AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ಬಜೆಟ್ ಪದ ಬಳಕೆ ಆರಂಭವಾಗಿದ್ದು ಹೇಗೆ? ಆಯವ್ಯಯದ ಬಗ್ಗೆ ಇಲ್ಲಿದೆ ಆಸಕ್ತಿದಾಯಕ ಮಾಹಿತಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಸದ್ಯ ಎಲ್ಲೆಡೆ ಬಜೆಟ್‌ ಬಗ್ಗೆ ಚರ್ಚೆಯಾಗುತ್ತಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಕಾರಣ, ಪ್ರತಿಯೊಂದು ವರ್ಗವೂ ಹಲವು ನಿರೀಕ್ಷೆಗಳನ್ನು ಹೊಂದಿವೆ. ಈ ಬಜೆಟ್ ಎಂಬ ಪದ ಎಲ್ಲಿಂದ ಹುಟ್ಟುಕೊಂಡಿತು? ಬಜೆಟ್ ಪದದ ಉಗಮದ ಬಗ್ಗೆ ಆಸಕ್ತಿದಾಯಕ ಮಾಹಿತಿ ಇಲ್ಲಿದೆ.

Union Budget 2024: ಬಜೆಟ್ ಪದ ಬಳಕೆ ಆರಂಭವಾಗಿದ್ದು ಹೇಗೆ? ಆಯವ್ಯಯದ ಬಗ್ಗೆ ಇಲ್ಲಿದೆ ಆಸಕ್ತಿದಾಯಕ ಮಾಹಿತಿ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:Jan 26, 2024 | 3:00 PM

Share

ನವದೆಹಲಿ, ಜನವರಿ 26: ಫೆಬ್ರವರಿ 1 ಹತ್ತಿರವಾಗುತ್ತಿದ್ದಂತೆ, ಬಜೆಟ್‌ಗೆ (Union Budget 2024) ಸಂಬಂಧಿಸಿದ ಚರ್ಚೆಗಳು ಹೆಚ್ಚಾಗಿವೆ. ಮಧ್ಯಂತರ ಬಜೆಟ್​ನಲ್ಲಿ ಮೋದಿ ಸರ್ಕಾರ ಜನಸಾಮಾನ್ಯರಿಗೆ ಏನೆಲ್ಲ ಘೋಷಣೆಗಳನ್ನು ಮಾಡಬಹುದು ಎಂಬ ಕುತೂಹಲ ಹೆಚ್ಚಾಗಿದೆ. ಕಳೆದ ಕೆಲವು ವರ್ಷಗಳಿಂದ ದೇಶದ ಬಜೆಟ್ ಮಂಡನೆ ಫೆಬ್ರವರಿ 1ರಂದು ಮಾಡಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಈ ವರ್ಷ ಲೋಕಸಭೆ ಚುನಾವಣೆ ಇರುವುದರಿಂದ ಜನಸಾಮಾನ್ಯರು ಸೇರಿದಂತೆ ಪ್ರತಿಯೊಂದು ವರ್ಗವೂ ಈ ಬಜೆಟ್‌ನ ಬಗ್ಗೆ ಹೆಚ್ಚಿನ ನಿರೀಕ್ಷೆಯಲ್ಲಿದೆ. ಅಧಿಕಾರಕ್ಕೆ ಬರುವ ಹೊಸ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ. ಆದರೆ ಬಜೆಟ್ ಎಂಬ ಪದ ಎಲ್ಲಿಂದ ಬಂತು, ಅದಕ್ಕೆ ಆ ಹೆಸರು ಹೇಗೆ ಬಂತು ಗೊತ್ತಾ?

ಬಜೆಟ್ ಎಂಬ ಹೆಸರು ಹೇಗೆ ಬಂತು?

ಬಜೆಟ್ ಎಂಬ ಪದವು ಫ್ರೆಂಚ್ ಪದ ‘ಬೌಜ್​’ನಿಂದ ಬಂದಿದೆ. ಬೌಜ್ ಎಂದರೆ ಚಿಕ್ಕ ಚೀಲ. ಇದರ ಹಿಂದೆ ಒಂದು ಕುತೂಹಲಕಾರಿ ಕಥೆಯಿದೆ. 1733 ರಲ್ಲಿ, ಆಗ ಇಂಗ್ಲೆಂಡಿನ ಹಣಕಾಸು ಮಂತ್ರಿಯಾಗಿದ್ದ ಸರ್ ರಾಬರ್ಟ್ ವಾಲ್ಪೋಲ್ ಅವರು ಸಣ್ಣ ಚೀಲದಲ್ಲಿ ಬಜೆಟ್ ದಾಖಲೆಗಳೊಂದಿಗೆ ಸಂಸತ್ತಿಗೆ ಬಂದರು. ಈ ಬ್ಯಾಗ್ ಮತ್ತು ಅದರಲ್ಲಿ ಏನಿದೆ ಎಂದು ಕೆಲವರು ಅವರನ್ನು ಕೇಳಿದಾಗ, ಎಲ್ಲರಿಗೂ ಬಜೆಟ್ ಇದೆ ಎಂದು ಹೇಳಿದರು. ಅಂದಿನಿಂದ, ಬಜೆಟ್ ಎಂಬ ಪದವು ಜನಪ್ರಿಯವಾಗಿದೆ.

ಸಂವಿಧಾನದಲ್ಲಿ ಬಜೆಟ್ ಎಂಬ ಪದವೇ ಇಲ್ಲ!

ನಿಮಗೆ ಆಶ್ಚರ್ಯವಾಗಬಹುದು, ಆದರೆ ಭಾರತದ ಸಂವಿಧಾನದಲ್ಲಿ ಬಜೆಟ್ ಎಂಬ ಪದವನ್ನು ಬಳಸಲಾಗಿಲ್ಲ. ಸಂವಿಧಾನದ 112 ನೇ ವಿಧಿಯಲ್ಲಿ ‘ವಾರ್ಷಿಕ ಹಣಕಾಸು ಹೇಳಿಕೆ’ ಎಂಬ ಪದವನ್ನು ಬಳಸಲಾಗಿದೆ. ಈ ಹೇಳಿಕೆಯಲ್ಲಿ, ಕೇಂದ್ರ ಸರ್ಕಾರವು ಇಡೀ ವರ್ಷದ ಸರ್ಕಾರದ ಅಂದಾಜು ವೆಚ್ಚ ಮತ್ತು ಆದಾಯದ ಬಗ್ಗೆ ವಿವರವಾದ ಮಾಹಿತಿಯನ್ನು ಪ್ರಸ್ತುತಪಡಿಸುತ್ತದೆ.

ಯೋಜನೆಗಳ ಲೆಕ್ಕಪತ್ರ ನಿರ್ವಹಣೆ

ಸಾಮಾನ್ಯ ಬಜೆಟ್ ಸರ್ಕಾರದ ಖರ್ಚು ಮತ್ತು ಆದಾಯವನ್ನು ಲೆಕ್ಕಹಾಕುತ್ತದೆ. ಪ್ರತಿ ತಿಂಗಳ ಲೆಕ್ಕಾಚಾರದಿಂದ ಅದರ ಸಗಟು ಅಂದಾಜು ಬರುತ್ತದೆ. ಇಷ್ಟು ವರ್ಷಗಳ ಅನುಭವದಿಂದ ಸರ್ಕಾರ ಈ ಲೆಕ್ಕಾಚಾರಗಳನ್ನು ಜನರ ಮುಂದಿಡುತ್ತದೆ. ಮುಂಬರುವ ಆರ್ಥಿಕ ವರ್ಷಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟ ಬಗ್ಗೆ ಘೋಷಣೆ ಮಾಡಲಾಗುತ್ತದೆ. ಬಜೆಟ್​ನಲ್ಲಿ ಹಣದ ಒಳಹರಿವು ಮತ್ತು ಹೊರಹರಿವು ಸಮನ್ವಯಗೊಳಿಸಲು ಪ್ರಯತ್ನಿಸಲಾಗುತ್ತದೆ.

ಚುನಾವಣಾ ವರ್ಷಗಳಲ್ಲಿ ಎರಡು ಬಾರಿ ಬಜೆಟ್

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎರಡು ಬಾರಿ ಬಜೆಟ್ ಮಂಡಿಸಲಾಗುತ್ತದೆ. ಆಡಳಿತಾತ್ಮಕ ವೆಚ್ಚಗಳನ್ನು ಒದಗಿಸಲು ಆಡಳಿತ ಪಕ್ಷವು ಮಧ್ಯಂತರ ಬಜೆಟ್ ಅನ್ನು ಮಂಡಿಸುತ್ತದೆ. ಹೊಸ ಸರ್ಕಾರ ಬಂದರೆ ಯೋಜನೆಗಳು, ಗುರಿಗಳು ಮತ್ತು ನೀತಿಗಳನ್ನು ಬದಲಾಯಿಸುತ್ತದೆ. ಹೀಗಾಗಿ ಚುನಾವಣಾ ವರ್ಷದ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಲಾಗುತ್ತದೆ. ನಂತರ ಬಂದ ಹೊಸ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸುತ್ತದೆ.

ಇದನ್ನೂ ಓದಿ: ಬಜೆಟ್ ಮಂಡನೆಗೆ ಮುನ್ನ ಹಲ್ವಾ ತಿನಿಸುವ ಕಾರ್ಯಕ್ರಮ ಯಾಕೆ ನಡೆಯುತ್ತದೆ? ಏನಿದರ ವಿಶೇಷತೆ?

ಮಧ್ಯಂತರ ಬಜೆಟ್​ನಲ್ಲಿ ಏನೇನಿರುತ್ತವೆ?

ಮಧ್ಯಂತರ ಬಜೆಟ್‌ನಲ್ಲಿ ಹೊಸ ಸರ್ಕಾರ ರಚನೆಯಾಗುವವರೆಗಿನ ಆಯ ವ್ಯಯವನ್ನು ಒದಗಿಸಲಾಗುತ್ತದೆ. ಇದರಲ್ಲಿ ಹಣ ಎಲ್ಲಿ ಮತ್ತು ಹೇಗೆ ಬರುತ್ತದೆ ಮತ್ತು ಎಲ್ಲಿ ಮತ್ತು ಹೇಗೆ ಹಣವನ್ನು ಖರ್ಚು ಮಾಡಲಾಗುವುದು ಎಂಬ ಬ್ಯಾಲೆನ್ಸ್ ಶೀಟ್ ಅನ್ನು ಪ್ರಸ್ತುತಪಡಿಸಲಾಗುತ್ತದೆ. ಏಪ್ರಿಲ್‌ನಲ್ಲಿ ಹೊಸ ಹಣಕಾಸು ವರ್ಷ ಆರಂಭವಾಗುತ್ತಿದ್ದಂತೆಯೇ ಮಧ್ಯಂತರ ಬಜೆಟ್‌ನಲ್ಲಿ ಮಂಡಿಸಿದ ಅಂಶಗಳು ಜಾರಿಗೆ ಬರುತ್ತವೆ. ಈ ಬಜೆಟ್​​ ಹೊಸ ಸರ್ಕಾರ ರಚನೆಯಾಗುವವರೆಗೆ ಹಾಲಿ ಸರ್ಕಾರಕ್ಕೆ ಖರ್ಚು ಮಾಡಲು ಅವಕಾಶ ಕಲ್ಪಿಸುತ್ತದೆ.

ಇನ್ನಷ್ಟು ಬಜೆಟ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Fri, 26 January 24

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!