AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಮತ್ತು ರಾಜ್ಯಗಳಿಗೆ ತೆರಿಗೆ ಹಂಚಿಕೆ ಮಾಡುವ 16ನೇ ಹಣಕಾಸು ಆಯೋಗದ ನಿಬಂಧನೆಗಳಿಗೆ ಕ್ಯಾಬಿನೆಟ್ ಅನುಮೋದನೆ

16th Finance commission: ಪ್ರಧಾನಿ ನೇತೃತ್ವದ ಕೇಂದ್ರ ಸಂಪುಟವು 16ನೇ ಹಣಕಾಸು ಆಯೋಗದ ಟರ್ಮ್ಸ್ ಆಫ್ ರೆಫರೆನ್ಸ್​ಗೆ ಅನುಮೋದನೆ ನೀಡಿದೆ. ದೇಶಾದ್ಯಂತ ಸಿಕ್ಕಿದ ತೆರಿಗೆ ಆದಾಯವನ್ನು ಕೇಂದ್ರ ಹಾಗೂ ರಾಜ್ಯಗಳಿಗೆ ಹೇಗೆ ಹಂಚಿಕೆ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ವಿಚಾರಗಳಲ್ಲಿ ಈ ಆಯೋಗ ಶಿಫಾರಸು ಮಾಡಬಹುದು. 2026ರ ಏಪ್ರಿಲ್ 1ರಿಂದ ಆರಂಭವಾಗಿ 5 ವರ್ಷ ಕಾಲ 16ನೇ ಹಣಕಾಸು ಆಯೋಗದ ನಿಬಂಧನೆಗಳು ಅಥವಾ ಶಿಫಾರಸುಗಳು ಮಾನ್ಯವಾಗಿರುತ್ತವೆ.

ಕೇಂದ್ರ ಮತ್ತು ರಾಜ್ಯಗಳಿಗೆ ತೆರಿಗೆ ಹಂಚಿಕೆ ಮಾಡುವ 16ನೇ ಹಣಕಾಸು ಆಯೋಗದ ನಿಬಂಧನೆಗಳಿಗೆ ಕ್ಯಾಬಿನೆಟ್ ಅನುಮೋದನೆ
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 29, 2023 | 5:39 PM

Share

ನವದೆಹಲಿ, ನವೆಂಬರ್ 29: ಮಹತ್ವದ ಹೆಜ್ಜೆಯಲ್ಲಿ 16ನೇ ಹಣಕಾಸು ಆಯೋಗದ ನಿಬಂಧನೆಗಳಿಗೆ (Terms of Reference for 16th Finance Commission) ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಇದೂ ಸೇರಿದಂತೆ ವಿವಿಧ ಯೋಜನೆ ಮತ್ತು ಪ್ರಸ್ತಾಪಗಳಿಗೆ ಸಮ್ಮತಿ ನೀಡಲಾಗಿದೆ. ಮುಂದೆ ಈ ಸಂಬಂಧ ಅಧಿಸೂಚನೆ ಹೊರಡಿಸಿದ ಬಳಿಕ ಈ 16ನೇ ಹಣಕಾಸು ಆಯೋಗ ಶಿಫಾರಸುಗಳನ್ನು (recommendations) ಮಾಡಬಹುದು. 2026ರ ಏಪ್ರಿಲ್ 1ರಿಂದ ಆರಂಭವಾಗಿ ಐದು ವರ್ಷ ಅವಧಿಗೆ ಪ್ರಧಾನಿ ಅನುಮೋದನೆಗೆ ಬದ್ಧವಾಗಿ ಈ ಆಯೋಗದ ಶಿಫಾರಸುಗಳು ಮಾನ್ಯವಾಗಿರುತ್ತವೆ.

ಸದ್ಯ 15ನೇ ಹಣಕಾಸು ಆಯೋಗದ ನಿಯಮಗಳು 2025-26ರ ಹಣಕಾಸು ವರ್ಷದವರೆಗೂ ಮಾನ್ಯವಾಗಿರುತ್ತವೆ. ಅದಾದ ಬಳಿಕ 16ನೇ ಹಣಕಾಸು ಆಯೋಗದ ಶಿಫಾರಸುಗಳು ಗಣನೆಗೆ ಬರುತ್ತವೆ. ಹಣಕಾಸು ಆಯೋಗವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ತೆರಿಗೆ ಆದಾಯದಲ್ಲಿ ಎಷ್ಟು ಪಾಲು ಹಂಚಿಕೆ ಮಾಡಬೇಕು ಎಂಬುದನ್ನು ನಿರ್ಧರಿಸುತ್ತದೆ.

ಇದನ್ನೂ ಓದಿ: 81 ಕೋಟಿ ಬಡವರಿಗೆ ಉಚಿತ ಪಡಿತರ ವಿತರಣೆ; 5 ವರ್ಷ ಯೋಜನೆ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ

16ನೇ ಹಣಕಾಸು ಆಯೋಗದ ನಿಬಂಧನೆಗಳೇನು?

ತೆರಿಗೆ ಆದಾಯವನ್ನು ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಂಚಿಕೆ ಮಾಡಲು ಸೂತ್ರ ರೂಪಿಸುವುದು ಸೇರಿದಂತೆ ಕೆಲವೊಂದಿಷ್ಟು ಸಂಗತಿಗಳಲ್ಲಿ ಶಿಫಾರಸು ಮಾಡಲು 15ನೇ ಹಣಕಾಸು ಆಯೋಗವು ಅಧಿಕಾರ ಹೊಂದಿರುತ್ತದೆ. ಆದರೆ, ಆಯೋಗದ ಶಿಫಾರಸು ಜಾರಿಯಾಗಬೇಕಾದರೆ ಪ್ರಧಾನಿಯ ಅನುಮೋದನೆ ಬೇಕಾಗುತ್ತದೆ.

ಇದನ್ನೂ ಓದಿ: Jeevan Utsav: ಎಲ್​ಐಸಿಯಿಂದ ಇಂದು ಹೊಸ ಜೀವನ್ ಉತ್ಸವ್ ಪಾಲಿಸಿ ಬಿಡುಗಡೆ; ಇದರ ವಿಶೇಷತೆಗಳೇನು?

ಸಾಮಾನ್ಯವಾಗಿ ಹಣಕಾಸು ಆಯೋಗವು ವರದಿ ಪ್ರಸ್ತುತಪಡಿಸಲು 2 ವರ್ಷ ಬೇಕಾಗುತ್ತದೆ. ಇಂದು ಸುದ್ದಿಗೋಷ್ಠಿಯಲ್ಲಿ ಸಚಿವ ಅನುರಾಗ್ ಠಾಕೂರ್ ನೀಡಿದ ಮಾಹಿತಿ ಪ್ರಕಾರ 16ನೇ ಹಣಕಾಸು ಆಯೋಗವು ತನ್ನ ವರದಿಯನ್ನು 2025ರ ಅಕ್ಟೋಬರ್​ನೊಳಗೆ ಸಲ್ಲಿಸಲಿದೆ. ಅದು ಮಾಡುವ ಶಿಫಾರಸುಗಳು 2026ರ ಏಪ್ರಿಲ್​ನಿಂದ ಚಾಲನೆಗೆ ಬರಲಿದ್ದು ಅಲ್ಲಿಂದ 5 ವರ್ಷ ಮಾನ್ಯವಾಗಿರುತ್ತವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:36 pm, Wed, 29 November 23

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್