದಿ ತಿಳಿಸಿದೆ.

ಟ್ವಿಟರ್‌ನಲ್ಲಿ ಉದ್ಯೋಗಿಗಳ ಸಾಮೂಹಿಕ ವಜಾಗೊಳಿಸುವಿಕೆಯು ಪುರುಷ ಉದ್ಯೋಗಿಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಉದ್ಯೋಗಿಗಳ ಮೇಲೆ ಪರಿಣಾಮ ಬೀರಿದೆ. ಇಷ್ಟೇ ಅಲ್ಲದೆ, ಎಲಾನ್ ಮಸ್ಕ್ ಅವರು ಮಹಿಳೆಯರ ಬಗ್ಗೆ ಹಲವಾರು ಬಾರಿ ಸಾರ್ವಜನಿಕವಾಗಿ ತಾರತಮ್ಯದ ಮಾತುಗಳನ್ನಾಡಿದ್ದಾರೆ. ಇದು ಸಾಮೂಹಿಕ ವಜಾಗೊಳಿಸುವಿಕೆಯ ವೇಳೆ ಮಹಿಳಾ ಉದ್ಯೋಗಿಗಳ ಮೇಲೆ ಹೆಚ್ಚಿನ ಪ್ರಭಾವ ಬೀರಿದೆ ಎಂದು ದೂರುದಾರರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್