AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2022: ಅರ್ಥಶಾಸ್ತ್ರಜ್ಞರ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ

ಕೇಂದ್ರ ಬಜೆಟ್ 2022ರ ಹಿನ್ನೆಲೆಯಲ್ಲಿ ಅರ್ಥಶಾಸ್ತ್ರಜ್ಞರಿಂದ ಅಭಿಪ್ರಾಯ ಸಂಗ್ರಹಿಸುವ ಸಲುವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಮಾಲೋಚನೆ ನಡೆಸಿದ್ದಾರೆ.

Union Budget 2022: ಅರ್ಥಶಾಸ್ತ್ರಜ್ಞರ ಜತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪೂರ್ವ ಸಭೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Updated By: Srinivas Mata|

Updated on: Dec 22, 2021 | 11:50 AM

Share

ಕೇಂದ್ರ ಸರ್ಕಾರದ ಮುಂಬರುವ ಸಾಮಾನ್ಯ ಬಜೆಟ್​ 2022-23ರ ಮಂಡನೆಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ (ಡಿಸೆಂಬರ್ 22, 2021) ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆ ನಡೆಸಲಿದ್ದಾರೆ.

“ಕೇಂದ್ರ ಹಣಕಾಸು ಸಚಿವೆ @nsitharaman ಅವರು ಮುಂಬರುವ ಸಾಮಾನ್ಯ ಬಜೆಟ್ 2022-23ಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ 22ನೇ ಡಿಸೆಂಬರ್ 2021ರಂದು, ಬುಧವಾರ ಮಧ್ಯಾಹ್ನ ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಬಜೆಟ್ ಪೂರ್ವ ಸಮಾಲೋಚನೆಗಳ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಗಳು ವರ್ಚುವಲ್ ಆಗಿ ನಡೆಯುತ್ತವೆ,” ಎಂದು ಹಣಕಾಸು ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದೆ.

ಪ್ರತಿ ವರ್ಷ ಫೆಬ್ರವರಿ 1ರಂದು ಸಂಸತ್ತಿನಲ್ಲಿ ಸಾಮಾನ್ಯ ಬಜೆಟ್ ಅನ್ನು ಹಣಕಾಸು ಸಚಿವರು ಮಂಡಿಸುತ್ತಾರೆ. ಈ ಬಾರಿ ಕೇಂದ್ರ ಬಜೆಟ್​ ಬಗ್ಗೆ ಬಹಳ ಕುತೂಹಲ ಇದೆ. ಕೊರೊನಾ ರೂಪಾಂತರ ಒಮಿಕ್ರಾನ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆರ್ಥಿಕತೆಗೆ ಒತ್ತಡ ಬೀಳದಂತೆ ಕೆಲವು ಕ್ರಮಗಳನ್ನು ಘೋಷಿಸಬಹುದು ಎಂದು ಜನ ಸಾಮಾನ್ಯರು ನಿರೀಕ್ಷೆ ಮಾಡುತ್ತಿದ್ದಾರೆ.

ಸಾಮಾನ್ಯವಾಗಿ ಕೇಂದ್ರ ಬಜೆಟ್​ ಮಂಡನೆಗೂ ಮುನ್ನ ವಿವಿಧ ಕ್ಷೇತ್ರದವರು, ಆರ್ಥಿಕ ತಜ್ಞರ ಜತೆಗೆ ಸಮಾಲೋಚನೆ ನಡೆಸುವುದು ಪರಿಪಾಠ. ಅದೇ ರೀತಿ ಈಗಿನ ಸಮಾಲೋಚನೆಯನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: Union Budget 2022: ವಿವಿಧ ಉದ್ಯಮಿಗಳ ಜತೆ ಪೂರ್ವ ಬಜೆಟ್​ ಸಂವಾದ ನಡೆಸಿದ ಪ್ರಧಾನಿ ಮೋದಿ; ಹೂಡಿಕೆ ಉತ್ತೇಜನಕ್ಕೆ ಸಿಇಒಗಳಿಂದ ಸಲಹೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್