AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ನಲ್ಲಿ ಗ್ರಾಮೀಣ ಪ್ರದೇಶಕ್ಕೆ ಸಿಗಲಿದೆ ಭರ್ಜರಿ ಕೊಡುಗೆ, ಉದ್ಯೋಗ-ವಸತಿಗೆ ಆದ್ಯತೆ; ವರದಿ

ಕೋವಿಡ್ ಸಾಂಕ್ರಾಮಿಕದ ಹೊಡೆತದಿಂದ ಹೊರಬಂದಿರುವ ಭಾರತದ ಗ್ರಾಮೀಣ ಪ್ರದೇಶಗಳು ಈಗ ಬೆಲೆ ಏರಿಕೆ, ಸೀಮಿತ ಕೃಷಿಯೇತರ ಉದ್ಯೋಗಾವಕಾಶಗಳ ಸಮಸ್ಯೆಗಳನ್ನೆದುರಿಸುತ್ತಿವೆ.

ಕೇಂದ್ರ ಬಜೆಟ್​ನಲ್ಲಿ ಗ್ರಾಮೀಣ ಪ್ರದೇಶಕ್ಕೆ ಸಿಗಲಿದೆ ಭರ್ಜರಿ ಕೊಡುಗೆ, ಉದ್ಯೋಗ-ವಸತಿಗೆ ಆದ್ಯತೆ; ವರದಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 04, 2023 | 2:08 PM

Share

ನವದೆಹಲಿ: ಮುಂದಿನ ಹಣಕಾಸು ವರ್ಷದಲ್ಲಿ ದೇಶದ ಗ್ರಾಮೀಣ ವೆಚ್ಚವನ್ನು (Rural Spending) ಕೇಂದ್ರ ಸರ್ಕಾರ ಶೇಕಡಾ 50ರಷ್ಟು, ಅಂದಾಜು 2 ಲಕ್ಷ ಕೋಟಿ ರೂ.ಗೆ ಹೆಚ್ಚಿಸುವ ಸಾಧ್ಯತೆ ಇದೆ. ಸಾರ್ವತ್ರಿಕ ಚುನಾವಣೆಗೂ ಹಿಂದಿ ವರ್ಷವಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಸೌಕರ್ಯ (Housing) ಕಲ್ಪಿಸುವುದು ಮತ್ತು ಉದ್ಯೋಗ ಸೃಷ್ಟಿಗೆ (Job Creation) ಸರ್ಕಾರ ಆದ್ಯತೆ ನೀಡಲಿದೆ ಎಂದು ಮೂಲಗಳು ಹೇಳಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು 2023-24ನೇ ಸಾಲಿನ ಬಜೆಟ್ (Budget) ಮಂಡನೆ ಮಾಡುವ ನಿರೀಕ್ಷೆ ಇದೆ. ಇದು 2024ರ ಲೋಕಸಭೆ ಚುನಾವಣೆಗೂ ಮೊದಲು ಸರ್ಕಾರ ಮಂಡಿಸುವ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಆಗಿರಲಿದೆ.

ಪ್ರಸಕ್ತ ಹಣಕಾಸು ವರ್ಷಕ್ಕೆ ಗ್ರಾಮೀಣ ವೆಚ್ಚಕ್ಕಾಗಿ 1,36,000 ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಆದರೆ, ಹಣಕಾಸು ವರ್ಷದ ಕೊನೆಯ ವೇಳೆಗೆ 1,60,000 ಕೋಟಿ ರೂ.ಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಗ್ರಾಮೀಣ ಅನುದಾನ ಹೆಚ್ಚಿಸಿದ್ದರೂ ಸಾಂಕ್ರಾಮಿಕದಿಂದ ಉಂಟಾದ ಒತ್ತಡ ಬಗೆಹರಿಸುವುದಕ್ಕಾಗಿಯೇ ಹೆಚ್ಚು ಖರ್ಚಾಗುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ: Income Tax: 8 ಲಕ್ಷ ರೂ.ಗಿಂತ ಕಡಿಮೆ ಆದಾಯಕ್ಕೆ ತೆರಿಗೆ ಬೇಡ; ಕೇಂದ್ರದ ಅಭಿಪ್ರಾಯ ಕೋರಿದ ಮದ್ರಾಸ್ ಹೈಕೋರ್ಟ್

ಇದನ್ನೂ ಓದಿ
Image
Google Layoffs: ಗೂಗಲ್ ಮಾತೃಸಂಸ್ಥೆ ಅಲ್ಫಾಬೆಟ್​ನಿಂದ 10,000 ಉದ್ಯೋಗಿಗಳ ವಜಾಕ್ಕೆ ಸಿದ್ಧತೆ; ವರದಿ
Image
ಡೆಬಿಟ್ ಕಾರ್ಡ್ ಇಲ್ಲದೆಯೂ ಫೋನ್​ ಪೇ ಆ್ಯಕ್ಟಿವೇಟ್ ಮಾಡಬಹುದು; ಹೇಗೆಂಬ ವಿವರ ಇಲ್ಲಿದೆ
Image
ಇನ್ನೂ ಆಧಾರ್, ಪ್ಯಾನ್ ಲಿಂಕ್ ಮಾಡಿಲ್ಲವೇ? ಬೇಗ ಮಾಡಿ; ಇಲ್ಲವಾದರೆ ನಿಷ್ಕ್ರಿಯವಾಗಲಿದೆ ಪ್ಯಾನ್ ಕಾರ್ಡ್
Image
Digital Wallets: ಡಿಜಿಟಲ್ ವಾಲೆಟ್​ನಲ್ಲಿ ಹೆಚ್ಚು ಹಣ ಇಡುವುದು ಉತ್ತಮಲ್ಲ; ತಜ್ಞರು ಹೀಗೆನ್ನಲು ಕಾರಣವಿದೆ

ಈ ವಿಚಾರವಾಗಿ ಹಣಕಾಸು ಸಚಿವಾಲಯವಾಗಲೀ ಗ್ರಾಮೀಣಾಭಿವೃದ್ಧಿ ಸಚಿವಾಲಯವಾಗಲೀ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದೂ ವರದಿ ಉಲ್ಲೇಖಿಸಿದೆ. ಕೋವಿಡ್ ಸಾಂಕ್ರಾಮಿಕದ ಹೊಡೆತದಿಂದ ಹೊರಬಂದಿರುವ ಭಾರತದ ಗ್ರಾಮೀಣ ಪ್ರದೇಶಗಳು ಈಗ ಬೆಲೆ ಏರಿಕೆ, ಸೀಮಿತ ಕೃಷಿಯೇತರ ಉದ್ಯೋಗಾವಕಾಶಗಳ ಸಮಸ್ಯೆಗಳನ್ನೆದುರಿಸುತ್ತಿದೆ. ಪರಿಣಾಮವಾಗಿ ಹೆಚ್ಚಿನವರು ಸರ್ಕಾರದ ಉದ್ಯೋಗ ಖಾತರಿ ಯೋಜನೆ ನರೇಗಾ ಸೇರಲು ಮುಂದಾಗುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಹೆಚ್ಚಿದ ಗ್ರಾಮೀಣ ನಿರುದ್ಯೋಗ

ದೇಶದಲ್ಲಿ ಗ್ರಾಮೀಣ ನಿರುದ್ಯೋಗ ಪ್ರಮಾಣ ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7ಕ್ಕಿಂತ ಹೆಚ್ಚಿರುವುದು ಭಾರತೀಯ ಆರ್ಥಿಕತೆಯ ನಿರ್ವಹಣಾ ಕೇಂದ್ರದ (ಸಿಎಂಐಇ) ದತ್ತಾಂಶಗಳಿಂದ ತಿಳಿದುಬಂದಿದೆ. ಅಕ್ಟೋಬರ್​ನಲ್ಲಿ ಗ್ರಾಮೀಣ ನಿರುದ್ಯೋಗ ಪ್ರಮಾಣ ಶೇಕಡಾ 8.04ರಷ್ಟಿತ್ತು ಎಂಬುದು ಸಿಎಂಐಇ ದತ್ತಾಂಶಗಳಿಂದ ಗೊತ್ತಾಗಿದೆ.

ಈ ವರ್ಷದ ಅನುದಾನ ಎಷ್ಟಿದೆ?

ಪ್ತಸಕ್ತ ಹಣಕಾಸು ವರ್ಷಕ್ಕೆ ಕೇಂದ್ರ ಸರ್ಕಾರ ಆರಂಭದಲ್ಲಿ ಉದ್ಯೋಗ ಖಾತರಿ ಯೋಜನೆಗಾಗಿ 73,000 ಕೋಟಿ ರೂ. ನಿಗದಿಪಡಿಸಿತ್ತು. 20,000 ಕೊಟಿ ರೂ. ವಸತಿ ಯೋಜನೆಗಾಗಿ ನಿಗದಿಪಡಿಸಿತ್ತು. 63,260 ಕೋಟಿ ರೂ. ಈಗಾಗಲೇ ಉದ್ಯೋಗ ಯೋಜನೆಗಾಗಿ ವ್ಯಯಿಸಿದೆ ಎಂಬುದು ಗ್ರಾಮೀಣಾಭಿವೃದ್ಧಿ ಸಚಿವಾಲಯದ ವೆಬ್​ಸೈಟ್​ನಲ್ಲಿರುವ ಮಾಹಿತಿಯಿಂದ ತಿಳಿದುಬಂದಿದೆ.

ಈ ಮಧ್ಯೆ, ಮುಂದಿನ ಹಣಕಾಸು ವರ್ಷದ ಮುಂಗಡ ಪತ್ರಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿದ್ಧತೆ ಆರಂಭಿಸಿದ್ದಾರೆ. ಸೋಮವಾರ ಅವರು ಕೈಗಾರಿಕೋದ್ಯಮಿಗಳು ಮತ್ತು ಹವಾಮಾನ ಬದಲಾವಣೆ ತಜ್ಞರ ಜತೆ ಸಭೆ ನಡೆಸಿದ್ದರು. ವಿವಿಧ ಕ್ಷೆತ್ರಗಳ ತಜ್ಞರ ಜತೆ ಮುಂದಿನ ದಿನಗಳಲ್ಲಿ ಸಮಾಲೋಚನೆ ನಡೆಸಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Wed, 23 November 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ