AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ

Union Budget 2026-27 reflects India's continued economic progress, says Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ 20247ರ ವಿಕಸಿತ ಭಾರತ ನಿರ್ಮಾಣದ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ 2026-27ರ ಬಜೆಟ್ ಅನ್ನು ರೂಪಿಸಲಾಗಿದೆ. ಸರ್ಕಾರದ ನೀತಿಗಳ ಮುಂದುವರಿಕೆಯನ್ನು ಬಜೆಟ್​ನಲ್ಲಿ ಕಾಣಬಹುದು ಎಂದು ಕೇಂದ್ರ ನವೀಕರಣ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೈದರಾಬಾದ್​ನಲ್ಲಿ ಶುಕ್ರವಾರ (ಫೆ. 6) ಅಭಿಪ್ರಾಯಪಟ್ಟಿದ್ದಾರೆ.

ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 06, 2026 | 6:53 PM

Share

ಹೈದರಾಬಾದ್, ಫೆಬ್ರುವರಿ 6: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (2026-27) ಮುಂದಿನ 25 ವರ್ಷಕ್ಕೆ ದೇಶದ ಬೆಳವಣಿಗೆಗೆ ಬುನಾದಿ ಹಾಕುವ ಕೆಲಸ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅಭಿಪ್ರಾಯಪಟ್ಟಿದ್ದಾರೆ. ನಾಂಪಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜೋಶಿ, 2047ರ ವಿಕಸಿತ ಭಾರತದ ಆಶಯ ಈಡೇರಿಸಲು ಬಜೆಟ್ ಕೆಲಸ ಮಾಡುತ್ತದೆ ಎಂದಿದ್ದಾರೆ.

‘2013ರಲ್ಲಿ ವಿಶ್ವದ ಐದು ಶಿಥಿಲ ಆರ್ಥಿಕತೆಗಳಲ್ಲಿ ಭಾರತವೂ ಒಂದೆನಿಸಿತ್ತು. ಅಭಿವೃದ್ಧಿಶೀಲ ಮಾರುಕಟ್ಟೆಗಳು ತಮ್ಮ ಬೆಳವಣಿಗೆಗೆ ವಿದೇಶೀ ಬಂಡವಾಳದ ಮೇಲೆ ಅವಲಂಬಿತವಾಗಿದ್ದವು. ಆ ಪರಿಸ್ಥಿತಿಯಿಂದ ಈಗ 2047ಕ್ಕೆ ವಿಕಸಿತ ಭಾರತದ ಆಶಯದತ್ತ ಸಾಗುತ್ತಿದ್ದೇವೆ’ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

‘ವಿಶ್ವ ಶ್ರೇಣಿಯಲ್ಲಿ ಬದಲಾವಣೆ ಆಗುತ್ತದೆ. ಭಾರತವು ಈ ಬದಲಾವಣೆಯಲ್ಲಿ ಮುಂಚೂಣಿಯಲ್ಲಿರುತ್ತದೆ. ನಾವು ನಾಲ್ಕನೇ ಅತಿದೊಡ್ಡ ಹಾಗೂ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಹೊಂದಿದ್ದೇವೆ. ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದ್​ದೇವೆ’ ಎಂದು ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕ್ಷೇತ್ರಕ್ಕೆ ತೊಂದರೆ ಇಲ್ಲ, ರೈತರು ಸೇಫ್; ಭಾರತ-ಅಮೆರಿಕ ಟ್ರೇಡ್ ಡೀಲ್​ನಲ್ಲಿ ಏನೇನಿದೆ?

ಎಐ ಕ್ಷೇತ್ರದ ಮಹತ್ವವನು ಒತ್ತಿ ಹೇಳಿದ ಗ್ರಾಹಕ ವ್ಯವಹಾರಗಳ ಸಚಿವರಾದ ಪ್ರಲ್ಹಾದ್ ಜೋಶಿ, ಎಐ ಕ್ರಾಂತಿಯನ್ನು ವಿದ್ಯುತ್ ಮತ್ತು ಇಂಟರ್ನೆಟ್ ಕ್ರಾಂತಿಗೆ ಹೋಲಿಕೆ ಮಾಡಿದ್ದಾರೆ. ಹಾಗೆಯೇ, ತಮ್ಮ ಸರ್ಕಾರವು ಎಐ ಮಿಷನ್​ಗೆ ನೀಡಿರುವ ಮಹತ್ವವನ್ನೂ ಎತ್ತಿ ತೋರಿಸಿದ್ದಾರೆ.

ಕ್ರಿಟಿಕಲ್ ಮಿನರಲ್ ಅಥವಾ ಮುಖ್ಯ ಖನಿಜಗಳು ಸೆಮಿಕಂಡಕ್ಟರ್, ಎಐ, ನವೀಕರಣ ಇಂಧನ, ಹಸಿರು ಇಂಧನದಂತಹ ಪ್ರಮುಖ ಸೆಕ್ಟರ್​ಗಳಿಗೆ ಬಹಳ ಮಹತ್ವದ್ದಾಗಿದ್ದು, ಸರ್ಕಾರ ಕ್ರಿಟಿಕಲ್ ಮಿನರಲ್ಸ್ ಮಿಷನ್ ಜಾರಿಗೆ ತಂದಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

‘ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿ, ಲಾಜಿಸ್ಟಿಕ್ಸ್ ಕ್ಷಮತೆ, ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್, ಎಐ, ನವೀಕರಣ ಇಂಧನ, ತಂತ್ರಜ್ಞಾನ ಪ್ರಭಾವಿತ ಬೆಳವಣಿಗೆಗೆ ಒತ್ತು ಕೊಡುತ್ತಾ ಭಾರತವು ಆರ್ಥಿಕ ಪ್ರಗತಿ ಸಾಧಿಸುತ್ತಿರುವುದನ್ನು ಈ ಬಾರಿಯ ಬಜೆಟ್​ನಲ್ಲಿ ಕಾಣಬಹುದು. ರಾಜ್ಯಗಳಿಗೆ ಸಾಕಷ್ಟು ಫಂಡಿಂಗ್ ಕೊಡಲಾಗಿದ್ದು, ಈ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲು ರಾಜ್ಯಗಳನ್ನು ಶಕ್ತಗೊಳಿಸಲಾಗಿದೆ’ ಎಂದು ಹೊಸ ಮತ್ತು ನವೀಕರಣ ಇಂಧನ ಸಚಿವರಾದ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಣಿಜ್ಯಾತ್ಮಕವಾಗಿ ಲಾಭವಿದ್ದರೆ ವೆನೆಜುವೆಲಾದಿಂದಲೂ ತೈಲ ಪಡೆಯುತ್ತೇವೆ: ಭಾರತ ಸರ್ಕಾರದ ಹೇಳಿಕೆ

ಪ್ರಲ್ಹಾದ್ ಜೋಶಿ ಅವರು ನಾಂಪಲ್ಲಿಯಲ್ಲಿ ಉದ್ಯಮ ಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ, ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಜೋಶಿ, 2047ರ ವಿಕಸಿತ ಭಾರತದ ದೂರಗಾಮಿ ಗುರಿಯ ಮುಂದುವರಿಕೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಲ್ಹಾದ್ ಜೋಶಿ ಅವರ ಎಕ್ಸ್ ಪೋಸ್ಟ್​ಗಳು

ಸರಳ ವಿಧಾನಗಳು, ಕಾನೂನು, ನೀತಿ ಸುಧಾರಣೆಗಳ ವ್ಯಾಪಾರ ವಾತಾವರಣ ಸುಲಭಗೊಳಿಸಲಾಗಿದೆ. ವ್ಯಾಪಾರಿಗಳು, ಎಂಎಸ್​ಎಂಇಗಳು, ಉದ್ಯಮಗಳಿಗೆ ಶಕ್ತಿ ತುಂಬಲಾಗಿದೆ ಎಂದು ಪ್ರಲ್ಹಾದ್ ಜೋಶಿ ವಿಶ್ಲೇಷಿಸಿದ್ದಾರೆ.

ಪ್ರಲ್ಹಾದ್ ಜೋಷಿ ಮಾತನಾಡಿರುವ ವಿಡಿಯೋ

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ರಸ್ತೆಗಳು ಮಾತ್ರವಲ್ಲ,ಮನಷ್ಯರು ತಿರುಗಾಡುವ ಫುಟ್​​​ಬಾತ್​​ಗಳು ಸರಿ ಇಲ್ಲ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಹಿಂದೂ ಧರ್ಮಕ್ಕೆ ಅಪಮಾನವಾಗೋ ರೀತಿ ಸ್ಟೇಟಸ್​​ ಇಟ್ಟಿದ್ದ ಯುವಕನ ಬಂಧನ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ವಿದ್ಯಾರ್ಥಿ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಪಾಕಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಯತೀಂದ್ರ ಕಾಂಗ್ರೆಸ್ ಪಕ್ಷದ ಹೈಕಮಾಂಡ್: ಡಿಕೆ ಶಿವಕುಮಾರ್ ಮಾತಿನ ಮರ್ಮಾವೇನು?
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
ಸತೀಶ್ ಜಾರಕಿಹೊಳಿಯನ್ನು ‘ಕ್ಲೀನ್ ಬೋಲ್ಡ್’ ಮಾಡಿದ ಲಕ್ಷ್ಮೀ ಹೆಬ್ಬಾಳಕರ್..!
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
3 ಭಾಷೆಯಲ್ಲಿ ತಾನೇ ಬರೆದ ಗೀತೆ ಹಾಡಿದ ಬಾಲಕಿ; ಪ್ರಧಾನಿ ಮೋದಿ ಮೆಚ್ಚುಗೆ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಕಳೆದು ಹೋದ ಸಮಯದ ಬಗ್ಗೆ ಚಿಂತೆ ಬೇಡ, ಭವಿಷ್ಯದ ಬಗ್ಗೆ ಗಮನಕೊಡಿ: ಮೋದಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ
ಇಂದು ನಾನು ಕಷ್ಟಪಟ್ಟು 'ವಿಕಸಿತ ಭಾರತ'ದ ಬುನಾದಿ ಹಾಕುತ್ತಿರುವುದು ನಿಮಗಾಗಿ
ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ
ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಹಾಡಹಗಲೇ ನಡೆಯಿತು ಕೊಲೆ