AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಚಿವ ಸಂಪುಟವು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 21, 2021 | 9:12 PM

Share

2021-22ರ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದ್ದ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿ) ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಂಸತ್ತಿಗೆ ಮಂಗಳವಾರ ತಿಳಿಸಲಾಗಿದೆ. 2021-22ರ ಹಣಕಾಸು ವರ್ಷದ ಕೇಂದ್ರ ಬಜೆಟ್‌ನಲ್ಲಿ ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯತಂತ್ರ ಹಿಂತೆಗೆತ ನೀತಿಯನ್ನು ಅನುಮೋದಿಸುವ ಉದ್ದೇಶವನ್ನು ಸರ್ಕಾರ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಖಾಸಗಿ ಬಂಡವಾಳ, ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯನ್ನು ಸಕ್ರಿಯಗೊಳಿಸುವುದು ನೀತಿಯ ಉದ್ದೇಶ ಒಳಗೊಂಡಿದೆ ಎಂದು ಸಚಿವೆ ಹೇಳಿದ್ದಾರೆ.

“ಹೂಡಿಕೆ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಗಣನೆಯನ್ನು ಈ ಉದ್ದೇಶಕ್ಕಾಗಿ ಗೊತ್ತುಪಡಿಸಿದ ಸಂಪುಟ ಸಮಿತಿಗೆ/ ಸಂಪುಟಕ್ಕೆ ವಹಿಸಲಾಗಿದೆ. ಸಂಪುಟ ಸಮಿತಿ/ ಸಂಪುಟ ಈ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಂಡಿಲ್ಲ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯನ್ನು ಡಿಸೆಂಬರ್ 23ರಂದು ಕೊನೆಗೊಳ್ಳುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಪಟ್ಟಿ ಮಾಡಲಾಗಿದೆ.

ಇದನ್ನೂ ಓದಿ: Bank strike: ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ಡಿ. 16, 17ಕ್ಕೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ

Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ