AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಮತ್ತೊಂದು ಕಂಪನಿ ಷೇರುಪೇಟೆಗೆ: ಐಪಿಒ ಬಿಡುಗಡೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ECGC: ಕಂಪನಿಯನ್ನು ಷೇರುಪೇಟೆಯಲ್ಲಿ ಲಿಸ್ಟ್ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿರುವ ಬಗ್ಗೆ ಸಚಿವ ಪಿಯೂಷ್ ಗೋಯಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು

ಸರ್ಕಾರದ ಮತ್ತೊಂದು ಕಂಪನಿ ಷೇರುಪೇಟೆಗೆ: ಐಪಿಒ ಬಿಡುಗಡೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಪಿಯೂಷ್ ಗೋಯಲ್
TV9 Web
| Edited By: |

Updated on:Sep 29, 2021 | 4:25 PM

Share

ದೆಹಲಿ: ಕೇಂದ್ರ ಸರ್ಕಾರವು ಆರಂಭಿಕ ಸಾರ್ವಜನಿಕ ಕೊಡುಗೆ (Intial Public Offering – IPO) ಮೂಲಕ ಬಂಡವಾಳ ಹಿಂಪಡೆಯಲು ತೀರ್ಮಾನಿಸಿದೆ. ಎಕ್ಸ್​ಪೋರ್ಟ್ ಕ್ರೆಡಿಟ್ ಕಾರ್ಪೊರೇಷನ್ ಕಂಪನಿಯನ್ನು ಷೇರುಪೇಟೆಯಲ್ಲಿ ಲಿಸ್ಟ್ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿರುವ ಬಗ್ಗೆ ಸಚಿವ ಪಿಯೂಷ್ ಗೋಯಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಈ ಐಪಿಒ ಮೂಲಕ ₹ 4,400 ಕೋಟಿ ಬಂಡವಾಳ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಈ ನಿರ್ಧಾರದಿಂದ ಸುಮಾರು 59 ಲಕ್ಷ ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ. ಈ ಪೈಕಿ 2.9 ಲಕ್ಷ ಉದ್ಯೋಗಗಳು ಸಂಘಟಿತ ವಲಯದಲ್ಲಿ, ಉಳಿದವರು ಅಸಂಘಟಿತ ವಲಯಗಳಲ್ಲಿ ರೂಪುಗೊಳ್ಳಬಹುದು ಎಂದು ಆಶಿಸಲಾಗಿದೆ.

ಮುಂದಿನ ಹಣಕಾಸು ವರ್ಷದಲ್ಲಿ ಈ ಕಂಪನಿಯು ಷೇರುಪೇಟೆಯಲ್ಲಿ ವಹಿವಾಟು ಆರಂಭಿಸುವ ಸಾಧ್ಯತೆಯಿದೆ ಎಂದು ಪಿಯೂಷ್ ಗೋಯೆಲ್ ಹೇಳಿದರು. 2021-26ರ ಅವಧಿಯಲ್ಲಿ ಎಕ್ಸ್​ಪೋರ್ಟ್ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್​ಗೆ ₹ 4,400 ಕೋಟಿ ಬಂಡವಾಳ ಮರುಪೂರಣ ಮಾಡಲು ಸರ್ಕಾರ ನಿರ್ಧರಿಸಿದೆ. ಕಾರ್ಮಿಕ ಆಧರಿತ ಕೈಗಾರಿಕೆಗಳಲ್ಲಿ ರಫ್ತು ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. 2020-21ರಲ್ಲಿ ₹ 6.02 ಲಕ್ಷ ಕೋಟಿ ಮೊತ್ತದ ವಸ್ತುಗಳನ್ನು ರಫ್ತು ಮಾಡಲು ಸಂಸ್ಥೆಯು ಬೆಂಬಲ ನೀಡಿದೆ. ಎಕ್ಸ್​ಪೋರ್ಟ್ ಕ್ರೆಡಿಟ್ ಪೈಕಿ ಅರ್ಧದಷ್ಟು ಹಣಕ್ಕೆ ಇನ್ಷುರೆನ್ಸ್ ಇರುತ್ತದೆ ಎಂದು ವಿವರಿಸಿದರು.

ಎಕ್ಸ್​ಪೋರ್ಟ್​ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಕಂಪನಿಯು ಸದೃಢಗೊಳ್ಳುವುದರಿಂದ ರಫ್ತುದಾರರಿಗೆ, ಬ್ಯಾಂಕ್​ಗಳಿಗೆ ಅಗತ್ಯ ಬೆಂಬಲ ಸಿಗಲಿದೆ. ಸಂಘಟಿತ ವಲಯದಲ್ಲಿ 2.6 ಲಕ್ಷ ಉದ್ಯೋಗ ಸೇರಿದಂತೆ 59 ಲಕ್ಷ ಹೊಸ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು.

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮಾತನಾಡಿ, ಚೀನಾದಿಂದ ಆಮದಾಗುವ ಸೇಬಿನ ಮೇಲಿನ ಸುಂಕವನ್ನು ಕಡಿಮೆ ಮಾಡಿಲ್ಲ. ಸುಂಕ ಕಡಿಮೆ ಮಾಡಿದ್ದೇವೆ ಎನ್ನುವುದು ಆಧಾರ ರಹಿತ ಹೇಳಿಕೆ. ಆರ್ಥಿಕ ಮುನ್ನಡೆ ಸಾಧಿಸಲು, ಚಟುವಟಿಕೆಗಳನ್ನು ವಿಸ್ತರಿಸಲು ಭಾರತಕ್ಕೆ ಈಗ ಸಾಕಷ್ಟು ಅವಕಾಶಗಳಿವೆ. ಇದನ್ನು ಬಳಸಿಕೊಂಡು ಆರ್ಥಿಕ ಚಟುವಟಿಕೆ ವಿಸ್ತರಿಸಲು ಯತ್ನಿಸುತ್ತೇವೆ ಎಂದು ಹೇಳಿದರು.

Narendra-Modi-Piyush-Goel

ರಫ್ತು ಅಭಿವೃದ್ಧಿಗೆ ವಿವಿಧ ಯೋಜನೆಗಳು

ಬಿಸಿಯೂಟ ಯೋಜನೆಯ ಹೆಸರು ಬದಲಾವಣೆ ಪಿಎಂ ಪೋಷಣ್ ಯೋಜನೆ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯ ಸರ್ಕಾರಗಳ ಸಹಕಾರದಿಂದ ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೊಳಿಸಲಾಗುವುದು. ಇದಕ್ಕಾಗಿ ₹ 1.31 ಲಕ್ಷ ಕೋಟಿ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ. ಪಿಎಂ ಪೋಷಣ್ ಯೋಜನೆಯು ಐದು ವರ್ಷಗಳ ಅವಧಿಗೆ ಜಾರಿಯಲ್ಲಿರುತ್ತದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಯೋಜನೆಯಿಂದ ಮಕ್ಕಳ ಹಾಜರಾತಿ ಹೆಚ್ಚಾಗುತ್ತದೆ. ಪ್ರಸ್ತುತ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಇದೀಗ ಪಿಎಂ ಪೋಷಣ್ ಯೋಜನೆ ಎಂಬ ಹೊಸ ಹೆಸರಿನಿಂದ ಕರೆಯಲಾಗುತ್ತಿದೆ ಎಂದು ನುಡಿದರು.

(Union Cabinet Approves Listing of Export Credit Guarantee Corporation Ltd)

ಇದನ್ನೂ ಓದಿ: LIC IPO: ಎಲ್​ಐಸಿ ಐಪಿಒದಿಂದ ಉದ್ಯೋಗ ನಷ್ಟ, ಸಾಮಾಜಿಕ ವೆಚ್ಚ ಎಂದು ಎಚ್ಚರಿಸಿದ ಕಾರ್ಮಿಕ ಒಕ್ಕೂಟ

ಇದನ್ನೂ ಓದಿ: Paytm IPO: ಪೇಟಿಎಂ ಐಪಿಒಗೆ ತಡೆ ನೀಡುವಂತೆ ಮಾಜಿ ನಿರ್ದೇಶಕರಿಂದ ಒತ್ತಾಯ; ಒತ್ತಡದಲ್ಲಿ ಸಿಲುಕಿಕೊಂಡ ಕಂಪೆನಿ

Published On - 3:52 pm, Wed, 29 September 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ