AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆರಳೆಣಿಕೆಯ ಕಂಪನಿಗಳು ಭಾರತದ ಅಭಿವೃದ್ಧಿಯ ಹಣೆಬರಹ ಬರೆಯುವಂತಾಗಬಾರದು: ಉದಯ್ ಕೋಟಕ್

Uday Kotak Speaks: ‘ಹಲವು ಹೂವುಗಳು ಅರಳಬೇಕು. ಭಾರತದ ಹಣೆಬರಹವನ್ನು ಕೆಲವೇ ಕಂಪನಿಗಳು ಬರೆಯಬೇಕೆನ್ನುವುದನ್ನು ನಾನು ಒಪ್ಪುವುದಿಲ್ಲ. ಹಲವು ವಿಜೇತರು ಇರುವ ವಿಸ್ತೃತ ತಳಹದಿಯ ಪ್ರಗತಿ ನಮಗೆ ಬೇಕು...’ ಎಂದು ಕೋಟಕ್ ಮಹೀಂದ್ರ ಬ್ಯಾಂಕ್​ನ ಸಂಸ್ಥಾಪಕ ಹಾಗು ಮಾಜಿ ಸಿಇಒ ಉದಯ್ ಕೋಟಕ್ ಹೇಳಿದ್ದು, ಕೆಲವೇ ಉದ್ಯಮಸಂಸ್ಥೆಗಳು ಭಾರತದ ಹಣೆಬರಹ ಬರೆಯುವಂತಾಗಬಾರದು. ಹಲವು ವಿಜೇತರು ಇರುವಂತಹ ವಿಸ್ತೃತ ತಳಹದಿಯ ಪ್ರಗತಿ ನಮ್ಮದಾಗಬೇಕು ಎಂದಿದ್ದಾರೆ.

ಬೆರಳೆಣಿಕೆಯ ಕಂಪನಿಗಳು ಭಾರತದ ಅಭಿವೃದ್ಧಿಯ ಹಣೆಬರಹ ಬರೆಯುವಂತಾಗಬಾರದು: ಉದಯ್ ಕೋಟಕ್
ಉದಯ್ ಕೋಟಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 08, 2023 | 2:07 PM

Share

ನವದೆಹಲಿ, ಅಕ್ಟೋಬರ್ 8: ಭಾರತದ ಆರ್ಥಿಕ ಯಶೋಗಾಥೆಯಲ್ಲಿ ಕೆಲವೇ ಉದ್ಯಮಿಗಳು ಮತ್ತು ಸಂಸ್ಥೆಗಳು ಭಾಗೀದಾರರಾಗಿದ್ದಾರೆ ಎಂದು ಕೋಟಕ್ ಮಹೀಂದ್ರ ಬ್ಯಾಂಕ್​ನ ಸಂಸ್ಥಾಪಕ ಉದಯ್ ಕೋಟಕ್ (Uday Kotak) ಆತಂಕ ವ್ಯಕ್ತಪಡಿಸಿದ್ದಾರೆ. ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಉದಯ್ ಕೋಟಕ್, ಕೆಲವೇ ಉದ್ಯಮಸಂಸ್ಥೆಗಳು ಭಾರತದ ಹಣೆಬರಹ ಬರೆಯುವಂತಾಗಬಾರದು. ಹಲವು ವಿಜೇತರು ಇರುವಂತಹ ವಿಸ್ತೃತ ತಳಹದಿಯ ಪ್ರಗತಿಯ ಗುರಿ ಇರಬೇಕು ಎಂದು ಸಲಹೆ ನೀಡಿದ್ದಾರೆ.

‘ಹಲವು ಹೂವುಗಳು ಅರಳಬೇಕು. ಭಾರತದ ಹಣೆಬರಹವನ್ನು ಕೆಲವೇ ಕಂಪನಿಗಳು ಬರೆಯಬೇಕೆನ್ನುವುದನ್ನು ನಾನು ಒಪ್ಪುವುದಿಲ್ಲ. ಹಲವು ವಿಜೇತರು ಇರುವ ವಿಸ್ತೃತ ತಳಹದಿಯ ಪ್ರಗತಿ ನಮಗೆ ಬೇಕು…

‘ಕೋಟ್ಯಂತರ ಮಂದಿಯನ್ನು ಬಡತನದ ಕೂಪದಿಂದ ಹೊರತರಬೇಕಾದರೆ ಆರ್ಥಿಕತೆ ಬಹಳ ವೇಗವಾಗಿ ಹಿಗ್ಗಬೇಕು. ದೇಶದ ಆರ್ಥಿಕತೆ ಶೇ. 8ರಿಂದ 9ರಷ್ಟು ಬೆಳವಣಿಗೆ ಹೊಂದುವಂತಾಗಬೇಕು’ ಎಂದು ಬ್ಯಾಂಕಿಂಗ್ ಉದ್ಯಮಿ ಉದಯ್ ಕೋಟಕ್ ಹೇಳಿದ್ದಾರೆ.

ಇದನ್ನೂ ಓದಿ: Small Business Ideas: ಹತ್ತು ಸಾವಿರ ರೂ ಮಾತ್ರವಾ ಇರುವುದು? ಈ ಬಿಸಿನೆಸ್​ಗಳನ್ನು ಪ್ರಯತ್ನಿಸಿ

ಕೆಲವೇ ಸಂಸ್ಥೆಗಳು ಉದ್ಯಮ ಪ್ರಪಂಚವನ್ನು ಆಳುತ್ತಿರುವ ಬಗ್ಗೆ ಉದಯ್ ಕೋಟಕ್ ಆತಂಕ ವ್ಯಕ್ತಪಡಿಸಿರುವುದು ಇದೇ ಮೊದಲಲ್ಲ. ಕಳೆದ ವಾರ ನಡೆದ ಇಂಡಿಯಾ ಟುಡೇ ಕಾಂಕ್ಲೇವ್ 2023 ಕಾರ್ಯಕ್ರಮದಲ್ಲಿ ಮಾತನಾಡುವಾಗಲೂ ಅವರು ಈ ಬಗ್ಗೆ ಮಾತನಾಡಿದ್ದರು.

ಕೆಲವರ ಕೈಯಲ್ಲಿ ಬಿಸಿನೆಸ್ ಶಕ್ತಿ ಕೇಂದ್ರೀಕೃತವಾಗುತ್ತಿದೆ. ಕಿರು ಅವಧಿಗೆ ಇದು ಫಲ ಕೊಡಬಹುದಾದರೂ ದೀರ್ಘಾವಧಿಯಲ್ಲಿ ಈ ಶಕ್ತಿ ಸಂಚಯನವಾಗಬೇಕಾದರೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯಮಗಳು ಬೆಳೆವಣಿಗೆ ಹೊಂದಬೇಕು ಎಂದು ಕೋಟಕ್ ಮಹೀಂದ್ರ ಬ್ಯಾಂಕ್​ನ ಸಂಸ್ಥಾಪಕರು ಅಭಿಪ್ರಾಯಪಟ್ಟಿದ್ದರು.

ತಮ್ಮ ಅಭಿಪ್ರಾಯಗಳನ್ನು ಪುಷ್ಟೀಕರಿಸಲು ಅವರು ಟೆಲಿಕಾಂ ಸೇರಿದಂತೆ ವಿವಿಧ ಕ್ಷೇತ್ರಗಳ ಸ್ಥಿತಿಯನ್ನು ಉಲ್ಲೇಖಿಸಿದರು.

ಇದನ್ನೂ ಓದಿ: ರೂ 2,000 ನೋಟು ಇನ್ನೂ ಇವೆಯಾ?; ಕೆಲವೇ ಕಡೆ ನೋಟು ವಿನಿಮಯಕ್ಕೆ ಇನ್ನೂ ಇದೆ ಅವಕಾಶ; ಇಲ್ಲಿದೆ ಡೀಟೇಲ್ಸ್

‘ಟೆಲಿಕಾಂ ವಲಯವನ್ನೇ ತೆಗೆದುಕೊಳ್ಳಿ, ಐದು ವರ್ಷಗಳ ಹಿಂದೆ 13 ಸಂಸ್ಥೆಗಳಿದ್ದವು. ಈಗ ಎರಡೂವರೆ ಮಾತ್ರವೇ ಇರೋದು. ಉಕ್ಕು ಕ್ಷೇತ್ರದಲ್ಲಿ ಎರಡು ದೊಡ್ಡ ಸಂಸ್ಥೆಗಳು ಹಾಗೂ ಬಹಳಷ್ಟು ಸಣ್ಣ ಸಂಸ್ಥೆಗಳಿವೆ’ ಎಂದು ಹೇಳಿದ ಉದಯ್ ಕೋಟಕ್, ಕೇಂದ್ರ ಸರ್ಕಾರದ ನೀತಿಗಳು ಹೆಚ್ಚೆಚ್ಚು ಹೂವುಗಳು ಅರಳಲು ಅನುವಾಗುವಂತಹ ವಾತಾವರಣ ನಿರ್ಮಿಸುವಂತಿರಬೇಕು ಎಂದು ಸಲಹೆ ನೀಡಿದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು