AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2022: ಅರ್ಥಶಾಸ್ತ್ರಜ್ಞರ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ

ಕೇಂದ್ರ ಬಜೆಟ್ 2022ರ ಹಿನ್ನೆಲೆಯಲ್ಲಿ ಅರ್ಥಶಾಸ್ತ್ರಜ್ಞರಿಂದ ಅಭಿಪ್ರಾಯ ಸಂಗ್ರಹಿಸುವ ಸಲುವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮಾಲೋಚನೆ ನಡೆಸಿದ್ದಾರೆ.

Union Budget 2022: ಅರ್ಥಶಾಸ್ತ್ರಜ್ಞರ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 22, 2021 | 11:50 AM

Share

ಕೇಂದ್ರ ಸರ್ಕಾರದ ಮುಂಬರುವ ಸಾಮಾನ್ಯ ಬಜೆಟ್​ 2022-23ರ ಮಂಡನೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ (ಡಿಸೆಂಬರ್ 22, 2021) ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ.

“ಕೇಂದ್ರ ಹಣಕಾಸು ಸಚಿವೆ @nsitharaman ಅವರು ಮುಂಬರುವ ಸಾಮಾನ್ಯ ಬಜೆಟ್ 2022-23ಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ 22ನೇ ಡಿಸೆಂಬರ್ 2021ರಂದು, ಬುಧವಾರ ಮಧ್ಯಾಹ್ನ ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಗಳು ವರ್ಚುವಲ್ ಆಗಿ ನಡೆಯುತ್ತವೆ,” ಎಂದು ಹಣಕಾಸು ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ.

ಪ್ರತಿ ವರ್ಷ ಫೆಬ್ರವರಿ 1ರಂದು ಸಂಸತ್ತಿನಲ್ಲಿ ಸಾಮಾನ್ಯ ಬಜೆಟ್ ಅನ್ನು ಹಣಕಾಸು ಸಚಿವರು ಮಂಡಿಸುತ್ತಾರೆ. ಈ ಬಾರಿ ಕೇಂದ್ರ ಬಜೆಟ್​ ಬಗ್ಗೆ ಬಹಳ ಕುತೂಹಲ ಇದೆ. ಕೊರೊನಾ ರೂಪಾಂತರ ಒಮಿಕ್ರಾನ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆರ್ಥಿಕತೆಗೆ ಒತ್ತಡ ಬೀಳದಂತೆ ಕೆಲವು ಕ್ರಮಗಳನ್ನು ಘೋಷಿಸಬಹುದು ಎಂದು ಜನ ಸಾಮಾನ್ಯರು ನಿರೀಕ್ಷೆ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಕೇಂದ್ರ ಬಜೆಟ್​ ಮಂಡನೆಗೂ ಮುನ್ನ ವಿವಿಧ ಕ್ಷೇತ್ರದವರು, ಆರ್ಥಿಕ ತಜ್ಞರ ಜತೆಗೆ ಸಮಾಲೋಚನೆ ನಡೆಸುವುದು ಪರಿಪಾಠ. ಅದೇ ರೀತಿ ಈಗಿನ ಸಮಾಲೋಚನೆಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: Union Budget 2022: ವಿವಿಧ ಉದ್ಯಮಿಗಳ ಜತೆ ಪೂರ್ವ ಬಜೆಟ್​ ಸಂವಾದ ನಡೆಸಿದ ಪ್ರಧಾನಿ ಮೋದಿ; ಹೂಡಿಕೆ ಉತ್ತೇಜನಕ್ಕೆ ಸಿಇಒಗಳಿಂದ ಸಲಹೆ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?