AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Income Tax: ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಟಿವಿ9 ಸಮೀಕ್ಷೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಇಲ್ಲಿದೆ

TV9 kannada Digital Poll; ಕೇಂದ್ರ ಬಜೆಟ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಮುಂಬರುವ ಬಜೆಟ್​ನಲ್ಲಿ ಮಿತಿ ಹೆಚ್ಚಿಸುವ ಸಾಧ್ಯತೆ ಇದೆಯೇ ಎಂದು ‘ಟಿವಿ9 ಕನ್ನಡ ಡಿಜಿಟಲ್’ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯನ್ನಿಡಲಾಗಿತ್ತು. ಇದಕ್ಕೆ ಅನೇಕ ಮಂದಿ ಕಮೆಂಟ್ ಮಾಡಿದ್ದಾರೆ.

Income Tax: ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಟಿವಿ9 ಸಮೀಕ್ಷೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 04, 2023 | 2:08 PM

Share

2023-24ನೇ ಸಾಲಿನ ಮುಂಗಡ ಪತ್ರಕ್ಕೆ (Union Budget 2023-24) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಈಗಾಗಲೇ ಪೂರ್ವ ತಯಾರಿ ಆರಂಭಿಸಿದ್ದು, ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರ ಜತೆ ಮೊದಲ ಸುತ್ತಿನ ಸಭೆ ನಡೆಸಿದ್ದಾರೆ. ಜತೆಗೆ ಕೈಗಾರಿಕೋದ್ಯಮಿಗಳ ಜತೆಗೂ ಸಭೆಗಳನ್ನು ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಆದಾಯ ತೆರಿಗೆ ಮಿತಿಯನ್ನು (Income Tax Limit) ಹೆಚ್ಚಿಸಬೇಕು ಎಂಬ ಆಗ್ರಹವೂ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವವರಿಂದ ಆದಾಯ ತೆರಿಗೆ ಸಂಗ್ರಹಿಸುತ್ತಿರುವುದನ್ನು ಪ್ರಶ್ನಿಸಿ ಡಿಎಂಕೆ ನಾಯಕ ಕುನ್ನೂರ್ ಶ್ರೀನಿವಾಸನ್ ಎಂಬವರು ಮದ್ರಾಸ್ ಹೈಕೋರ್ಟ್​ನ ಮದುರೈ ಪೀಠಕ್ಕೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಮುಂಬರುವ ಬಜೆಟ್​ನಲ್ಲಿ ಮಿತಿ ಹೆಚ್ಚಿಸುವ ಸಾಧ್ಯತೆ ಇದೆಯೇ ಎಂದು ‘ಟಿವಿ9 ಕನ್ನಡ ಡಿಜಿಟಲ್’ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯನ್ನಿಡಲಾಗಿತ್ತು. ಇದಕ್ಕೆ ಅನೇಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Income Tax: 8 ಲಕ್ಷ ರೂ.ಗಿಂತ ಕಡಿಮೆ ಆದಾಯಕ್ಕೆ ತೆರಿಗೆ ಬೇಡ; ಕೇಂದ್ರದ ಅಭಿಪ್ರಾಯ ಕೋರಿದ ಮದ್ರಾಸ್ ಹೈಕೋರ್ಟ್

‘ಟಿವಿ9 ಕನ್ನಡ ಡಿಜಿಟಲ್’ನ ಫೇಸ್​ಬುಕ್, ಇನ್​ಸ್ಟಾಗ್ರಾಂ, ಟ್ವಿಟರ್, ಯೂಟ್ಯೂಬ್ ತಾಣಗಳಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರ ಪೈಕಿ ಹೆಚ್ಚಿನವರು ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕು ಎಂಬ ಉತ್ತರ ನೀಡಿದ್ದಾರೆ. ಅದೇರೀತಿ, ಈ ಬೇಡಿಕೆಯನ್ನು ಸರ್ಕಾರ ಬಜೆಟ್​ನಲ್ಲಿ ಈಡೇರಿಸುವ ಸಾಧ್ಯತೆ ಕಡಿಮೆ ಎಂದೂ ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು, ಸರ್ಕಾರದ ತೆರಿಗೆ ನೀತಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಮೀಕ್ಷೆಯಲ್ಲಿ ಭಾಗವಹಿಸಿದ ಮಹಿಳೆಯರು ಮತ್ತು ಪುರುಷರು  

ಸಾಮಾಜಿಕ ಜಾಲತಾಣಗಳು ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿ ಎಂದವರು ಬಜೆಟ್​ನಲ್ಲಿ ಬೇಡಿಕೆ ಈಡೇರಿಕೆ ಸಾಧ್ಯತೆ ಇದೆ ಎಂದವರು
ಫೇಸ್ಬುಕ್ : ಪುರುಷರು – 99 %

ಮಹಿಳೆಯರು – 98 %

ಪುರುಷರು– 0 %

ಮಹಿಳೆಯರು – 0 %

ಇನ್ಸ್ಟಾಗ್ರಾಮ್ ಪುರುಷರು – 99 %

ಮಹಿಳೆಯರು -100 %

ಪುರುಷರು– 0 %

ಮಹಿಳೆಯರು – 0 %

ಟ್ವಿಟರ್ : ಪುರುಷರು– 90 %

ಮಹಿಳೆಯರು – 95 %

ಪುರುಷರು– 0 %

ಮಹಿಳೆಯರು – 0 %

ಯೂಟ್ಯಬ್ ಪುರುಷರು– 100 %

ಮಹಿಳೆಯರು -100 %

ಪುರುಷರು– 0 %

ಮಹಿಳೆಯರು – 0 %

ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ

  • ನಿಜವಾಗಿಯೂ ಕೇಂದ್ರ ಸರ್ಕಾರ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸಬೇಕು ಎಂದು ಸಂಜಯ್ ಡಿ.ಜೆ. ಎಂಬವರು ಉತ್ತರಿಸಿದ್ದರೆ, ಆದಾಯ ತೆರಿಗೆ ಮಿತಿಯನ್ನು 10 ಲಕ್ಷ ರೂ.ಗೆ ನಿಗದಿಪಡಿಸಬೇಕು ಎಂದು ಪ್ರತಾಪ್ ದೇವಾಂಗಂ ಎಂಬವರು ಉತ್ತರಿಸಿದ್ದಾರೆ.
  • ಸದ್ಯದ ಹಣದುಬ್ಬರ ಪರಿಸ್ಥಿತಿಯನ್ನು ಗಮನಿಸಿದರೆ ಆದಾಯ ತೆರಿಗೆ ಮಿತಿಯನ್ನು 10 ಲಕ್ಷ ರೂ.ಗೆ ನಿಗದಿಪಡಿಸಬೇಕು ಎಂದು ಆರೀಸ್ ಎಂಬವರು ಉತ್ತರಿಸಿದ್ದಾರೆ.
  • ಆದಾಯ ತೆರಿಗೆ ಮಿತಿಯನ್ನು 5ರಿಂದ 8 ಲಕ್ಷ ರೂ.ಗೆ ಹೆಚ್ಚಿಸಬೇಕು. ತೆರಿಗೆಯ ಪ್ರಮಾಣ ಎಲ್ಲರಿಗೂ ಒಂದೇ ರೀತಿ ಇರಬೇಕು ಎಂದು ದಶಕಂಠ ಹಿರೇಮಠ ಎಂಬವರು ಉತ್ತರಿಸಿದ್ದಾರೆ.
  • ಆದಾಯ ತೆರಿಗೆ ಮಿತಿಯನ್ನು 8ರಿಂದ 10 ಲಕ್ಷ ರೂ.ಗೆ ನಿಗದಿಪಡಿಸಬೇಕು ಎಂದು ಸಂತೋಷ್ ಕುಮಾರ್ ಸಂತು ಎಂಬವರು ಉತ್ತರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 28 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ