AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಗುರಿ; ಬಜೆಟ್​ನಲ್ಲಿ ಈ ಉದ್ದಿಮೆಗಳಿಗೆ ಸಿಗಲಿದೆ ಪುಷ್ಟಿ

Union Budget 2026, labour intensive sector to get boost: ಫೆಬ್ರುವರಿ 1ರಂದು ಮಂಡನೆಯಾಗುವ ಕೇಂದ್ರ ಮುಂಗಡ ಪತ್ರದಲ್ಲಿ ಉದ್ಯೋಗ ಸೃಷ್ಟಿಗೆ ಒತ್ತು ಕೊಡುವ ನಿರೀಕ್ಷೆ ಇದೆ. ಎಂಎಸ್​ಎಂಇಗಳಿಂದ ಅತಿಹೆಚ್ಚು ಉದ್ಯೋಗಸೃಷ್ಟಿಯಾಗಬಹುದಾದ್ದರಿಂದ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಬಜೆಟ್ ಸಪೋರ್ಟ್ ಹೆಚ್ಚು ಸಿಗಬಹುದು.

ಸರ್ಕಾರಕ್ಕೆ ಉದ್ಯೋಗ ಸೃಷ್ಟಿ ಗುರಿ; ಬಜೆಟ್​ನಲ್ಲಿ ಈ ಉದ್ದಿಮೆಗಳಿಗೆ ಸಿಗಲಿದೆ ಪುಷ್ಟಿ
ಕಾರ್ಮಿಕರುImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 28, 2026 | 6:46 PM

Share

ನವದೆಹಲಿ, ಜನವರಿ 28: ಈ ಬಾರಿಯ ಬಜೆಟ್​ನಲ್ಲಿ (Union Budget) ಮ್ಯಾನುಫ್ಯಾಕ್ಚರಿಂಗ್ ಎಕನಾಮಿ ಸುದೃಢಗೊಳಿಸಲು ಪ್ರಯತ್ನಿಸುವ ನಿರೀಕ್ಷೆ ಇದೆ. ಉದ್ಯೋಗ ಸೃಷ್ಟಿ ಹೆಚ್ಚು ಆಗುವಂತೆ ಕ್ರಮಗಳನ್ನು ಕೈಗೊಳ್ಳಬಹುದು. ಕಾರ್ಮಿಕರ ಕೆಲಸ ಬೇಕಿರುವ ಉದ್ಯಮಗಳಿಗೆ ಉತ್ತೇಜನ ನೀಡಲು ಬಜೆಟ್​ನಲ್ಲಿ ಒತ್ತು ನೀಡುವ ನಿರೀಕ್ಷೆ ಇದೆ. ಜವಳಿ, ಲೆದರ್, ಆಭರಣ, ಕರಕುಶಲ ಸೆಕ್ಟರ್​ಗಳಿಗೆ ನೆರವು ಸಿಗಬಹುದು. ಈ ವಲಯದ ಮಧ್ಯಮ ಗಾತ್ರದ ಉದ್ದಿಮೆಗಳ ಪ್ರಬಲ ಸಮೂಹವನ್ನು ನಿರ್ಮಿಸುವುದು ಸರ್ಕಾರದ ಗುರಿಯಾಗಿದೆ. ಆ ನಿಟ್ಟಿನಲ್ಲಿ ಬಜೆಟ್​ನಲ್ಲಿ ಕ್ರಮ ಕೈಗೊಳ್ಳಬಹುದು. ಎಂಎಸ್​ಎಂಇಗಳಿಗೆ ಇನ್ನಷ್ಟು ಹೊಸ ಸ್ಕೀಮ್​ಗಳ ಘೋಷಣೆ ಆಗಬಹುದು.

ಭಾರತಕ್ಕೆ ಈ ಮೊದಲು ಜನಸಂಖ್ಯೆಯೇ ಆರ್ಥಿಕ ಉನ್ನತಿಗೆ ಅಡ್ಡಗಾಲಾಗಿತ್ತು. ಆರ್ಥಿಕತೆ ವೇಗವಾಗಿ ಬೆಳವಣಿಗೆ ಹೊಂದದೇ ಇರುವುದು, ಮತ್ತು ಉದ್ಯೋಗ ಸೃಷ್ಟಿ ಹೆಚ್ಚು ಆಗದೇ ಇದ್ದದ್ದು ಮಾನವ ಸಂಪನ್ಮೂಲದ ಸರಿಯಾದ ಬಳಕೆಗೆ ಅವಕಾಶ ಇರಲಿಲ್ಲ. ಈಗ ಆರ್ಥಿಕತೆ ಬೃಹತ್ತಾಗಿ ಬೆಳೆಯುತ್ತಿದೆ. ಅತಿವೇಗದ ಆರ್ಥಿಕತೆಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಬೆಳವಣಿಗೆಗೆ ಅವಕಾಶ ಹೆಚ್ಚೆಚ್ಚು ಬೇಕಿದೆ. ಈ ನಿಟ್ಟಿನಲ್ಲಿ ನೀತಿಗಳು ರೂಪಿತವಾಗಬೇಕಾಗಿದೆ.

ಇದನ್ನೂ ಓದಿ: ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ?

ಮಾನವ ಸಂಪನ್ಮೂಲ ಹೆಚ್ಚಿದ್ದು, ಅದರ ಸದ್ಬಳಕೆಗೆ ಬೇಕಾದಷ್ಟು ಅವಕಾಶಗಳಿಲ್ಲವಾದರೆ ಜನರ ಆದಾಯ ನಿಂತ ನೀರಾಗಿರುತ್ತದೆ. ಆರ್ಥಿಕತೆಯೂ ನಿಂತ ನೀರಾಗುತ್ತದೆ. ಹೀಗಾಗಿ, ಉದ್ಯೋಗ ಸೃಷ್ಟಿ ಹೆಚ್ಚಿರುವಂತಹ ಸೆಕ್ಟರ್​ಗಳು ಪ್ರಬಲವಾಗುವುದು ಅತ್ಯಗತ್ಯ. ಬಜೆಟ್​ನಲ್ಲಿ ಈ ಕ್ರಮ ತೆಗೆದುಕೊಳ್ಳಲು ಮುಂದಾಗಬಹುದು.

ಕಳೆದ ವರ್ಷದ ಬಜೆಟ್​ನಲ್ಲಿ ಕಾರ್ಮಿಕ ಸಮೃದ್ಧ ಕ್ಷೇತ್ರಗಳಿಗೆ ಹೆಚ್ಚಿನ ಹಣ ಒದಗಿಸಲಾಗಿತ್ತು. ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲಾಗಿದೆ. ಈ ಬಾರಿಯೂ ಬಜೆಟ್ ಗಮನ ಇದೇ ನಿಟ್ಟಿನಲ್ಲಿ ಇರುವ ನಿರೀಕ್ಷೆ ಇದೆ.

ಇದನ್ನೂ ಓದಿ: ಹಲ್ವಾ ಕಾರ್ಯಕ್ರಮದಲ್ಲಿ ನಿರ್ಮಲಾ ಸೀತಾರಾಮನ್ ಭಾಗಿ; ಬಜೆಟ್​ಗೆ ಮುಂಚೆ ನಡೆಯುವ ಇದರ ವಿಶೇಷತೆ ಏನು?

ಎಂಎಸ್​ಎಂಇಗಳಿಗೆ ಇನ್ನಷ್ಟು ಒತ್ತು ಕೊಡುವುದು ಉತ್ತಮ ಮಾರ್ಗ ಎನ್ನುವುದು ತಜ್ಞರ ಅನಿಸಿಕೆ. ಈ ಸಣ್ಣ ಉದ್ದಿಮೆಗಳಿಗೆ ಉತ್ತಮ ಮೂಲಸೌಕರ್ಯ, ಸುಲಭ ಸಾಲ ಲಭ್ಯತೆ ಬಹಳ ಮುಖ್ಯ. ಜಾಗತಿಕ ಸರಬರಾಜು ಸರಪಳಿಯಲ್ಲಿ ಹೆಚ್ಚೆಚ್ಚು ಗುರುತಿಸಿಕೊಳ್ಳಬೇಕಾದರೆ ಸದೃಢವಾದ ಎಂಎಸ್​ಎಂಇಗಳ ಅವಶ್ಯಕತೆ ಇದೆ. ಇವುಗಳಿಂದ ಉದ್ಯೋಗ ಸೃಷ್ಟಿಯೂ ಅಧಿಕ ಇರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!