AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Unemployment Rate: ನಿರುದ್ಯೋಗ ದರ 6 ವರ್ಷದಲ್ಲಿ ಶೇ. 6ರಿಂದ ಶೇ. 3.2ಕ್ಕೆ ಇಳಿಕೆ

Unemployment rate in India declines from 6pc to 3.2pc in 6 years: ಭಾರತದಲ್ಲಿ 15 ವರ್ಷ ಮೇಲ್ಪಟ್ಟ ವಯಸ್ಸಿನ ಜನರಲ್ಲಿ 2017-18ರಲ್ಲಿ ನಿರುದ್ಯೋಗ ಪ್ರಮಾಣ ಶೇ. 6 ಇತ್ತು. 2023-24ರಲ್ಲಿ ಇದು ಶೇ. 3.2ಕ್ಕೆ ಇಳಿದಿದೆ. ಈ ಆರು ವರ್ಷದಲ್ಲಿ ಭಾರತದಲ್ಲಿ ನಿರುದ್ಯೋಗ ದರ ಗಣನೀಯವಾಗಿ ಕಡಿಮೆ ಆಗಿದೆ. ಸರ್ಕಾರ ನಿರುದ್ಯೋಗ ಕಡಿಮೆ ಮಾಡಲು ಹಲವು ಕೌಶಲ್ಯಾಭಿವೃದ್ಧಿ ಯೊಜನೆಗಳನ್ನು ಹಮ್ಮಿಕೊಂಡಿದೆ.

Unemployment Rate: ನಿರುದ್ಯೋಗ ದರ 6 ವರ್ಷದಲ್ಲಿ ಶೇ. 6ರಿಂದ ಶೇ. 3.2ಕ್ಕೆ ಇಳಿಕೆ
ಉದ್ಯೋಗಾಕಾಂಕ್ಷಿಗಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 02, 2025 | 12:48 PM

Share

ನವದೆಹಲಿ, ಡಿಸೆಂಬರ್ 2: ಸರ್ಕಾರ ಬಿಡುಗಡೆ ಮಾಡಿರುವ ವಾರ್ಷಿಕ ಕಾರ್ಮಿಕ ಸಮೀಕ್ಷಾ ವರದಿ (PLFS- Periodic Labour Force Survey) ಪ್ರಕಾರ ಭಾರತದಲ್ಲಿ ನಿರುದ್ಯೋಗ ದರ (Unemployment rate) ಕಳೆದ 6 ವರ್ಷದಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. 2017-18ರಲ್ಲಿ 15 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಜನರ ನಿರುದ್ಯೋಗ ದರ ಶೇ. 6 ಇತ್ತು. 2023-24ರಲ್ಲಿ ಅದು ಶೇ. 3.2ಕ್ಕೆ ಇಳಿದಿದೆ. ಆರು ವರ್ಷದಲ್ಲಿ ನಿರುದ್ಯೋಗ ದರ ಶೇ. 6ರಿಂದ ಶೇ. 3.2ಕ್ಕೆ ಇಳಿಕೆ ಕಂಡಿರುವುದು ಈ ದತ್ತಾಂಶದಿಂದ ತಿಳಿಯಬಹುದಾಗಿದೆ.

ಕೇಂದ್ರದ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯವು ಪಿಎಲ್​ಎಫ್​ಎಸ್ ಸಮೀಕ್ಷಾ ಪದ್ಧತಿಯಲ್ಲಿ ಮಾರ್ಪಾಡುಗಳನ್ನು ತಂದಿದೆ. ಹಾಲಿ ಸಾಪ್ತಾಹಿಕ ಸ್ಥಿತಿ (ಸಿಡಬ್ಲ್ಯುಎಸ್) ಆಧಾರದ ಮೇಲೆ ಮಾಸಿಕವಾಗಿ ನಿರುದ್ಯೋಗಸ್ಥಿತಿಯನ್ನು ಅಂದಾಜು ಮಾಡುವ ವಿಧಾನವನ್ನು ಜಾರಿಗೆ ತರಲಾಗಿದೆ.

ಇದನ್ನು ಓದಿ: GST collections: ಜಿಎಸ್​ಟಿ ದರ ಕಡಿತದ ಪರಿಣಾಮ, ನವೆಂಬರ್​ನಲ್ಲಿ ತೆರಿಗೆ ಸಂಗ್ರಹ ಕುಂಠಿತ

ಈ ಹೊಸ ಮಾಸಿಕ ದತ್ತಾಂಶದ ಪ್ರಕಾರ 15 ವರ್ಷ ಮೇಲ್ಪಟ್ಟ ವಯೋಮಾನದವರ ನಿಗುದ್ಯೋಗದರ 2025ರ ಆಗಸ್ಟ್ ತಿಂಗಳಲ್ಲಿ ಶೇ. 5.1 ಇತ್ತು. ಸೆಪ್ಟೆಂಬರ್ ತಿಂಗಳಲ್ಲಿ ಶೇ. 5.2 ಇದೆ. ಈ ಎರಡು ತಿಂಗಳಲ್ಲಿ ಗ್ರಾಮೀಣ ನಿರುದ್ಯೋಗ ಕ್ರಮವಾಗಿ ಶೇ. 4.3 ಮತ್ತು ಶೇ. 4.6 ಇದೆ. ನಗರ ಭಾಗದಲ್ಲಿ ನಿರುದ್ಯೋಗದರವು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಶೇ. 6.7 ಮತ್ತು ಶೇ. 6.8 ಇದೆ.

ಉದ್ಯೋಗ ಸೃಷ್ಟಿಗೆ ಸರ್ಕಾರದಿಂದ ನಡೆಸಲಾಗುವ ಯೋಜನೆಗಳು

  • ಪಿಎಂ ಉದ್ಯೋಗ ಸೃಷ್ಟಿ ಯೋಜನೆ (ಪಿಎಂಇಜಿಪಿ)
  • ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ (ಮನ್​ರೇಗಾ)
  • ಪಿಎಲ್​ಐ ಸ್ಕೀಮ್
  • ದೀನದಯಾಳ್ ಅಂತ್ಯೋದಯ ಯೋಜನೆ
  • ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ
  • ಪಿಎಂ ಕೌಶಲ್ ವಿಕಾಸ್ ಯೋಜನೆ
  • ಗ್ರಾಮೀಣ ಸ್ವ ಉದ್ಯೋಗ ಮತ್ತು ತರಬೇತಿ ಸಂಸ್ಥೆಗಳು
  • ಪಿಎಂ ಸ್ವನಿಧಿ ಯೋಜನೆ (ಬೀದಿಬದಿ ವ್ಯಾಪಾರಿಗಳಿಗೆ)
  • ಸ್ಟ್ಯಾಂಡಪ್ ಇಂಡಿಯಾ ಸ್ಕೀಮ್
  • ಸ್ಟಾರ್ಟಪ್ ಇಂಡಿಯಾ ಸ್ಕೀಮ್
  • ಪಿಎಂ ಮುದ್ರಾ ಯೋಜನೆ

ಇದನ್ನೂ ಓದಿ: ಅಚ್ಚರಿ ಹುಟ್ಟಿಸಿದ ಭಾರತದ ಆರ್ಥಿಕತೆ; 2ನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 8.2 ಬೆಳವಣಿಗೆ

ಇದಲ್ಲದೇ ಯುವಜನರನ್ನು ಉದ್ಯೋಗಕ್ಕೆ ಮತ್ತು ಸ್ವ ಉದ್ಯೋಗಕ್ಕೆ ಅಣಿಗೊಳಿಸಲು ಸರ್ಕಾರ ಹಲವು ರೀತಿಯ ಕೌಶಲ್ಯ ಅಭಿವೃದ್ಧಿ ಸ್ಕೀಮ್​ಗಳನ್ನು ನಡೆಸುತ್ತಿದೆ. ಎರಡು ವರ್ಷದಲ್ಲಿ ಮೂರೂವರೆ ಕೋಟಿ ರೂ ಉದ್ಯೋಗ ಸೃಷ್ಟಿಸುವ ಗುರಿಯೊಂದಿಗೆ ಉದ್ಯೋಗ ಆಧಾರಿತ ಭತ್ಯೆ ಯೋಜನೆಯೊಂದನ್ನು (ಇಎಲ್​ಐ) ಸರ್ಕಾರ ಜಾರಿಗೆ ತಂದಿದೆ. ಪಿಎಂ ವಿಕಸಿತ್ ಭಾರತ್ ರೋಜಗಾರ್ ಯೋಜನೆ ಎನ್ನಲಾಗುವ ಈ ಸ್ಕೀಮ್​​ಗೆ ಸರ್ಕಾರ 99,446 ಕೋಟಿ ರೂ ಮುಡಿಪಾಗಿಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ