AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2024: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ

Pradhan Mantri Awas Yojana: ಪಿಎಂ ಆವಾಸ್ ಯೋಜನೆಯಡಿ ದೇಶದಲ್ಲಿ 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದ್ದು, ಅದನ್ನು 5 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಹೇಳಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದರೇನು ಮತ್ತು ಅದರ ಅಡಿಯಲ್ಲಿ ಮನೆ ನಿರ್ಮಿಸಲು ಸರ್ಕಾರದಿಂದ ಯಾರು ಆರ್ಥಿಕ ಸಹಾಯವನ್ನು ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.

Union Budget 2024: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ
Ganapathi Sharma
|

Updated on: Feb 01, 2024 | 12:24 PM

Share

ನವದೆಹಲಿ, ಫೆಬ್ರವರಿ 1: ಪಿಎಂ ಆವಾಸ್ ಯೋಜನೆಯಡಿ (PMAY) 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದ್ದು, ಅದನ್ನು 5 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದರು. ಸಂಸತ್​ನಲ್ಲಿ ಮಧ್ಯಂತರ ಬಜೆಟ್ ಮಂಡನೆ (Union Budget 2024) ವೇಳೆ ಅವರು, ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಸಾಮಾನ್ಯ ಜನರು ಸರ್ಕಾರದ ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು. ಕುಟುಂಬಕ್ಕೊಂದು ಮನೆ ಎಂಬ ಕನಸನ್ನು ಸರಕಾರ ನನಸು ಮಾಡುತ್ತಿದೆ. ಸರ್ಕಾರವು ಪ್ರಸ್ತುತ 2 ಕೋಟಿ ಹೊಸ ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದೆ ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದರೇನು ಎಂದು? ಈ ಯೀಜನೆ ಅಡಿಯಲ್ಲಿ ಮನೆ ನಿರ್ಮಿಸಲು ಯಾರೆಲ್ಲ ಸರ್ಕಾರದಿಂದ ಆರ್ಥಿಕ ಸಹಾಯವನ್ನು ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಲಕ್ಷಾಂತರ ಜನರಿಗೆ ಸ್ವಂತ ಮನೆ ನಿರ್ಮಿಸಲು ಸಹಾಯ ಮಾಡುವ ಯೋಜನೆಯಾಗಿದೆ. ವಾಸ್ತವವಾಗಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನವು ಬಡವರಿಗೆ ಮಾತ್ರ ಲಭ್ಯವಿರುತ್ತದೆ. ಆದರೆ ಈಗ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದವರನ್ನು ಸಹ ಅದರ ವ್ಯಾಪ್ತಿಯಲ್ಲಿ ತರಲಾಗಿದೆ. ಆದಾಯದ ಆಧಾರದ ಮೇಲೆ ಹಲವು ವರ್ಗಗಳಿವೆ ಮತ್ತು ಸಾಲದ ಮೊತ್ತವನ್ನು ಆ ವರ್ಗಗಳ ಆಧಾರದ ಮೇಲೆ ಮಾತ್ರ ನಿರ್ಧರಿಸಲಾಗುತ್ತದೆ. ಆರಂಭದಲ್ಲಿ ಯೋಜನೆ ಅಡಿಯಲ್ಲಿ ಗೃಹ ಸಾಲದ ಮೊತ್ತಕ್ಕೆ 3 ರಿಂದ 6 ಲಕ್ಷ ರೂ. ಸಬ್ಸಿಡಿ ಲಭ್ಯವಿತ್ತು. ಈಗ ಅದನ್ನು 18 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬಜೆಟ್​ಗೂ ಮುನ್ನ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ

ಶೇ 46 ಕ್ಕಿಂತ ಹೆಚ್ಚು ಮನೆ ಖರೀದಿದಾರರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಬಗ್ಗೆ ತಿಳಿದಿಲ್ಲ ಎಂಬುದು ಇತ್ತೀಚಿನ ಸಮೀಕ್ಷೆಯೊಂದರಲ್ಲಿ ಬಹಿರಂಗಪಡಿಸಿದೆ. ‘ಬೇಸಿಕ್ ಹೋಮ್ ಲೋನ್’ ನಡೆಸಿದ ಈ ಸಮೀಕ್ಷೆಯಲ್ಲಿ ಸಮೀಕ್ಷೆಗೆ ಒಳಗಾದ ಶೇಕಡಾ 17 ರಷ್ಟು ಜನರು ಯೋಜನೆಯಡಿಯಲ್ಲಿ ಗರಿಷ್ಠ 2.67 ಲಕ್ಷ ರೂ.ಗಳ ಸಬ್ಸಿಡಿ ಲಭ್ಯವಿದೆ ಎಂದು ತಿಳಿದುಕೊಂಡಿದ್ದಾರೆ ಎಂದು ಬಹಿರಂಗಪಡಿಸಿತ್ತು.

ಇತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ