AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಸುದಾರರಿಲ್ಲದ ಠೇವಣಿ ಬಗ್ಗೆ ಜಾಗೃತಿ ಅಭಿಯಾನ ಆರಂಭಿಸಿದ ಆರ್​​ಬಿಐ

ಹೆಚ್ಚಿನ ಠೇವಣಿ ಖಾತೆಗಳು ತಮಿಳುನಾಡು, ಪಂಜಾಬ್, ಗುಜರಾತ್, ಮಹಾರಾಷ್ಟ್ರ , ಬಂಗಾಳ, ಕರ್ನಾಟಕ, ಬಿಹಾರ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಇದೆ ಎಂದು ಆರ್​​ಬಿಐ ಅಧಿಕಾರಿಗಳು ಹೇಳಿದ್ದಾರೆ.

ವಾರಸುದಾರರಿಲ್ಲದ ಠೇವಣಿ ಬಗ್ಗೆ ಜಾಗೃತಿ ಅಭಿಯಾನ ಆರಂಭಿಸಿದ ಆರ್​​ಬಿಐ
ಭಾರತೀಯ ರಿಸರ್ವ್ ಬ್ಯಾಂಕ್ (ಸಂಗ್ರಹ ಚಿತ್ರ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 29, 2022 | 7:08 PM

ಗರಿಷ್ಠ ಸಂಖ್ಯೆಯಲ್ಲಿ ವಾರಸುದಾರರಿಲ್ಲದ ಠೇವಣಿ (unclaimed deposits) ಹೊಂದಿರುವ ಎಂಟು ರಾಜ್ಯಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಜಾಗೃತಿ ಅಭಿಯಾನವನ್ನು ಆರಂಭಿಸಿದೆ. ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ ಈ ಎಂಟು ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿ ಈ ಅಭಿಯಾನ ನಡೆಯುತ್ತಿದೆ.  ಹಿಂದಿನ ಆರ್ಥಿಕ ವರ್ಷದಲ್ಲಿ ವಾರಸುದಾರರಿಲ್ಲದ ಠೇವಣಿ 39,264 ಕೋಟಿ ಆಗಿದ್ದು 2022ರ ಆರ್ಥಿಕ ವರ್ಷದಲ್ಲಿ ಇದು 48,262 ಕೋಟಿಗೆ ತಲುಪಿದೆ ಎಂದು ಆರ್​​ಬಿಐ ವಾರ್ಷಿಕ ವರದಿ ಹೇಳಿದೆ. ಹೆಚ್ಚಿನ ಠೇವಣಿ ಖಾತೆಗಳು ತಮಿಳುನಾಡು, ಪಂಜಾಬ್, ಗುಜರಾತ್, ಮಹಾರಾಷ್ಟ್ರ , ಬಂಗಾಳ, ಕರ್ನಾಟಕ, ಬಿಹಾರ, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಇದೆ ಎಂದು ಆರ್​​ಬಿಐ ಅಧಿಕಾರಿಗಳು ಹೇಳಿದ್ದಾರೆ. ಆರ್​​ಬಿಐ ನಿಯಮ ಪ್ರಕಾರ ಉಳಿತಾಯ ಖಾತೆ ಅಥವಾ ಚಾಲ್ತಿ ಖಾತೆಯಲ್ಲಿ ಹಣವಿದ್ದು 10 ವರ್ಷಗಳ ವರಗೆ ಅದನ್ನು ನಿರ್ವಹಿಸದೇ ಇದ್ದರೆ ಅಥವಾ ಮೆಚ್ಯುರಿಟಿಯ ದಿನಾಂಕದಿಂದ 10 ವರ್ಷದೊಳಗೆ ಠೇವಣಿ ಹಣವನ್ನು ಪಡೆಯದೇ ಇದ್ದರೆ ಅಂಥಾ ಖಾತೆಗಳನ್ನು ವಾರಸುದಾರರಿಲ್ಲದ ಖಾತೆ ಎಂದು ವರ್ಗೀಕರಿಸಲಾಗುತ್ತದೆ.

ಇದಾದ ಮೇಲೆ ಬ್ಯಾಂಕ್ ಗಳು ಈ ಹಣವನ್ನು ಆರ್​​ಬಿಐ ನಿರ್ವಹಿಸುತ್ತಿರುವ ಠೇವಣಿದಾರರ ಶಿಕ್ಷಣ ಮತ್ತು ಜಾಗೃತ ನಿಧಿಗೆ ವರ್ಗಾವಣೆ ಮಾಡುತ್ತದೆ. ಠೇವಣಿದಾರರು ಆ ಹಣ ಮತ್ತು ಅದಕ್ಕೆ ಸಿಕ್ಕಿದ ಬಡ್ಡಿಯನ್ನು ಪಡೆಯಬಹುದು. ಆದಾಗ್ಯೂ, ಸಮಯಕ್ಕೆ ಸರಿಯಾಗಿ ಬ್ಯಾಂಕ್ ಗಳು ಮತ್ತು ಆರ್ ಬಿಐ ಸಾರ್ವಜನಿಕ ಜಾಗೃತಿ ಅಭಿಯಾನದ ನಡೆಸುತ್ತಿದ್ದರೂ ಈ ರೀತಿ ವಾರಸುದಾರರಿಲ್ಲದ ಠೇವಣಿಗಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ ಎಂದು ಆರ್ ಬಿಐ ಹೇಳಿದೆ.

ಠೇವಣಿದಾರರು ತಮ್ಮ ಉಳಿತಾಯ ಅಥವಾ ಚಾಲ್ತಿ ಖಾತೆಗಳನ್ನು ಮುಚ್ಚದೇ ಇರುವುದು, ಖಾತೆಗಳನ್ನು ನಿರ್ವಹಿಸದೇ ಇರುವುದು ಅಥವಾ ಮೆಚ್ಯುರ್ಡ್ ಸ್ಥಿರ ಠೇವಣಿಯನ್ನು ಪಡೆಯಲು ಅರ್ಜಿ ಸಲ್ಲಿಸದೇ ಇರುವುದು ವಾರಸುದಾರರಿಲ್ಲದ ಠೇವಣಿ ಏರಿಕೆಗೆ ಕಾರಣವಾಗಿದೆ. ಮೃತ ವ್ಯಕ್ತಿಯ ಖಾತೆಯಿದ್ದರೆ ಅದರ ಹಣವನ್ನು ಪಡೆಯಲು ಯಾರೂ ಬಾರದೇ ಇರುವುದು ಕೂಡಾ ವಾರಸುದಾರರಿಲ್ಲದ ಠೇವಣಿಗೆ ಕಾರಣವಾಗುತ್ತದೆ.

Published On - 6:30 pm, Fri, 29 July 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ