AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green energy corridor: 12 ಸಾವಿರ ಕೋಟಿ ರೂಪಾಯಿಯ ಗ್ರೀನ್ ಎನರ್ಜಿ ಕಾರಿಡಾರ್​ಗೆ ಕೇಂದ್ರ ಸಂಪುಟದ ಅನುಮೋದನೆ

ಕೇಂದ್ರ ಸಚಿವ ಸಂಪುಟವು 12 ಸಾವಿರ ಕೋಟಿ ರೂಪಾಯಿಯ ಗ್ರೀನ್ ಎನರ್ಜಿ ಕಾರಿಡಾರ್​ಗೆ ಗುರುವಾರದಂದು ಅನುಮೋದನೆಯನ್ನು ನೀಡಿದೆ.

Green energy corridor: 12 ಸಾವಿರ ಕೋಟಿ ರೂಪಾಯಿಯ ಗ್ರೀನ್ ಎನರ್ಜಿ ಕಾರಿಡಾರ್​ಗೆ ಕೇಂದ್ರ ಸಂಪುಟದ ಅನುಮೋದನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 06, 2022 | 5:59 PM

Share

ಕೇಂದ್ರ ಸಚಿವ ಸಂಪುಟವು 12,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಂತರ ರಾಜ್ಯ ಪ್ರಸರಣ ವ್ಯವಸ್ಥೆಯ ಎರಡನೇ ಹಂತದ ಗ್ರೀನ್ ಎನರ್ಜಿ ಕಾರಿಡಾರ್ ಅನ್ನು ಅನುಮೋದಿಸಿದೆ. ಈ ಯೋಜನೆಯು ದೇಶದಾದ್ಯಂತ 10,750 ಕಿಲೋಮೀಟರ್ ಉದ್ದದ ಸರ್ಕ್ಯೂಟ್ ಟ್ರಾನ್ಸ್‌ಮಿಷನ್ ಲೈನ್‌ಗಳನ್ನು ನಿರ್ಮಿಸುವುತ್ತದೆ ಮತ್ತು 20 GW (ಗಿಗಾವ್ಯಾಟ್) ವಿದ್ಯುತ್ ತೆರವು ಮಾಡಲು ಸಹಾಯ ಮಾಡುತ್ತದೆ. ತಮಿಳುನಾಡು, ಗುಜರಾತ್, ಕೇರಳ, ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಏಳು ರಾಜ್ಯಗಳು 2025-26ರವರೆಗೆ ಐದು ವರ್ಷಗಳ ಕಾಲ ಈ ಯೋಜನೆಯಿಂದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

10,142 ಕೋಟಿ ರೂಪಾಯಿಗಳ ಈ ಹಂತವು ಶೇ 80ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. ಈ ಯೋಜನೆಯು 2030ರ ವೇಳೆಗೆ 500 GW ನವೀಕರಿಸಬಹುದಾದ (ರಿನೀವಬಲ್) ಇಂಧನವನ್ನು ಉತ್ಪಾದಿಸುವ ಭಾರತದ ಯೋಜನೆಗಳ ನಿರ್ಣಾಯಕ ಅಂಶವಾಗಿದೆ. ಜರ್ಮನ್ ಸರ್ಕಾರಿ ಸ್ವಾಮ್ಯದ ಹೂಡಿಕೆ ಮತ್ತು ಅಭಿವೃದ್ಧಿ ಬ್ಯಾಂಕ್ ಗುಂಪು KfW ಯೋಜನೆಗೆ ಸಾಲಗಳನ್ನು ಒದಗಿಸುತ್ತದೆ. ಇದು ವಿಶ್ವದ ಅತಿದೊಡ್ಡ ರಾಷ್ಟ್ರೀಯ ಅಭಿವೃದ್ಧಿ ಬ್ಯಾಂಕ್ ಆಗಿದೆ.

ನೇಪಾಳವನ್ನು ಸಂಪರ್ಕಿಸುವ ಸೇತುವೆ ನೇಪಾಳದ ಗಡಿಯಲ್ಲಿ ಮಹಾಕಾಳಿ ನದಿಗೆ ಸೇತುವೆ ನಿರ್ಮಾಣಕ್ಕೂ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉತ್ತರಾಖಂಡದ ಎತ್ತರದ ಧಾರ್ಚುಲಾ ಪ್ರದೇಶದಲ್ಲಿ ನಿರ್ಮಾಣ ಆಗಲಿರುವ ಈ ಸೇತುವೆಯು ಅಂತರಾಷ್ಟ್ರೀಯ ಗಡಿಯಾಗಿ ಕಾರ್ಯ ನಿರ್ವಹಿಸುವ ನದಿಯ ಎರಡೂ ಬದಿಗಳಲ್ಲಿ ವಾಸಿಸುವ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಸದ್ಯಕ್ಕೆ, ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಧಾರ್ಚುಲಾ ಪಟ್ಟಣವನ್ನು ನೇಪಾಳದ ಅದೇ ಹೆಸರಿನ ನಗರದೊಂದಿಗೆ ಸಂಪರ್ಕಿಸುವ ಹಳೆಯ ಸೇತುವೆ ಇದೆ.

ಇದನ್ನೂ ಓದಿ: PM MITRA ₹4,445 ಕೋಟಿ ವೆಚ್ಚದಲ್ಲಿ 7 ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಒಪ್ಪಿಗೆ

Published On - 5:57 pm, Thu, 6 January 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ