AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gas Subsidy: ಪಿಎಂ ಉಜ್ವಲ ಫಲಾನುಭವಿಗಳಿಗೆ 300 ರೂ ಎಲ್​ಪಿಜಿ ಸಬ್ಸಿಡಿ, ಒಂದು ವರ್ಷ ಮುಂದುವರಿಕೆ

Union Cabinet Approves PM Ujjwala Yojana Gas Subsidy, India AI Mission, DA DR Hike: ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂ ಗ್ಯಾಸ್ ಸಬ್ಸಿಡಿ ಇನ್ನೂ ಒಂದು ವರ್ಷ ಮುಂದುವರಿಯಲಿದೆ. ಕೇಂದ್ರ ಸಂಪುಟ ಇದಕ್ಕೆ ಅನುಮೋದನೆ ನೀಡಿದೆ. ಸರ್ಕಾರಿ ಉದ್ಯೋಗಿಗಳು ಮತ್ತು ನಿವೃತ್ತ ನೌಕರರ ಪಿಂಚಣಿಗೆ ಡಿಎ ಮತ್ತು ಡಿಆರ್ ಅನ್ನು ಶೇ. 4ರಷ್ಟು ಹೆಚ್ಚಿಸಲು ಸಂಪುಟ ಅಸ್ತು ಎಂದಿದೆ. ಹಾಗೆಯೇ, ಭಾರತದಲ್ಲಿ ಎಐ ಕಂಪ್ಯೂಟಿಂಗ್ ಪರಿಸರ ನಿರ್ಮಿಸಲು ಅನುಕೂಲವಾಗಲೆಂದು ಐದು ವರ್ಷಗಳಿಗೆ ಇಂಡಿಯಾ ಎಐ ಮಿಷನ್​ಗೆ 10,000 ಕೋಟಿ ರೂಗೂ ಹೆಚ್ಚು ಅನುದಾನಕ್ಕೆ ಸಮ್ಮತಿಸಲಾಗಿದೆ.

Gas Subsidy: ಪಿಎಂ ಉಜ್ವಲ ಫಲಾನುಭವಿಗಳಿಗೆ 300 ರೂ ಎಲ್​ಪಿಜಿ ಸಬ್ಸಿಡಿ, ಒಂದು ವರ್ಷ ಮುಂದುವರಿಕೆ
ಎಲ್​ಪಿಜಿ ಗ್ಯಾಸ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 08, 2024 | 10:47 AM

Share

ನವದೆಹಲಿ, ಮಾರ್ಚ್ 8: ಪಿಎಂ ಉಜ್ವಲ ಯೋಜನೆಯ ಗ್ರಾಹಕರಿಗೆ ಇನ್ನೂ ಒಂದು ವರ್ಷ ಎಲ್​ಪಿಜಿ ಗ್ಯಾಸ್​ಗೆ 300 ರೂ ಸಬ್ಸಿಡಿ ಸಿಗಲಿದೆ. 2025ರ ಮಾರ್ಚ್ ತಿಂಗಳವರೆಗೆ ಫಲಾನುಭವಿಗಳಿಗೆ ಸಬ್ಸಿಡಿ ಮುಂದುವರಿಯಲಿದೆ. ಕೇಂದ್ರ ಸಂಪುಟ ಗುರುವಾರ ಉಜ್ವಲ ಯೋಜನೆ (PM Ujjwala Yojana) ಸಬ್ಸಿಡಿ ಮುಂದುವರಿಕೆಗೆ ಅನುಮೋದನೆ ನೀಡಿದೆ. ಈ ಯೋಜನೆ ಅಡಿಯಲ್ಲಿ ಪಿಎಂ ಉಜ್ವಲ ಯೋಜನೆಯ 10.27 ಕೋಟಿ ಫಲಾನುಭವಿಗಳಿಗೆ ಒಂದು ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 300 ರೂ ಸಬ್ಸಿಡಿ ಸಿಗುತ್ತದೆ. ಒಂದು ವರ್ಷದಲ್ಲಿ 12 ಎಲ್​ಪಿಜಿ ಸಿಲಿಂಡರ್​ಗಳಿಗೆ ಸಬ್ಸಿಡಿ ನೀಡಲಾಗುತ್ತದೆ. 2024-25ರ ಹಣಕಾಸು ವರ್ಷದಲ್ಲಿ ಈ ಸಬ್ಸಿಡಿಗೆ ಸರ್ಕಾರ 12,000 ಕೋಟಿ ರೂ ವ್ಯಯಿಸಲಿದೆ.

ಬಡಮಹಿಳೆಯರಿಗೆ ಸಹಾಯವಾಗಲೆಂದು 2016ರಲ್ಲಿ ಕೇಂದ್ರ ಸರ್ಕಾರ ಈ ಯೋಜನೆ ಆರಂಭಿಸಿದೆ. ಬಡವರು, ಪರಿಶಿಷ್ಟ ಜಾತಿ, ಪಂಗಡ, ಅತಿ ಹಿಂದುಳಿದವರು ಹೀಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಬಹಳ ಹಿಂದುಳಿದ ಸಮುದಾಯದ ಮಹಿಳೆಯರು ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಾಗಬಹುದು. ಈವರೆಗೆ 10 ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಗೆ ನೊಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಗಿಫ್ಟ್

ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ

ಕೇಂದ್ರ ಸಂಪುಟ ನಿನ್ನೆ (ಮಾ. 7) ಪಿಎಂ ಉಜ್ವಲ ಯೋಜನೆಯ ಸಬ್ಸಿಸಿ ಮುಂದುವರಿಕೆ ಅಷ್ಟೇ ಅಲ್ಲದೇ, ತುಟ್ಟಿಭತ್ಯೆ ಶೇ. 4ಕ್ಕೆ ಹೆಚ್ಚಳ ಹಾಗೂ ಇಂಡಿಯಾ ಎಐ ಮಿಷನ್ ಯೋಜನೆಗಳಿಗೂ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ. 4ರಷ್ಟು ಡಿಎ ಮತ್ತು ಡಿಆರ್ ಹೆಚ್ಚಳವಾಗಿದೆ. ಇದರೊಂದಿಗೆ ಒಟ್ಟು ತುಟ್ಟಿಭತ್ಯೆ ಶೇ. 50ಕ್ಕೆ ಏರಿಕೆ ಆಗಿದೆ. ಇದರ ಜೊತೆಗೆ ಸರ್ಕಾರಿ ಉದ್ಯೋಗಿಗಳಿಗೆ ಎಚ್​ಆರ್​ಎ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಮೋದಿ ತಂತ್ರಜ್ಞಾನದ ಅಳವಡಿಕೆಗೆ ಜೈ, ಕೃತಕ ಬುದ್ಧಿಮತ್ತೆ ಉತ್ತೇಜನಕ್ಕೂ ಸೈ: ಅಶ್ವಿನಿ ವೈಷ್ಣವ್

10,371 ಕೋಟಿ ರೂನ ಇಂಡಿಯಾ ಎಐ ಮಿಷನ್

ಭಾರತದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಅಳವಡಿಕೆಗೆ ಉತ್ತೇಜಿಸಲು ಸರ್ಕಾರ ಇಂಡಿಯಾ ಎಐ ಮಿಷನ್ ಆರಂಭಿಸಿದೆ. ಮುಂದಿನ ಐದು ವರ್ಷಕ್ಕೆ 10,371.92 ಕೋಟಿ ರೂ ನಿಯೋಜಿಸಿದೆ. ಭಾರತದಲ್ಲಿ ಎಐ ಕಂಪ್ಯೂಟಿಂಗ್ ಕೆಪಾಸಿಟಿ ಸ್ಥಾಪಿಸುವ ಖಾಸಗಿ ಕಂಪನಿಗಳಿಗೆ ಸರ್ಕಾರದಿಂದ ಸಹಾಯಧನ ಸಿಗುತ್ತದೆ. ಎಐ ಸ್ಟಾರ್ಟಪ್​ಗಳಿಗೂ ಈ ಯೋಜನೆಯಿಂದ ಸಹಾಯ ಸಿಗುತ್ತದೆ. ಒಟ್ಟಾರೆ ಬೃಹತ್ ಕಂಪ್ಯೂಟಿಂಗ್ ಸೌಕರ್ಯ ನಿರ್ಮಿಸಲು ಈ ನಿಧಿಯನ್ನು ಬಳಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ