ಈ ವರ್ಷ ಭಾರತದ ಆರ್ಥಿಕ ಬೆಳವಣಿಗೆ ಶೇ. 6.9: ನಿರೀಕ್ಷೆ ಹೆಚ್ಚಿಸಿದ ವಿಶ್ವಸಂಸ್ಥೆ

UN world economic situation and prospects 2024 report: ವಿಶ್ವಸಂಸ್ಥೆಯ ‘ವರ್ಲ್ಡ್ ಎಕನಾಮಿಕ್ ಸಿಚುವೇಶನ್ ಅಂಡ್ ಪ್ರಾಸ್ಪೆಕ್ಟ್​ಸ್ 2024’ ವರದಿಯಲ್ಲಿ ದಕ್ಷಿಣ ಏಷ್ಯಾ ಪ್ರದೇಶದ ಆರ್ಥಿಕ ಬೆಳವಣಿಗೆ ಬಗ್ಗೆ ಆಶಾದಾಯಕವಾಗಿದೆ. ಜನವರಿ ಬಳಿಕ ಬಿಡುಗಡೆ ಆದ ಈ ಅಪ್​ಡೇಟೆಡ್ ವರದಿಯಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ನಿರೀಕ್ಷೆ ಹೆಚ್ಚಿಸಲಾಗಿದೆ. 2024ರಲ್ಲಿ ಭಾರತದ ಬೆಳವಣಿಗೆ ಶೇ. 6.2ರಷ್ಟಿರಬಹುದು ಎಂದು ಜನವರಿ ವರದಿಯಲ್ಲಿ ಅಂದಾಜಿಸಲಾಗಿತ್ತು. ಈಗ ಶೇ. 6.9ರಷ್ಟು ಬೆಳವಣಿಗೆ ಹೊಂದಬಹುದು ಎಂದು ನಿರೀಕ್ಷೆ ಹೆಚ್ಚಿಸಲಾಗಿದೆ.

ಈ ವರ್ಷ ಭಾರತದ ಆರ್ಥಿಕ ಬೆಳವಣಿಗೆ ಶೇ. 6.9: ನಿರೀಕ್ಷೆ ಹೆಚ್ಚಿಸಿದ ವಿಶ್ವಸಂಸ್ಥೆ
ಭಾರತದ ಆರ್ಥಿಕತೆ
Follow us
|

Updated on: May 17, 2024 | 6:09 PM

ನವದೆಹಲಿ, ಮೇ 17: ಭಾರತ ಸಾಧಿಸುತ್ತಿರುವ ಆರ್ಥಿಕ ಬೆಳವಣಿಗೆ ಬಗ್ಗೆ ವಿಶ್ವಸಂಸ್ಥೆ (United Nations) ಹೆಚ್ಚು ಸಕಾರಾತ್ಮಕವಾಗಿದೆ. ಈ ಕ್ಯಾಲಂಡರ್ ವರ್ಷದಲ್ಲಿ ಭಾರತದ ಜಿಡಿಪಿ ದರ (India GDP) ವಿಚಾರದಲ್ಲಿ ತನ್ನ ನಿರೀಕ್ಷೆ ಹೆಚ್ಚಿಸಿದೆ. 2024ರಲ್ಲಿ ಭಾರತ ಶೇ. 6.2ರಷ್ಟು ಆರ್ಥಿಕ ವೃದ್ಧಿ ಕಾಣಬಹುದು ಎಂದು ಜನವರಿ ತಿಂಗಳಲ್ಲಿ ವಿಶ್ವಸಂಸ್ಥೆ ನಿರೀಕ್ಷಿಸಿತ್ತು. ಈಗ ನಾಲ್ಕು ತಿಂಗಳ ಬಳಿಕ ತನ್ನ ವರದಿಯಲ್ಲಿ ಅಭಿಪ್ರಾಯ ಬದಲಿಸಿದ್ದು, ಭಾರತ 2024ರ ಕ್ಯಾಲಂಡರ್ ವರ್ಷದಲ್ಲಿ ಶೇ. 6.9ರಷ್ಟು ಬೆಳೆಯುವ ಸಾಧ್ಯತೆ ಇದೆ ಎಂದು ಹೇಳಿದೆ. ಆದರೆ, 2025ರ ವರ್ಷದಲ್ಲಿ ಭಾರತದ ಜಿಡಿಪಿ ಶೇ. 6.6ರಷ್ಟು ಬೆಳೆಯಬಹುದು ಎಂದು ತಾನು ಮಾಡಿದ ಅಂದಾಜಿಗೆ ವಿಶ್ವಸಂಸ್ಥೆ ಬದ್ಧವಾಗಿದೆ.

2024ರಲ್ಲಿ ಭಾರತದ ಆರ್ಥಿಕತೆ ತನ್ನ ನಿರೀಕ್ಷೆಮೀರಿ ಬೆಳೆಯಲು ಏನು ಕಾರಣ ಎಂಬುದನ್ನು ವಿಶ್ವಸಂಸ್ಥೆ ತನ್ನ ‘ವರ್ಲ್ಡ್ ಎಕನಾಮಿಕ್ ಸಿಚುವೇಶನ್ ಅಂಡ್ ಪ್ರಾಸ್ಪೆಕ್ಟ್​ಸ್ 2024’ ವರದಿಯಲ್ಲಿ ವಿವರಿಸಿದೆ. ಅದರ ಪ್ರಕಾರ ಭಾರತದಲ್ಲಿ ಸಾರ್ವಜನಿಕ ಹೂಡಿಕೆ ಪ್ರಬಲವಾಗಿದೆ. ಖಾಸಗಿ ಅನುಭೋಗ ಕೂಡ ಉತ್ತಮವಾಗಿದೆ. ಜಾಗತಿಕವಾಗಿ ರಫ್ತು ಮಾರುಕಟ್ಟೆ ಕಳೆಗುಂದಿರುವುದಾದರೂ ಭಾರತದ ಫಾರ್ಮಾ ಮತ್ತು ರಾಸಾಯನಿಕ ಕ್ಷೇತ್ರಗಳು ರಫ್ತು ಮಾಡುವ ಪ್ರಮಾಣ ಸಾಕಷ್ಟು ಹೆಚ್ಚಾಗಲಿದೆ ಎಂದು ವಿಶ್ವಸಂಸ್ಥೆಯ ಈ ವರದಿಯಲ್ಲಿ ವಿವರಣೆ ಕೊಡಲಾಗಿದೆ.

ಗ್ರಾಹಕ ಬೆಲೆ ಅಥವಾ ರೀಟೇಲ್ ಹಣದುಬ್ಬರ 2024ರಲ್ಲಿ ಕಡಿಮೆ ಆಗಲಿದೆ ಎಂದು ಈ ವರದಿ ಹೇಳಿದೆ. 2023ರಲ್ಲಿ ಹಣದುಬ್ಬರ ಶೇ. 5.6 ಇತ್ತು. ಈ ವರ್ಷ ಅದು ಶೇ. 4.5ಕ್ಕೆ ಇಳಿಯಲಿದೆ ಎಂದು ಅದು ಅಂದಾಜು ಮಾಡಿದೆ. ಭಾರತ ಮಾತ್ರವಲ್ಲ ದಕ್ಷಿಣ ಏಷ್ಯಾದ ಇತರ ದೇಶಗಳಲ್ಲೂ ಹಣದುಬ್ಬರ ಇಳಿಮುಖವಾಗುವ ನಿರೀಕ್ಷೆ ಇದೆಯಂತೆ. ಆದರೆ, ಭಾರತ ಮತ್ತು ಬಾಂಗ್ಲಾದೇಶಗಳಿಗೆ ಆಹಾರ ವಸ್ತುಗಳ ಬೆಲೆ ಏರಿಕೆಯೇ ಪ್ರಮುಖ ತಲೆಬೇನೆಯಾಗಿ ಉಳಿಯಬಹುದು. ಹಣದುಬ್ಬರವು ಶೇ. 4ಕ್ಕೆ ಕಟ್ಟಿಹಾಕಲು ಈ ಆಹಾರ ಬೆಲೆ ಹಣದುಬ್ಬರ ಕಾರಣವಾಗಬಹುದು ಎಂದು ವಿವಿಧ ಆರ್ಥಿಕ ತಜ್ಞರೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸರಿಯಾಗಿ ಮೀಸೆ ಮೂಡದ ಭಾರತೀಯ ಹುಡುಗರಿಂದ ಎಐ ಉದ್ಯಮದಲ್ಲಿ ಸಂಚಲನ; ಫೋರ್ಬ್ಸ್ ಪಟ್ಟಿಯಲ್ಲಿ 19 ವರ್ಷದ ಆಯುಷ್, ಆರ್ಯನ್

ಜಿಡಿಪಿ ವಿಚಾರದಲ್ಲಿ ಭಾರತದ ಪರಿಸ್ಥಿತಿ ಉತ್ತಮವಾಗಿದೆ. ಹಾಗೆಯೇ, ಆರ್ಥಿಕ ಅಧಃಪತನದತ್ತ ಕುಸಿಯುತ್ತಿದ್ದ ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳು ಚೇತರಿಸಿಕೊಳ್ಳುವ ಸೂಚನೆ ನೀಡಿವೆ. 2024ರ ವರ್ಷದಲ್ಲಿ ದಕ್ಷಿಣ ಏಷ್ಯಾ ಪ್ರದೇಶದ ಜಿಡಿಪಿ ಶೇ. 5.8ರಷ್ಟು ಬೆಳೆಯಬಹುದು ಎಂದು ವಿಶ್ವಸಂಸ್ಥೆ ಹೇಳಿದೆ. ಶೇ. 5.2ರಷ್ಟು ಬೆಳೆಯಬಹುದು ಎಂದು ಜನವರಿ ವರದಿಯಲ್ಲಿ ಅಂದಾಜಿಸಲಾಗಿತ್ತು. 2025ರಲ್ಲಿ ಈ ಭಾಗದ ಜಿಡಿಪಿ ಶೇ. 5.7ರಷ್ಟು ಇರಬಹುದು ಎಂದು ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು